ತಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಶೂಟಿಂಗ್ಗಾಗಿ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಅಪಘಾತವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್
ವಿಜಯ್ ದೇವರಕೊಂಡ ಮತ್ತು ಸಮಂತಾ ಅವರಿದ್ದ ಜೀಪ್ ನದಿಗೆ ಉರುಳಿ, ಭಾರೀ ಅಪಘಾತವಾಗಿದೆ ಎನ್ನುವ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಇಬ್ಬರೂ ಅಭಿಮಾನಿಗಳು ಇದರಿಂದಾಗಿ ಸಹಜವಾಗಿಯೇ ಆತಂಕಕ್ಕೀಡಾಗಿದ್ದರು. ಆದರೆ ಈ ಸುದ್ದಿಯ ಅಸಲಿ ಕಥೆಯೇ ಬೇರೆ ಇದೆ ಎನ್ನುತ್ತಾರೆ ಇವರ ಆಪ್ತರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ
ಅಷ್ಟಕ್ಕೂ ಸಮಂತಾ ಮತ್ತು ದೇವರಕೊಂಡ ಶೂಟಿಂಗ್ಗಾಗಿ ಕಾಶ್ಮೀರಕ್ಕೆ ಹೋಗಿದ್ದು ನಿಜ. ಎರಡು ವಾರಗಳ ಕಾಲ ಕಾಶ್ಮೀರದಲ್ಲೇ ಚಿತ್ರೀಕರಣ ನಡೆದಿದೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲವಂತೆ. ಈ ಸುದ್ದಿ ಹಬ್ಬಿದ ದಿನ ಇಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇದ್ದರಂತೆ. ಶೂಟಿಂಗ್ ಮುಗಿಸಿಕೊಂಡು ಈಗಾಗಲೇ ಅವರು ತಮ್ಮ ಮನೆ ಸೇರಿಕೊಂಡಿದ್ದಾರೆ. ಅಲ್ಲದೇ ಇಬ್ಬರೂ ಕರಣ್ ಜೋಹಾರ್ ಹುಟ್ಟುಹಬ್ಬದ ಪಾರ್ಟಿಯಲ್ಲೂ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು
ಕಾಶ್ಮೀರದ ಶೂಟಿಂಗ್ ಮುಗಿದು ಮೂರ್ನಾಲ್ಕು ದಿನಗಳೇ ಆಗಿವೆ. ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಈ ನಡುವೆ ಅಪಘಾತದ ಸುದ್ದಿ ಬಂದಿದೆ. ಈ ಸುದ್ದಿಯನ್ನು ಯಾರು, ಯಾಕೆ ಹಬ್ಬಿಸಿದರೋ ಗೊತ್ತಿಲ್ಲ. ಆದರೆ ಈ ಸುದ್ದಿಯು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ.