ನಟ ವಿಜಯ್ ದೇವರಕೊಂಡ (Vijay Deverakonda) ಅವರ (Car Accident) ಕಾರು ಅಪಘಾತಕ್ಕೊಳಗಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ.
ಪುಟ್ಟಪರ್ತಿಯಿಂದ ಹೈದರಾಬಾದ್ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮತ್ತೊಂದು ಕಾರು ವಿಜಯ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ `ಬಡವರ ಬರ್ಗರ್’ ತಿಂದು ಓವರ್ ಆ್ಯಕ್ಟಿಂಗ್ ಮಾಡಿದ್ರಾ ಶಿಲ್ಪಾ ಶೆಟ್ಟಿ?
ಅಪಘಾತದ ನಂತರ, ನಟ ಸ್ನೇಹಿತನ ಕಾರಿನಲ್ಲಿ ತೆರಳಿದ್ದಾರೆ. ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ವಿಜಯ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ: ರಶ್ಮಿಕಾ, ದೇವರಕೊಂಡ ಎಂಗೇಜ್ಮೆಂಟ್, ಫೆಬ್ರವರಿಯಲ್ಲಿ ಮದುವೆ?
ಕಾರು ಅಪಘಾತವಾದ ಬಗ್ಗೆ ಪ್ರತಿಕ್ರಿಯಿಸಿದ ದೇವರಕೊಂಡ, ಕಾರು ಅಪಘಾತವಾಗಿದ್ದರೂ ನಾವೆಲ್ಲ ಚೆನ್ನಾಗಿದ್ದೇವೆ. ವಿಚಾರರಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.
ವಿಜಯ್ ದೇವರಕೊಂಡಗೆ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರ ಭಾರತದಲ್ಲೂ ಭಿಮಾನಿಗಳು ಇದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳನ್ನ ಮಾಡಿರುವ ವಿಜಯ್ ದೇವರಕೊಂಡ ಅಭಿಮಾನಿಗಳು ಆತಂಕಪಡಬಾರದು ಎನ್ನುವ ನಿಟ್ಟಿನಲ್ಲಿ ಕ್ಲಾರಿಟಿ ನೀಡಿದ್ದಾರೆ.
 
					
 
		 
		 
		 
		 
		 
		 
		 
		 
		