ಕಾಲಿವುಡ್ನ (Kollywood) ಪ್ರತಿಭಾನ್ವಿತ ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ಅವರು ಇತ್ತೀಚಿಗೆ ಸೂಪರ್ ಸ್ಟಾರ್ ಅಜಿತ್ಗೆ (Ajith) ನಿರ್ದೇಶನ ಮಾಡೋದಾಗಿ ಅನೌನ್ಸ್ ಮಾಡಿದ್ದರು. ಇದೀಗ ಶೂಟಿಂಗ್ ಚಾಲನೆ ನೀಡುವ ವೇಳೆಗೆ ಅಜಿತ್ ಸಿನಿಮಾವನ್ನು (Ajith 62) ನಯನತಾರಾ (Nayanatara) ಪತಿ ಕೈಬಿಟ್ಟಿದ್ದಾರೆ. ನಿರ್ಮಾಪಕರು ಕಥೆ ಬದಲಾವಣೆ ಮಾಡಿ ಅಂದಿದ್ದಕ್ಕೆ ಚಿತ್ರದಿಂದ ಹೊರನಡೆದಿದ್ದಾರೆ. ಈ ಬಗ್ಗೆ ಸ್ವತಃ ನಿರ್ದೇಶಕ ವಿಘ್ನೇಶ್ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕ್ರಿಕೆಟರ್ ಆಗುವ ಕನಸು ಕಂಡ ಬಡ ಹುಡುಗಿಗೆ ನಟ ಅರ್ಜುನ್ ಕಪೂರ್ ಸಾಥ್
- Advertisement 2
ಅಜಿತ್ಗೆ ಆ್ಯಕ್ಷನ್ ಕಟ್ ಹೇಳ್ತಿರೋದಕ್ಕೆ ವಿಘ್ನೇಶ್ ಸಂತಸ ವ್ಯಕ್ತಪಡಿಸಿದ್ದರು. ಈಗ ಸಡನ್ ಆಗಿ ಸಿನಿಮಾ ಕೈಬಿಟ್ಟಿರೋದು ಯಾಕೆ ಎಂಬುದಕ್ಕೆ ಉತ್ತರ ನೀಡಿದ್ದಾರೆ. ಸಿನಿಮಾ ನಿರ್ಮಾಪಕರಿಗೆ ಕಥೆಯಲ್ಲಿ ಕೊಂಚ ಬದಲಾವಣೆ ಬೇಕಿತ್ತಂತೆ, ಸಣ್ಣ ಪುಟ್ಟ ಬದಲಾವಣೆ ಮಾಡಬಹುದು. ಆದರೆ ಸೆಕೆಂಡ್ ಹಾಫ್ ಫುಲ್ ಬದಲಾಯಿಸುವುದಕ್ಕೆ ಆಗಲ್ಲ ಎಂದು ವಿಘ್ನೇಶ್ ಪ್ರಾಜೆಕ್ಟ್ ಕೈ ಬಿಡುವ ಮನಸ್ಸು ಮಾಡಿದ್ದಾರೆ. ಸಹಿ ಮಾಡಿದ ಮೇಲೆ ನಮ್ಮ ನಿರ್ಮಾಪಕರು ಕಥೆಯಲ್ಲಿ ಬದಲಾವಣೆ ಬೇಕು ಎಂದು ಹೇಳುತ್ತಾರೆ. ಸಣ್ಣ ಪುಟ್ಟ ಬದಲಾವಣೆ ಅಂದರೆ ಯೋಚನೆ ಮಾಡಬಹುದಿತ್ತು. ಆದರೆ ಸೆಕೆಂಡ್ ಹಾಫ್ ಸಂಪೂರ್ಣ ಬದಲಾಯಿಸಿ ಎಂದು ಒತ್ತಾಯ ಮಾಡುತ್ತಿದ್ದರು. ಸೆಕೆಂಡ್ ಹಾಫ್ನಲ್ಲಿ ಬರುವುದೇ ಮುಖ್ಯವಾದ ಕಥೆ ಅದೇ ಬೇಡ ಅಂದರೆ ಹೇಗೆ? ನನ್ನ ಕಥೆಗೆ ಬೆಲೆ ಎಲ್ಲಿದೆ ಎಂದು ವಿಘ್ನೇಶ್ ಮಾತನಾಡಿದ್ದಾರೆ.
- Advertisement 3
- Advertisement 4
ನನ್ನ ಕಥೆಯನ್ನು ನಾನು ಬದಲಾಯಿಸುವುದಿಲ್ಲ. ತಲಾ ಅಜಿತ್ ಕುಮಾರ್ ಸರ್ ಜೊತೆ ಏನೂ ಸಮಸ್ಯೆ ಇರಲಿಲ್ಲ ಪ್ರತಿಯೊಂದು ಸೂಪರ್ ಆಗಿತ್ತು. ಆದರೆ ನಿರ್ಮಾಪಕರು ಕಿರಿಕಿರಿ ಮಾಡಿಬಿಟ್ಟರು. ನಿರ್ಮಾಪಕರ ಡಿಮ್ಯಾಂಡ್ನ ಕೇಳಬಹುದು. ಆದರೆ ಇಡೀ ಕಥೆ ಬದಲಾಯಿಸಬೇಕು ಅಂದ್ರೆ ಯಾಕೆ ನಮ್ಮ ಕತೆಯನ್ನು ಆರಂಭದಲ್ಲಿ ಒಪ್ಪಿಕೊಳ್ಳಬೇಕು? ನಾನು ಬದಲಾಯಿಸುವುದಿಲ್ಲ ಎಂದು ಹೇಳಿ ಹೊರ ಬಂದೆ ಎಂದು ವಿಘ್ನೇಶ್ ಹೇಳಿದ್ದಾರೆ.