ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ – ಸುನಿಲ್‌ ಕುಮಾರ್

Public TV
1 Min Read
SUNILKUMAR

ಬೆಂಗಳೂರು: ರಾಜ್ಯದ (Karnataka) ಎಲ್ಲ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ಗಂಟೆ ಗುಣಮಟ್ಟದ ವಿದ್ಯುತ್ (Electricity) ಪೂರೈಕೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ಆ ನಿಟ್ಟಿನಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್ (Energy Minister Sunil Kumar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಧಾನ ಮಂತ್ರಿ ಕುಸುಮ್ ಸಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಮೂಲಕ ಹಸಿರು ವಿದ್ಯುತ್ ಉತ್ಪಾದನೆ ಕಡೆ ಹೊರಟಿದ್ದೇವೆ. ಸೋಲಾರ್ ಫೀಡರ್ ಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲಾಗುತ್ತದೆ. ಇದಕ್ಕೆ ಟೆಂಡರ್ ಕರೆಯಲಾಗಿದೆ ಎಂದರು. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

Farmers Budget2a

ನಮ್ಮ ಸರ್ಕಾರದ ಆದ್ಯತೆ ರೈತರಿಗೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆ ಗುರಿ ಇದೆ. ಕೆಲವೆಡೆ ಲೋಪವಾಗಿದೆ ಅದನ್ನೂ ಸರಿಪಡಿಸಲಾಗುತ್ತದೆ ಎಂದರು.

ಮಾಜಿ ಸೈನಿಕರಿಗೆ ವಿದ್ಯುತ್ ಸಬ್ಸಿಡಿ ಪರಿಗಣಿಸಲಾಗುತ್ತದೆ. ರೈತರ ಪಂಪ್ ಸೆಟ್‌ಗಳಿಗಾಗಿ 12 ಸಾವಿರ ಕೋಟಿ ಹಣ ಸಬ್ಸಿಡಿ ಪ್ರತಿ ವರ್ಷ ಕೊಡಲಾಗುತ್ತಿದೆ. ಕುಸುಮ್ ಬಿ ಮತ್ತು ಸಿ ಬೇರೆ ಬೇರೆ ಯೋಜನೆಗಳು. ಸಿ ಯೋಜನೆ ವೈಯಕ್ತಿಕ ಪಂಪ್ ಸೆಟ್ ಹಾಕಲು ಸಬ್ಸಿಡಿ, ಸಿ ಅಡಿ ಫೀಡರ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಎರಡೂ ಯೋಜನೆಗೆ ಟೆಂಡರ್ ಕರೆದಿದ್ದು ಆದಷ್ಟು ಬೇಗ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *