Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪಗೆ ಶರಣಾದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಡಿಯೂರಪ್ಪಗೆ ಶರಣಾದ ಬಿಜೆಪಿ

Bengaluru City

ಯಡಿಯೂರಪ್ಪಗೆ ಶರಣಾದ ಬಿಜೆಪಿ

Public TV
Last updated: May 17, 2022 2:05 pm
Public TV
Share
4 Min Read
CM Yediyurppa 2
SHARE

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ಅಂತ ವರಿಷ್ಠರಿಗೆ ಮನವರಿಕೆಯಾಗಿದೆ. ಅವರ ಬೇಡಿಕೆಯಂತೆ ಪುತ್ರನಿಗೆ ಸೂಕ್ತ ಸ್ಥಾನಮಾನ ನೀಡಲು ಹೈಕಮಾಂಡ್ ಒಲವು ತೋರಿದೆ. ಈ ಮೂಲಕ ಹಲವು ದಶಕಗಳಿಂದ ಬಿಎಸ್‌ವೈ ಹಿಡಿತದಲ್ಲಿದ್ದು ಕೈ ತಪ್ಪಿ ಹೋಗಲಿದೆ ಎನ್ನುವಷ್ಟರಲ್ಲೇ ಮತ್ತೆ ರಾಜ್ಯ ಬಿಜೆಪಿ ಅವರ ತೆಕ್ಕೆಗೆ ಜಾರತೊಡಗಿದೆ. ಹೌದು. ವಿಜಯೇಂದ್ರ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಪರಿಷತ್‌ಗೆ ಶಿಫಾರಸ್ಸು ಮಾಡುವುದರೊಂದಿಗೆ ಪಕ್ಷ ಯಡಿಯೂರಪ್ಪ ಅವರಿಗೆ ಶರಣಾಗಿದೆ. ವರಿಷ್ಠರು ಒಲವು ತೋರಿದ ಬಳಿಕವಷ್ಟೇ ಕೋರ್ ಕಮಿಟಿ ಈ ನಿರ್ಧಾರ ಕೈಗೊಂಡಿದೆ.

BADRU JUST POLITICS

ರಾಜ್ಯದಲ್ಲಿ ದಶಕಗಳ ಕಾಲ ಓಡಾಡಿ, ಸಂಘಟನೆ ಮಾಡಿ ಪಕ್ಷವನ್ನು ಶೂನ್ಯದಿಂದ ಅಧಿಕಾರದ ಸನಿಹಕ್ಕೆ ತರುವಲ್ಲಿ ಬಿಎಸ್‌ವೈ ಪಾತ್ರ ಅನನ್ಯ. ಅಧಿಕಾರಕ್ಕೆ ತರುವುದರ ಜೊತೆಜೊತೆಗೆ ಪಕ್ಷದಲ್ಲಿಯೂ ಹಿಡಿತ ಸಾಧಿಸುವಲ್ಲಿ ಅವರು ಯಶಸ್ವಿಯಾಗಿದ್ದರು. ವರಿಷ್ಠರು ಮತ್ತು ಪಕ್ಷದೊಳಗಿನ ಹಿತಶತ್ರುಗಳ ಚಿತಾವಣೆಗೆ ಬೇಸತ್ತು 2013 ರಲ್ಲಿ ಪಕ್ಷ ತೊರೆದು, ಬೇರೆ ಪಕ್ಷ ಕಟ್ಟಿ ಚುನಾವಣೆಯಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದರೂ ಬಿಜೆಪಿಯನ್ನು ಮಟ್ಟ ಹಾಕುವಲ್ಲಿ ಸಫಲರಾಗಿದ್ದರು. ಅವರ ಹೊರತಾಗಿ ಪಕ್ಷ ಅಧಿಕಾರದ ಸನಿಹಕ್ಕೂ ಬರಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದ್ದರು. ಒಂದೇ ವರ್ಷದಲ್ಲಿ ಮಾತೃಪಕ್ಷಕ್ಕೆ ಮರಳಿ, ಸಂಸದರಾಗಿ ಬಳಿಕ ಪಕ್ಷದ ಚುಕ್ಕಾಣಿ ಹಿಡಿದು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಮತ್ತೆ ಅಧಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿದ್ದು ಇತಿಹಾಸ.

shivamogga bs yediyurappa 2 1 e1630250742959

ಹಾಗೇ ನೋಡಿದರೆ 2008 ರಲ್ಲಿ ವಚನಭ್ರಷ್ಟತೆಯ ಸಹಾನುಭೂತಿ ಪಡೆದು ತಮ್ಮ ಸಮುದಾಯದ ಭಾರೀ ಬೆಂಬಲದೊಂದಿಗೆ ಚುನಾವಣೆ ಎದುರಿಸಿದರೂ ಬಿಜೆಪಿ ಸರಳ ಬಹುಮತ ಪಡೆಯಲಾಗಲಿಲ್ಲ. ಆದರೂ ಪಕ್ಷೇತರರ ನೆರವಿನಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಅದಾದ ಬಳಿಕವಂತೂ ಪಕ್ಷದಲ್ಲಿ ಅವರ ಹಿಡಿತ ಭದ್ರವಾಗಿ ಪ್ರಶ್ನಾತೀತ ನಾಯರಾಗಿ ನೆಲೆಯೂರಿದರು. ವೀರಶೈವ ಲಿಂಗಾಯತ ಸಮುದಾಯದ ಐಕಾನ್ ಆಗಿ ದೊಡ್ಡ ಸಮುದಾಯದ ಬಲದ ಜೊತೆಗೆ ಇನ್ನಿತರ ಹಲವು ವರ್ಗಗಳ ಒಡನಾಟ ಬೆಂಬಲದಿಂದ ಅವರ ಶಕ್ತಿ ದ್ವಿಗುಣವಾಯಿತು. 2018 ರಲ್ಲಿ ಮತ್ತೆ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಬಹುಮತವಿಲ್ಲದಿದ್ದರೂ, 2019 ರ ವೇಳೆಗೆ ಆಪರೇಷನ್ ಕಮಲದ ಮೂಲಕ ಗದ್ದುಗೆ ಏರಿದ್ದು ಇತಿಹಾಸ. 75 ವರ್ಷಕ್ಕಿಂತ ಹಿರಿಯರನ್ನು ಅಧಿಕಾರದಿಂದ ಹೊರಗಿಡುವ ಪಕ್ಷದ ಅಲಿಖಿತ ನಿಯಮ ಕೂಡ ಇವರಿಗೆ ಅನ್ವಯವಾಗಲಿಲ್ಲ. ಪಕ್ಷದ ಘಟಾನುಘಟಿ ನಾಯರಾದ ಎಲ್ ಕೆ ಅಡ್ವಾಣಿ, ಮುರಳಿಮನೋಹರ್ ಜೋಷಿ, ಸುಮಿತ್ರಾ ಮಹಾಜನ್ ಮೊದಲಾದವರಿಗೆ ಅನ್ವಯವಾದ ಈ ನಿಯಮ ಬಿಎಸ್‌ವೈ  ಮಟ್ಟಿಗೆ ಕಾರ್ಯಗತವಾಗಲಿಲ್ಲ. ಇದು ಅವರು ರಾಜ್ಯ ಬಿಜೆಪಿಯ ಮಟ್ಟಿಗೆ ಎಷ್ಟು ಪ್ರಭಾವಿ ಎಂಬುದನ್ನು ತೋರಿಸಿ ಕೊಟ್ಟಿತ್ತು. ಅದರ ಪರಿಣಾಮವೇ ಅವರನ್ನು ಮುಟ್ಟುವ ಎದೆಗಾರಿಕೆ ವರಿಷ್ಠರಿಗೆ ಇರಲಿಲ್ಲ ಎನ್ನುವುದು ವಾಸ್ತವ. ಯಡಿಯೂರಪ್ಪ ಅವರ ವಿರೋಧ ಕಟ್ಟಿಕೊಂಡು ರಾಜ್ಯದಲ್ಲಿ ಪಕ್ಷದ ನೆಲೆ ವಿಸ್ತರಿಸುವುದು ಅಸಾಧ್ಯ ಎಂಬ ಅರಿವು ವರಿಷ್ಠರಿಗೆ ಇತ್ತು. ಹಾಗಾಗಿಯೇ ಅವರ ಪದಚ್ಯುತಿ ಪ್ರಕ್ರಿಯೆ ವಿಳಂಬವಾಯಿತು.

bjp meeting bs yediyurppa basvaraj bommai nalin kumar kateel

ಯಡಿಯೂರಪ್ಪ ಮುಂದಿಟ್ಟ ಷರತ್ತುಗಳನ್ನು ಒಪ್ಪಿದ ಹೈಕಮಾಂಡ್ ನಾಯಕರು, ತಮ್ಮ ಪಟ್ಟುಗಳನ್ನು ಉಪಯೋಗಿಸಿ ಜಾಣತನದಿಂದ ಕೊನೆಗೂ ಅವರ ಮನವೊಲಿಸಿ ಸಿಎಂ ಗಾದಿಯಿಂದ ಇಳಿಸಿದರು. ಪುತ್ರ ವಿಜಯೇಂದ್ರಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಕೊಡಿಸಿ ಭವಿಷ್ಯವನ್ನು ಭದ್ರಗೊಳಿಸಬೇಕೆಂಬುದು ಮಾತ್ರ ಅವರ ಬೇಡಿಕೆಯಾಗಿತ್ತು.

ಸದ್ಯ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡು ಹೈಕಮಾಂಡ್ ಬೇರೆ ಲೆಕ್ಕಾಚಾರದಲ್ಲಿತ್ತು. ಪಕ್ಷವನ್ನು ವ್ಯಕ್ತಿಯೊಬ್ಬರ ಅವಲಂಬನೆಯಿಂದ ಹೊರತಂದು, ಸಂಘಟನೆ ಮೂಲಕವೇ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶ ವರಿಷ್ಠರದ್ದಾಗಿತ್ತು. ಮೊದಲ ಪ್ರಯತ್ನವಾಗಿ ಬಿಎಸ್‌ವೈ ಬಯಸುವ ಅವರದ್ದೇ ಸಮುದಾಯದ ನಾಯಕನ್ನು ಸಿಎಂ ಗಾದಿಗೆ ತಂದು ಅವರನ್ನು ಕಾಲಕ್ರಮೇಣ ದುರ್ಬಲಗೊಳಿಸುವುದಾಗಿತ್ತು. ಪದಚ್ಯುತಿ ಬಳಿಕ ಮೂಲೆಗುಂಪು ಮಾಡಿ ಪರ್ಯಾಯ ನಾಯಕತ್ವಕ್ಕೆ ಮಣೆಹಾಕಿ ಪಕ್ಷದ ಬಲವರ್ಧನೆಗೆ ಮುಂದಾಗುವ ತಂತ್ರಗಾರಿಕೆ ಹೈಕಮಾಂಡ್ ನದ್ದಾಗಿತ್ತು.

yediyurappa Vijayendra

ಉತ್ತರಭಾರತದ ರಾಜ್ಯಗಳಲ್ಲಿ ನಡೆಸಿದ ತಂತ್ರಗಾರಿಕೆಯನ್ನು ಕರ್ನಾಟಕದಲ್ಲೂ ಪ್ರಯೋಗಿಸುವ ಲೆಕ್ಕಾಚಾರ ಬಿಜೆಪಿ ರಾಷ್ಟ್ರೀಯ ನಾಯಕರದ್ದು. ಅಲ್ಲಿ ಪ್ರಬಲವಾಗಿದ್ದ ಜಾತಿ ರಾಜಕಾರಣ ಸಮೀಕರಣಗಳನ್ನು ತಲೆ ಕೆಳಗೆ ಮಾಡಿದ ಭಾವನಾತ್ಮಕ, ಧರ್ಮರಾಜಕಾರಣ ಬಿಜೆಪಿಯ ಕೈಹಿಡಿದಿದೆ. ಆದರೆ ಅದು ಇಲ್ಲಿ ಸಫಲವಾಗುತ್ತದೆ ಎನ್ನುವ ಭರವಸೆ ನಾಯಕರಿಗೆ ಮೂಡಿಲ್ಲ. ಯಾಕೆಂದರೆ ಅದನ್ನು ಜಾರಿಗೆ ತರಲು ಸಮರ್ಥ ನಾಯಕರ ಪಡೆ ರಾಜ್ಯದಲ್ಲಿ ಇಲ್ಲ. ಸರ್ಕಾರದೊಳಗಿರುವ ನಾಯಕರು ಸಿಎಂ ಸೇರಿದಂತೆ ಬಹುತೇಕರು ಜನತಾ ಪರಿವಾರದಿಂದ ಬಂದವರು. ಅವರು ಅಷ್ಟೊಂದು ಪರಿಣಾಮಕಾರಿಯಾಗಿ ಈ ವಿಚಾರದಲ್ಲಿ ಕಾರ್ಯನಿರ್ವಹಿಸುತ್ತಾರೆಂಬ ಖಾತರಿ ಇಲ್ಲ. ಸಂಘ ಪರಿವಾರದ ಹಿನ್ನೆಲೆಯ ಮುಖಂಡರ ಸಂಖ್ಯೆ ಸಚಿವ ಸಂಪುಟದಲ್ಲಿ ಕಡಿಮೆ ಆಗಿದೆ. ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ, ಶೆಟ್ಟರ್ ಅವರಿಂದ ಅಸಾಧ್ಯ. ಉಳಿದಿರುವವರ ಪೈಕಿ ಅಶೋಕ್, ಅರಗ ಜ್ಞಾನೇಂದ್ರ ಅವರ ಕೈಲಾಗಲ್ಲ ಅಂತ ಗೊತ್ತೇ ಇದೆ. ಹಾಗಾಗಿ ಗುರಿ ತಲುಪಲು ಈ ಪ್ರಯೋಗ ಅಸಾಧ್ಯ ಎಂಬ ನಿರ್ಧಾರಕ್ಕೆ ಬಂದ ಹೈಕಮಾಂಡ್ ತಮ್ಮ ಎಲ್ಲಾ ಬಿಗಿನಿಲುವುಗಳನ್ನು ಸಡಿಲಗೊಳಿಸಿ ಮತ್ತೆ ಜಾತಿ ಸಮೀಕರಣದ ರಾಜಕಾರಣಕ್ಕೆ ಮೊರೆ ಹೋಗಲು ನಿರ್ಧರಿಸಿದೆ. ಅದರ ಮೊದಲ ಪ್ರಯೋಗವೇ ಯಡಿಯೂರಪ್ಪ ಅವರಿಗೆ ಮತ್ತೆ ಮಣೆ ಹಾಕುವುದು.

bjp meeting bs yediyurppa basvaraj bommai nalin kumar kateel 1 e1633275753704

ಪುತ್ರನಿಗೆ ಸೂಕ್ತ ಸ್ಥಾನಮಾನ ಕೊಡಲೇಬೇಕೆಂಬ ಬಿಎಸ್ ವೈ ಬೇಡಿಕೆ ವರಿಷ್ಠರಿಗೆ ನುಂಗಲಾರದ ತುತ್ತಾಗಿತ್ತು. ಹಾಲಿ ಸರ್ಕಾರದಲ್ಲಿ ಪುತ್ರ ಸಚಿವ ಸ್ಥಾನ ಅಲಂಕರಿಸಬೇಕೆಂಬ ಅವರ ಆಸೆಗೆ ಆರಂಭದಲ್ಲಿ ಪಕ್ಷ ಸೊಪ್ಪು ಹಾಕಲಿಲ್ಲ. ಆಗ ಪುತ್ರ ವಿಜಯೇಂದ್ರ ಮೂಲಕ ರಾಜ್ಯದೆಲ್ಲೆಡೆ ಪರ್ಯಾಯ ಸಂಘಟನೆ ಮೂಲಕ ಸಮುದಾಯದಲ್ಲಿ ಇನ್ನಷ್ಟು ಗಟ್ಟಿಯಾಗಲು ಹೊರಟು ಪಕ್ಷಕ್ಕೆ ವಿಜಯೇಂದ್ರ ಅನಿವಾರ್ಯವಾಗುಂತಹ ಸನ್ನಿವೇಶ ನಿರ್ಮಿಸಿದರು. ತಕ್ಷಣ ಭವಿಷ್ಯದ ಅಪಾಯವನ್ನು ಅರಿತ ರಾಷ್ಟ್ರೀಯ ನಾಯಕರು ಮೃದುವಾದರು ಎಂಬುದು ಬಿಎಸ್ ವೈ ಆಪ್ತವಲಯದ ಅಭಿಮತ. ಇದು ವಿಜಯೇಂದ್ರ ವಿಧಾನಪರಿಷತ್ ಪ್ರವೇಶದ ಚರ್ಚೆಗೆ ಮುನ್ನುಡಿಯಾಯಿತು. ಆ ಮೂಲಕ ಯಡಿಯೂರಪ್ಪ ಅವರನ್ನು ಉಪೇಕ್ಷಿಸಿ ರಾಜ್ಯದಲ್ಲಿ ಪಕ್ಷ ದಡ ಸೇರುವುದು ಅಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಯಿತು.

TAGGED:bjpelectionpoliticsVidhan Parishad ElectionVijayendraYediyurappaಕರ್ನಾಟಕಬಿಜೆಪಿಯಡಿಯೂರಪ್ಪರಾಜಕೀಯ
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

RCB 7
Cricket

ಹ್ಯಾರಿಸ್‌, ಮಂಧಾನ ಆರ್ಭಟಕ್ಕೆ ವಾರಿಯರ್ಸ್‌ ಬರ್ನ್‌ – ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

Public TV
By Public TV
3 hours ago
DK Shivakumar 9
Bengaluru City

ಜಿ ರಾಮ್‌ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ

Public TV
By Public TV
3 hours ago
Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
4 hours ago
veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
4 hours ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
4 hours ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?