Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ಬಿಜೆಪಿಗೆ ಎಲ್ಲಾ ವರ್ಗದವರ ಬೆಂಬಲ: ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಾಂಗ್ರೆಸ್ ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ಬಿಜೆಪಿಗೆ ಎಲ್ಲಾ ವರ್ಗದವರ ಬೆಂಬಲ: ಸಿಎಂ ಬೊಮ್ಮಾಯಿ

Belgaum

ಕಾಂಗ್ರೆಸ್ ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ಬಿಜೆಪಿಗೆ ಎಲ್ಲಾ ವರ್ಗದವರ ಬೆಂಬಲ: ಸಿಎಂ ಬೊಮ್ಮಾಯಿ

Public TV
Last updated: December 7, 2021 9:49 pm
Public TV
Share
2 Min Read
CM Basavaraja Bommai
SHARE

ಬೆಳಗಾವಿ: ಕಾಂಗ್ರೆಸ್ ನವರು ಕೆಳಮಟ್ಟದ ಮಾತುಗಳನ್ನಾಡುತ್ತಾ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣಾ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ತಮ್ಮ ಅಧಿಕಾರಾವಧಿಯಲ್ಲಿ ಸಾಧಿಸಲಾಗದ ಅಭಿವೃದ್ಧಿಯನ್ನು ಮರೆಮಾಚಿ ಈ ಚುನಾವಣೆಯ ವ್ಯಾಖ್ಯಾನವನ್ನೇ ಬದಲಾಯಿಸುವ ಕೆಲಸವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ. ಅವರ ಈ ಕೃತ್ಯವನ್ನು ನಾವು ಕಡೆಗಣಿಸಿ ನಮ್ಮ ಪಕ್ಷದ ಸಂಘಟನೆಯನ್ನು ಬಲಪಡಿಸಿ ವಿಧಾನ ಪರಿಷತ್ ಚುನಾವಣೆಯ ಗೆಲುವಿಗಾಗಿ ದುಡಿಯಬೇಕಿದೆ ಎಂದರು. ಇದನ್ನೂ ಓದಿ: ಗುಡ್‌ನ್ಯೂಸ್‌ – ಇಳಿಯಲಿದೆ ಎಲ್‍ಪಿಜಿ ಸಿಲಿಂಡರ್ ತೂಕ

ಕರ್ನಾಟಕದ ವಿಧಾನ‌ ಪರಿಷತ್ ಗೆ ನಡೆಯುತ್ತಿರುವ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಇಂದು ಗದಗ ನಲ್ಲಿ ನಡೆದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಪಕ್ಷದ ಅಭ್ಯರ್ಥಿಯಾದ ಶ್ರೀ ಪ್ರದೀಪ ಶೆಟ್ಟರ್ ಅವರ ಪರ ಮತ ಯಾಚಿಸಲಾಯಿತು. @JagadishShettar, @CCPatilBJP, @shivkumarudasi, ಶಾಸಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. pic.twitter.com/StUp1vhZF1

— Basavaraj S Bommai (@BSBommai) December 6, 2021

ಬಿಜೆಪಿ ಸಂಘಟಿತವಾಗಿದೆ
ಭಾರತೀಯ ಜನತಾ ಪಕ್ಷ ಸಂಘಟಿತವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಹತಾಶರಾಗಿರುವುದು ಅವರ ಭಾಷೆಯಿಂದ ಸ್ಪಷ್ಟವಾಗುತ್ತಿದೆ. ತಮ್ಮ ಸ್ಥಾನ ಹಾಗೂ ಘನತೆಗೆ ತಕ್ಕಂತೆ ಮಾತನಾಡದೇ ಮನಸೋ ಇಚ್ಛೆ ಮಾತನಾಡುತ್ತಾರೆ. ಮನುಷ್ಯ ಹತಾಶರಾಗಿ ನಿರಾಶೆಯಾದಾಗ ಈ ರೀತಿ ಮಾತನಾಡುವುದು ಸಹಜ. ನಮಗೆ ಇಂತಹ ಭಾಷೆಯ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕರಿಂದ ಯಾವುದೇ ಸರ್ಟಿಫಿಕೇಟ್ ಬೇಕಾಗಿಲ್ಲ. ನಮಗೆ ಸರ್ಟಿಫಿಕೇಟ್ ಕೊಡುವವರು ಬೆಳಗಾವಿಯ ಮಹಾಜನತೆ. ನಮಗೆ ಪ್ರೀತಿ ವಿಶ್ವಾಸವನ್ನು ತೋರುವ ಜೊತೆಗೆ ನಮ್ಮಿಂದ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ. ಬಿಜೆಪಿ ಪಕ್ಷ ಅವರ ಸಮಸ್ಯೆಗಳನ್ನು ದೂರ ಮಾಡುತ್ತದೆ ಎಂಬ ವಿಶ್ವಾಸ ಅವರಿಗಿದೆ ಎಂದರು. ಇದನ್ನೂ ಓದಿ: ಕೆಂಪು ಟೋಪಿ ಧರಿಸಿದವರು ಉತ್ತರಪ್ರದೇಶಕ್ಕೆ ಅಪಾಯಕಾರಿ: ಮೋದಿ

ತಳಹಂತದಲ್ಲಿ ಗ್ರಾಮ ಪಂಚಾಯತಿಯ ಮಟ್ಟದಲ್ಲಿ ಜನರು ಪಕ್ಷದ ಪರವಾಗಿದ್ದಾರೆ ಎನ್ನುವುದಕ್ಕೆ ಮಹಂತೇಶ್ ಕವಟಗಿಮಠ ಅವರು ಅಧಿಕ ಮತಗಳ ಅಂತರದಿಂದ ಗೆಲ್ಲಬೇಕು. ಇದು ಮುಂದೆ ನಡೆಯುವ ಜಿಲ್ಲಾ ಪಂಚಾಯತ್, ತಾಲೂಕು  ಪಂಚಾಯತ್‍ಗಳ ಪದಾಧಿಕಾರಿಗಳ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದರು.

Congress

ಎಲ್ಲ ವರ್ಗದವರ ಬೆಂಬಲವಿದೆ:
ಶಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿಯೂ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದು ಸರ್ವಸ್ವತಂತ್ರವಾಗಿ ಆಡಳಿತ ಮಾಡುತ್ತಿದ್ದೇವೆ. ಸಮಾಜದ ಎಲ್ಲಾ ವರ್ಗದ ಜನ, ಎಲ್ಲ ಭಾಷಿಕರು ಭಾಜಪ ಕ್ಕೆ ಬೆಂಬಲ ನೀಡುತ್ತಿರುವುದು ಗಮನಾರ್ಹ. ಈಗ ನಡೆಯುತ್ತಿರುವ ಚುನಾವಣೆ ಚುನಾಯಿತರಾಗಿರುವವರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಚುನಾವಣೆ. ಪದಾಧಿಕಾರಿಗಳ ಶ್ರಮದಿಂದ ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯಲ್ಲಿ ಆಯ್ಕೆಯಾಗಿದ್ದಾರೆ. ನಿಮ್ಮ ಸಂಪರ್ಕದಲ್ಲಿರುತ್ತಾರೆ. ನೀವು ಅವರ ಮನಸ್ಸನ್ನು ಗೆದ್ದು ಭಾರತೀಯ ಜನತಾ ಪಕ್ಷ ಅಭ್ಯರ್ಥಿಯಾದ ಮಹಂತೇಶ ಕವಟಗಿಮಠ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತವನ್ನು ಕೊಡಿಸಿ ಆರಿಸಬೇಕು ಎಂದು ಮನವಿ ಮಾಡಿದರು.

ಶಾಸಕರು ಪಂಚಾಯಿತಿಯ ನಿಟಕ ಸಂಪರ್ಕದಲ್ಲಿರುವವರು, ಅದರ ಅಭಿವೃದ್ಧಿಗೆ ಸತತ ಪ್ರಯತ್ನ ಮಾಡುವವರು ನಿಮ್ಮ ಸಂಪರ್ಕದಲ್ಲಿ ಎಲ್ಲಾ ಸದಸ್ಯರಿರುತ್ತಾರೆ. ಯಾವುದೇ ಪಕ್ಷದಿಂದ ಆಯ್ಕೆಯಾಗಿದ್ದರೂ, ನಿಮ್ಮ ಪ್ರಭಾವ ಎಲ್ಲ ಸದಸ್ಯರ ಮೇಲೂ ಇರುತ್ತದೆ. ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಬೆಳಗಾವಿ ದೊಡ್ಡ ಬಲ ನೀಡಿದೆ
ಬೆಳಗಾವಿ ಬಹಳ ವಿಶೇಷ ಹಾಗೂ ಮುಖ್ಯವಾದ ಜಿಲ್ಲೆ. ಬೆಳಗಾವಿ ಎಲ್ಲಾ ಸಂದರ್ಭಗಳಲ್ಲಿಯೂ ಬಿಜೆಪಿಗೆ ದೊಡ್ಡ ಬಲವನ್ನು ಕೊಟ್ಟಿದೆ. ಅತಿ ಹೆಚ್ಚು ಶಾಸಕರನ್ನು ಕರ್ನಾಟಕದಲ್ಲಿ ಬೆಳಗಾವಿಯಿಂದ ಆಯ್ಕೆಯಾಗಿದ್ದಾರೆ. ನಮ್ಮ ವಿರೋಧ ಪಕ್ಷದಲ್ಲಿ ಇರುವವರ ಅತಿ ಹೆಚ್ಚಿನ ಕೊಡುಗೆಯೂ ಬೆಳಗಾವಿ ಜಿಲ್ಲೆಯಿಂದ ಬಂದಿದೆ. ರಾಜ್ಯ ಸಭಾ ಸದಸ್ಯರು, ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನೇ ಜನ ಆಯ್ಕೆ ಮಾಡಿದ್ದಾರೆ. ವಿಜಯದ ಪರಂಪರೆ ಬೆಳಗಾವಿಯಲ್ಲಿ ಭಾಜಪಕ್ಕೆ ಸದಾ ಕಾಲವಿದ್ದು, ಅದಕ್ಕೆ ಕಾರಣೀಭೂತರು ಬೆಳಗಾವಿಯ ಮಹಾಜನತೆ ಹಾಗೂ ನಮ್ಮೆಲ್ಲಾ ಕಾರ್ಯಕರ್ತರು ಮತ್ತು ಪದಾಧಿಕಾರಿ ಬಂಧುಗಳು ಎಂದರು.

TAGGED:belagaviBommaielectionvidhan parishadಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಬೆಳಗಾವಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
43 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
3 hours ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?