Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವು ಪ್ರಾಮಾಣಿಕರಾಗಿದ್ರೆ, ಸಂಪೂರ್ಣ ಆಡಿಯೋ ಬಿಡುಗಡೆ ಮಾಡಿ – ಸಿಎಂಗೆ ಬಿಎಸ್‍ವೈ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀವು ಪ್ರಾಮಾಣಿಕರಾಗಿದ್ರೆ, ಸಂಪೂರ್ಣ ಆಡಿಯೋ ಬಿಡುಗಡೆ ಮಾಡಿ – ಸಿಎಂಗೆ ಬಿಎಸ್‍ವೈ ಸವಾಲು

Bengaluru City

ನೀವು ಪ್ರಾಮಾಣಿಕರಾಗಿದ್ರೆ, ಸಂಪೂರ್ಣ ಆಡಿಯೋ ಬಿಡುಗಡೆ ಮಾಡಿ – ಸಿಎಂಗೆ ಬಿಎಸ್‍ವೈ ಸವಾಲು

Public TV
Last updated: February 12, 2019 7:59 pm
Public TV
Share
3 Min Read
Seesion HDK BSY
SHARE

– ನಮಗೆ ಗೌರವವಿಟ್ಟು, ಸದನ ಸಮಿತಿಗೆ ತನಿಖೆ ಒಪ್ಪಿಸಿ
– ಸ್ಪೀಕರ್‌ಗೆ ಹಣ ಕೊಡುವ ವಿಚಾರದ ಮಾತುಕತೆಯಲ್ಲಿ ನಾನಿಲ್ಲ
– ಬೇಕಾದಂತೆ ಆಡಿಯೋವನ್ನು ಸೃಷ್ಟಿಸಿದ್ದಾರೆ

ಬೆಂಗಳೂರು: ಬಿಜೆಪಿಯ 104 ಶಾಸಕರು ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ನಮಗೆ ಗೌರವ ನೀಡಿ ಸದನ ಸಮಿತಿಗೆ ತನಿಖೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಸದನದಲ್ಲಿ ಮಾತನಾಡಿದ ಅವರು, ಯಾರೋ ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆಂದು ಶರಣಗೌಡ ಹೇಳಿದಾಗ ಸಿಎಂ ಕುಮಾರಸ್ವಾಮಿ ಅವರು ಬೇಡವೆಂದು ಹೇಳಬೇಕಿತ್ತು. ಅದನ್ನು ಬಿಟ್ಟು ಶರಣಗೌಡನನ್ನು ಕಳುಹಿಸಿಕೊಟ್ಟು ರೆಕಾರ್ಡ್ ಮಾಡಿಸಿ, ಬೇಕಾದನ್ನು ತಿರುಚಿ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು.

BSY SESSION copy

ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಆಡಳಿತ ಪಕ್ಷಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಹೊತ್ತು ಬಿಜೆಪಿ ಹಾಗೂ ಮೈತ್ರಿ ಸರ್ಕಾರದ ಶಾಸಕರು ವಾಗ್ದಾಳಿ ನಡೆಸಿದರು. ಬಳಿಕ ಮಾತು ಮುಂದುವರಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಘಟಾನುಘಟಿಗಳ ಬಗ್ಗೆ ಹೇಳುತ್ತ ಪ್ರತಿಪಕ್ಷದ ಸದಸ್ಯರು ಇದ್ದರೆಂದು ಹೇಳಿದ್ದಾರೆ. ನಾನು ಇದ್ದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಅಂತ ಹೇಳಿದ್ದೆ. ಈಗಲೂ ನಾನು ಅದಕ್ಕೆ ಬದ್ಧನಾಗಿದ್ದೇನೆ. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಹಣ ನೀಡುವ ವಿಚಾರವಾಗಿ ಮಾತನಾಡುವಾಗ ನಾನು ಇರಲಿಲ್ಲ. ಒಂದು ವೇಳೆ ಇದ್ದಿದ್ದರೆ ಈ ಕ್ಷಣವೇ ರಾಜೀನಾಮೆ ಕೊಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

Seesion BSY

ನನಗೆ ಮೋಸ ಮಾಡಲು ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ನನ್ನ ಹತ್ತಿರ ಇರುವುದು ನಕಲಿ ಅಥವಾ ನಿಜವಾದ ಆಡಿಯೋ ಎನ್ನುವುದನ್ನು ತಿಳಿಯದೇ ಬಿಡುಗಡೆ ಮಾಡಿದ್ದು ಅಪರಾಧ. ಧ್ವನಿ ಸುರಳಿ 35 ನಿಮಿಷವಿದೆ. ಅದನ್ನು 2 ನಿಮಿಷಕ್ಕೆ ಇಳಿಸಿ ತಮಗೆ ಅನುಕೂಲವಾಗುವಂತೆ ಮಾಡಿ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. 50 ಕೋಟಿ ರೂ. ಕೊಡುವ ಸುದ್ದಿ ತಿಳಿದಾಗ ನೀವು ನೇರವಾಗಿ ಸ್ಪೀಕರ್ ಬಳಿ ಹೋಗಬೇಕಾಗಿತ್ತು. ಆ ರೀತಿ ಮಾಡಿದ್ದರೆ ದೇಶಾದ್ಯಂತ ಸುದ್ದಿಯಾಗುತ್ತಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಅಸಮಾಧಾನವನ್ನು ಹೊರಹಾಕಿದರು.

ನಿಮ್ಮ ಉದ್ದೇಶವೇ ದುರುದ್ದೇಶದಿಂದ ಕೂಡಿದೆ. ನೀವು ಪ್ರಮಾಣಿಕವಾಗಿದ್ದರೆ ಸಂಪೂರ್ಣ ಆಡಿಯೋ ಬಿಡುಗಡೆ ಮಾಡಬೇಕಿತ್ತು. ಒಬ್ಬ ಸಿಎಂ ಆಗಿ, ರಾಜಕೀಯ ಕುತಂತ್ರ ಮಾಡುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಕುಮಾರಸ್ವಾಮಿ ವಿರುದ್ಧ ಗುಡುಗಿದರು.

ramesh kumar 1 copy

ನಾನು 40 ವರ್ಷದಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಸಾಮಾನ್ಯ ಕುಟುಂಬದಿಂದ ಬಂದ ನಾನು ಸಿಎಂ, ಉಪಮುಖ್ಯಮಂತ್ರಿಯಾಗಿದ್ದೇನೆ ಎಂದ ಅವರು, ಮುಖ್ಯಮಂತ್ರಿ ಸ್ಥಾನವನ್ನು ಸ್ವಾರ್ಥಕ್ಕೆ ಬಳಸಿಕೊಂಡು, ದುರುದ್ದೇಶದಿಂದ ನಡೆದುಕೊಂಡಿದ್ದೀರಿ. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಕುಟುಕಿದರು.

ವಿಧಾನಸಭಾ ಚುನಾವಣೆ ಬಳಿಕ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸುವಾಗ ಕುಮಾರಸ್ವಾಮಿ ಅವರು ಸಿಎಂ ಆಗುವುದು ಬೇಡವೆಂದು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರೆಸಾರ್ಟ್ ನಲ್ಲಿ ಪಟ್ಟು ಹಿಡಿದಿದ್ದರು. ಈಗ ಅವರು ನಿಮ್ಮ ಆಡಳಿತಕ್ಕೆ ಬೇಸತ್ತು ಹೋಗಿದ್ದಾರೆ. ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಚಾಟಿ ಬೀಸಿದರು.

BSY 2

ನಾವು ಮಾತ್ರ ಸತ್ಯಹರಿಶ್ಚಂದ್ರರು ಎಂದು ಪೋಸ್ ಕೊಡುವುದಕ್ಕೆ ನಿಮಗೆ ಯಾವ ನೈತಿಕ ಹಕ್ಕಿದೆ? ಒಬ್ಬರನ್ನು ವಿಧಾನದ ಪರಿಷತ್ ಸದಸ್ಯನಾಗಿ ಮಾಡಲು ಕೋಟ್ಯಂತರ ರೂಪಾಯಿ ಕೇಳಿದ್ರಿ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

ನಮ್ಮನ್ನ ನೀವು ಕೊಠಡಿಗೆ ಕರೆದು ಚರ್ಚೆ ಮಾಡಿದ್ದರೆ ಸದನದಲ್ಲಿ ಚರ್ಚೆ ಮಾಡುವ ಅವಕಾಶ ಇರುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ. ಮುಂದೆ ಏನು ಮಾಡಬೇಕೆಂದು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರನ್ನು ಕೊಠಡಿಗೆ ಕರೆದು ಚರ್ಚೆ ಮಾಡಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಬಿಎಸ್‍ವೈ ಮನವಿ ಮಾಡಿಕೊಂಡರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpbs yeddyurappaCM KumaraswamyPublic TVSpeaker Ramesh Kumarvidhana sabhaಆಪರೇಷನ್ ಕಮಲ ಆಡಿಯೋಕಲಾಪಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿಎಂ ಕುಮಾರಸ್ವಾಮಿಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
5 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
5 hours ago
01 14
Big Bulletin

ಬಿಗ್‌ ಬುಲೆಟಿನ್‌ 20 February 2026 ಭಾಗ-1

Public TV
By Public TV
5 hours ago
02 15
Big Bulletin

ಬಿಗ್‌ ಬುಲೆಟಿನ್‌ 20 February 2026 ಭಾಗ-2

Public TV
By Public TV
6 hours ago
03 13
Big Bulletin

ಬಿಗ್‌ ಬುಲೆಟಿನ್‌ 20 February 2026 ಭಾಗ-3

Public TV
By Public TV
6 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?