Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

Bengaluru City

ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

Public TV
Last updated: February 12, 2019 8:06 pm
Public TV
Share
2 Min Read
CM HDK copy
SHARE

ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಶೆಟ್ಟರ್ ಅವರ ಆರೋಪಕ್ಕೆ ತಕ್ಷಣ ತಿರುಗೇಟು ನೀಡಿದ ಸಿಎಂ ಅವರು, ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದರು. ಅಲ್ಲದೇ ಸರ್ಕಾರ ಉರುಳಿದರೆ ನಾವೇನು ಸುಮ್ಮನೆ ಕೂರಲು ಸನ್ಯಾಸಿಗಳಲ್ಲ ಎಂದು ಹೇಳುತ್ತಿದ್ದರು. ಹಾಗೆಯೇ ನಾವು ಕೂಡ ಸನ್ಯಾಸಿಗಳು ಅಲ್ಲ. ನಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ನಾವು ಪ್ರತಿಕಾಗೋಷ್ಠಿ ನಡೆಸಿ ಈ ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದೇವೆ ಅಷ್ಟೇ ಎಂದು ಎಚ್‍ಡಿಕೆ ಟಾಂಗ್ ನೀಡಿದರು.

190212kpn80 copy

ಇದೇ ವೇಳೆ ಏನೂ ತಪ್ಪು ಮಾಡಿಲ್ಲ ಅಂದರೆ ಬಿಜೆಪಿಯವರಿಗೆ ಭಯ ಏಕೆ ಎಂದು ಪ್ರಶ್ನಿಸಿದ ಸಿಎಂ ಕುಮಾರಸ್ವಾಮಿ ಅವರು, ಸತ್ಯವನ್ನ ಜನರಿಗೆ ತೋರಿಸಬೇಕಿತ್ತಲ್ವಾ? ಅದಕ್ಕೆ ಆಡಿಯೋ ನೀಡಿದೆ. ಸ್ಪೀಕರ್ ಹೆಸರನ್ನು ಬೀದಿಗೆ ತಂದಿದ್ದು ಯಾರು? ಎನ್ನುವುದನ್ನು ಅವರೇ ಯೋಚನೆ ಮಾಡಲಿ ಎಂದರು. ಅಲ್ಲದೇ ಶೆಟ್ಟರ್ ಅವರು ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿ, ನಾನು ಯಾರ ಫೋನ್ ಕದ್ದಾಲಿಕೆ ಮಾಡಿಲ್ಲ ಎಂದರು.

ಎರಡು ಪಕ್ಷಗಳ ನಾಯಕರಿಗೆ ತಿಳಿ ಹೇಳಿದ ಸ್ಪೀಕರ್ ಅವರು, ಸಿಎಂ ಕುಮಾರಸ್ವಾಮಿ ಅವರಿಗೆ ನಾಗನಗೌಡ ಮಗ ಕೇಳಿದ್ದರು. ಅದಕ್ಕೆ ಹೋಗು ಎಂದು ಹೇಳಿ, ರೆಕಾರ್ಡ್ ಮಾಡಿ ತಂದಿದ್ದಾರೆ. ರೆಕಾರ್ಡ್ ಕೈಗೆ ಬಂದು, ಸ್ಪೀಕರ್ ಅವರ ಹೆಸರು ಪ್ರಸ್ತಾಪ ಆದಾಗ ಅವರು ಹೇಳಲೇ ಬೇಕಾಗಿತ್ತು. ಒಂದೊಮ್ಮೆ ಅವರು ಸುಮ್ಮನಾಗಿ 3ನೇ ವ್ಯಕ್ತಿಯಿಂದ ನನಗೆ ಆಗ ವಿಚಾರ ತಿಳಿದಿದ್ದರೆ ಏನಾಗುತಿತ್ತು? ಆಗ ಸಿಎಂ ಕುಮಾರಸ್ವಾಮಿ ಅವರು ಅಪರಾಧಿ ಆಗುತ್ತಿದ್ದರು. ಆದ್ದರಿಂದ ಅವರು ನನಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

1 e1549970590965

ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ಮತ್ತೆ ಮಧ್ಯಪ್ರವೇಶ ಮಾಡಿದ ಶೆಟ್ಟರ್ ಅವರು, ಸಭಾಧ್ಯಕ್ಷರನ್ನೇ ಈಗ ಸನ್ಯಾಸಿ ಮಾಡಿದ್ದಾರೆ. ಸಭಾಧ್ಯಕ್ಷರ ಹೆಸರು ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ. ಅವರು ಸುದ್ದಿಗೋಷ್ಠಿ ಮಾಡಿದ್ದೆ ಇಷ್ಟೆಲ್ಲಾ ನಡೆಯಲು ಕಾರಣ ಎಂದು ಆರೋಪಿಸಿದರು.

ಶೆಟ್ಟರ್ ಆರೋಪ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಮೇಲೆಯೇ ಆರೋಪಗಳನ್ನು ಮಾಡಿದ ಶೆಟ್ಟರ್ ಅವರು, ಸಿಎಂ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಆಡಿಯೋ ರೆಕಾರ್ಡ್ ಮಾಡಿಸಿಕೊಳ್ಳಲು ಕಳುಹಿಸಿದ್ದು ಅವರ ಮೊದಲನೇ ಅಪರಾಧ ಹಾಗೂ ಕಾನ್ಫರೆನ್ಸ್ ಕುಳಿತು ಕೇಳಿಸಿಕೊಂಡಿದ್ದು 2ನೇ ಅಪರಾಧ. ಈ ಬಗ್ಗೆ ನೇರ ಸ್ಪೀಕರ್ ಅವರಿಗೆ ದೂರು ನೀಡದೇ ಸುದ್ದಿಗೋಷ್ಠಿ ನಡೆಸಿದ್ದು ಮತ್ತೊಂದು ತಪ್ಪು. ಸ್ವತಃ ಸಿಎಂ ಅವರೇ ಶಾಸಕರೊಬ್ಬರಿಗೆ ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಹೇಳಿ ಆರೋಪಗಳ ಸುರಿಮಳೆಗೈದರು.

https://www.youtube.com/watch?v=s2WxVzZmLyo

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:assemblyAudio RecordbengaluruCM KumaraswamyEx CM BS YeddyurappaOperation LotusPublic TVಆಡಿಯೋ ರೆಕಾರ್ಡ್ಆಪರೇಷನ್ ಕಮಲಕಲಾಪಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂ ಬಿಎಸ್ ಯಡಿಯೂರಪ್ಪವಿಧಾನಸಭೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
15 minutes ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
21 minutes ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
47 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
1 hour ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
2 hours ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?