ಸ್ಟೈಲೀಶ್ ಸ್ಟಾರ್ ವಿಜಯ್ ದೇವರಕೊಂಡ `ಲೈಗರ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಈ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಈ ಪ್ರಚಾರದ ವೇಳೆ, ಈ ಹಿಂದೆ ಕರಣ್ ಜೋಹರ್ ಚಿತ್ರವನ್ನು ಕೈಬಿಟ್ಟಿದರ ಬಗ್ಗೆ ವಿಜಯ್ ದೇವರಕೊಂಡ ಮಾತನಾಡಿದ್ದಾರೆ.
ಈಗ ಏಲ್ಲೆಲ್ಲೂ `ಲೈಗರ್ ಸಿನಿಮಾ ಪ್ರಚಾರ ಜೋರಾಗಿದೆ ಸೌಂಡ್ ಮಾಡುತ್ತಿದೆ. ವಿಜಯ್ ದೇವರಕೊಂಡ ವೃತ್ತಿ ಜೀವನದ ನಿರೀಕ್ಷಿತ `ಲೈಗರ್’ ಚಿತ್ರ ಟೀಸರ್, ಟ್ರೆöÊಲರ್, ಪೊಸ್ಟರ್ ಲುಕ್ನಿಂದ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ಇನ್ನು ಈ ಚಿತ್ರದ ಪ್ರಚಾರ ಕಾರ್ಯ ಹೈದರಾಬಾದ್ನಲ್ಲಿ ನಡೆಯುತ್ತಿದ್ದು, ಈ ವೇಳೆ ಕರಣ್ ಜೋಹರ್ ಸಿನಿಮಾ ಆಫರ್ ಅನ್ನು ಕೈಬಿಟ್ಟ ವಿಚಾರದ ಬಗ್ಗೆ ವಿಜಯ್ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:Bigg Boss: ಗರ್ಲ್ಫ್ರೆಂಡ್ ವಿಚಾರಕ್ಕೆ ಬಂದ ಸೋನು ಶ್ರೀನಿವಾಸ್ ಗೌಡ ವಿರುದ್ಧ ಕಿಡಿಕಾರಿದ ಜಶ್ವಂತ್
`ಅರ್ಜುನ್ ರೆಡ್ಡಿ’ ಚಿತ್ರದ ಸಕ್ಸಸ್ ನಂತರ ಕರಣ್ ಜೋಹರ್ ಕಡೆಯಿಂದ ಬಾಲಿವುಡ್ ಸಿನಿಮಾ ಆಫರ್ ಬಂದಿತ್ತು. ಆದರೆ ಆ ಸಮಯದಲ್ಲಿ ನಾನು ಸಿದ್ಧನಾಗಿರಲಿಲ್ಲ. ಈಗ ಪ್ಯಾನ್ ಇಂಡಿಯಾ ಸಿನಿಮಾ ಕಾನ್ಸೆಪ್ಟ್ ಇರುವ ಕಾರಣ ಲೈಗರ್ ಚಿತ್ರ ಒಪ್ಪಿಕೊಂಡೆ ಎಂದು ಮಾತನಾಡಿದ್ದಾರೆ. ಇನ್ನು ಲೈಗರ್ ಚಿತ್ರವು ಸ್ಲಂ ಹುಡುಗರ ಕಥೆಯಾಗಿದ್ದು, ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ವಿಜಯ್ ಮಿಂಚಿದ್ದಾರೆ. ಕರಣ್ ಜೋಹರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಆಗಸ್ಟ್ ೨೫ಕ್ಕೆ ಲೈಗರ್ ಚಿತ್ರ ತೆರೆಗೆ ಅಪ್ಪಳಿಸಲಿದೆ.