ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ (Pahalgam Terrorist Attack) ದಾಳಿಗೆ 26 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಈ ಕುರಿತು ಹಲವು ನಟ, ನಟಿಯರು ಖಂಡಿಸಿದ್ದಾರೆ. ಇದೀಗ ಕಾರ್ಯಕ್ರಮವೊಂದರಲ್ಲಿ ವಿಜಯ್ ದೇವರಕೊಂಡ (Vijay Devarakonda) ಮಾತನಾಡಿ, ಕಾಶ್ಮೀರ ಎಂದಿಗೂ ಭಾರತಕ್ಕೆ ಸೇರಿದ್ದು, ಪಾಕ್ ಮೇಲೆ ದಾಳಿ ಮಾಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು
ಸೂರ್ಯ ನಟನೆಯ ‘ರೆಟ್ರೋ’ ಸಿನಿಮಾ (Retro Film) ಪ್ರೀ- ರಿಲೀಸ್ ಕಾರ್ಯಕ್ರಮಕ್ಕೆ ವಿಜಯ್ ಅತಿಥಿಯಾಗಿ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ವಿಜಯ್ ದೇವರಕೊಂಡ, ಉಗ್ರರ ದಾಳಿಗೆ ಅಮಾಯಕರ ಪ್ರಾಣಪಕ್ಷಿ ಹಾರಿ ಹೋಗಿದೆ. ಮತ್ತೆ ಇಂಥಹ ಕೃತ್ಯ ಮರುಕಳಿಸಬಾರದು ಅಂದರೆ ಶತ್ರುಗಳ ಬಾಲ ಕಟ್ ಮಾಡಲೇಬೇಕು. ಅದಕ್ಕಾಗಿ ಭಾರತೀಯ ಸೈನ್ಯ ಉಗ್ರರನ್ನು ಪತ್ತೆ ಮಾಡುತ್ತಿದ್ದಾರೆ. ಕಾಶ್ಮೀರ ಎಂದೆಂದಿಗೂ ಭಾರತಕ್ಕೆ ಸೇರಿದ್ದು, ಭಾರತೀಯರಿಗೆ ಮಾತ್ರವೇ ಸೇರಿದ್ದು ಅನ್ನೋದು ಸತ್ಯ ಎಂದಿದ್ದಾರೆ. ಇದನ್ನೂ ಓದಿ:ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು
ಭಯೋತ್ಪಾದಕರಿಗೆ ಶಿಕ್ಷಣವಿಲ್ಲ. ಅವರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲದ ಕಾರಣ ಅವರ ಸಮಸ್ಯೆಗಳನ್ನು ಅವರಿಗೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಿದ್ದರೂ ಕಾಶ್ಮೀರದ ಮೇಲೆ ಉದ್ಧಟತನ ಮಾಡ್ತಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವ ಅವಶ್ಯಕತೆ ಇಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಲ್ಲಿನ ಜನರೇ ಅಲ್ಲಿನ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಎಂದಿದ್ದಾರೆ. ನಾನು 2 ವರ್ಷಗಳ ಹಿಂದೆ ಕಾಶ್ಮೀರಕ್ಕೆ ‘ಖುಷಿ’ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಿದ್ದೆ, ತುಂಬಾ ಒಳ್ಳೆಯ ಸಮಯವನ್ನು ನಾನಲ್ಲಿ ಕಳೆದಿದ್ದೇನೆ ಎಂದು ಸ್ಮರಿಸಿದ್ದಾರೆ ವಿಜಯ್ ದೇವರಕೊಂಡ.
View this post on Instagram
ಅಂದಹಾಗೆ, ಸೂರ್ಯ ಮತ್ತು ಪೂಜಾ ಹೆಗ್ಡೆ ನಟನೆಯ ‘ರೆಟ್ರೋ’ ತಮಿಳು ಚಿತ್ರ ಇದೇ ಮೇ 1ರಂದು ರಿಲೀಸ್ಗೆ ಸಿದ್ಧವಾಗಿದೆ.