ಲಕ್ನೋ: ಗಣೇಶ ಚತುರ್ಥಿ ಆಚರಣೆಯಲ್ಲಿ ಹನುಮಂತನ ವೇಷ ಧರಿಸಿ ನೃತ್ಯ ಪ್ರದರ್ಶನ ಮಾಡುತ್ತಿದ್ದ ಕಲಾವಿದನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಮೈನ್ಪುರಿದಲ್ಲಿ ನಡೆದಿದೆ.
ಮೃತರನ್ನು ಹನುಮಂತರನ ವೇಷ ಧರಿಸಿದ್ದ ರವಿ ಶರ್ಮಾ ಎಂದು ಗುರುತಿಸಲಾಗಿದೆ. ಈತ ಉತ್ತರಪ್ರದೇಶದ ಮೈನ್ಪುರಿಯಲ್ಲಿ ಪ್ರದರ್ಶನ ನೀಡುತ್ತಿದ್ದ ವೇಳೆ ಮೃತಪಟ್ಟಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
हनुमान जी का किरदार निभा रहे रवि शर्मा #मैनपुरी में गणेश पंडाल में नाच रहे थे
अचानक ज़मीन पर गिरे…..
जिला अस्पताल में डॉक्टर ने रवि को मृत घोषित कर दिया
जीवन में इससे बड़ी अनिश्चितता तो कुछ भी नहीं pic.twitter.com/cAaZTUDG7l
— Khanzar Sutra ‘खंजर सूत्र’ (@khanzarsutra) September 4, 2022
ರವಿ ಶರ್ಮಾ ಅವರು ಮೈನ್ಪುರಿಯ ಕೊತ್ವಾಲಿ ಪ್ರದೇಶದ ಶಿವ ದೇವಾಲಯದಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಬಂದಿದ್ದ ಭಜನಾ ತಂಡದ ಭಾಗವಾಗಿದ್ದರು. ಇದನ್ನೂ ಓದಿ: ತಮ್ಮ ಮಗುವಿಗೆ ಭಾರತೀಯ ಖಾದ್ಯದ ಹೆಸರಿಟ್ಟ ವಿದೇಶಿ ದಂಪತಿ
ನೃತ್ಯ ಪ್ರದರ್ಶನದ ಸಮಯದಲ್ಲಿ ಅವರು ಹನುಮಾನ್ ವೇಷ ಧರಿಸಿ ವೇದಿಕೆಯ ಮೇಲೆ ಕುಸಿದುಬಿದ್ದರು. ಕೆಲ ನಿಮಿಷಗಳ ಕಾಲ ಅಲ್ಲಿ ನರೆದಿದ್ದ ಪ್ರೇಕ್ಷಕರಿಗೆ ಅವರು ಕುಸಿದು ಬಿದ್ದಿದ್ದಾರೆ ಎಂದೇ ತಿಳಿದಿರಲಿಲ್ಲ. ಬದಲಿಗೆ ಪ್ರದರ್ಶನ ನೀಡುತ್ತಿದ್ದಾರೆ ಎಂದು ಕೊಂಡಿದ್ದರು. ಇದಾದ ನಂತರ ಅವರನ್ನು ಮೈನ್ಪುರಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ರವಿ ಶರ್ಮಾ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಜಂಗುಳಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್ ಅಟ್ಯಾಕ್