Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
Last updated: June 6, 2025 9:48 pm
Public TV
Share
3 Min Read
Vijay Mallya
SHARE

– ಅಂಡರ್‌-19ನಲ್ಲಿ ಆಡುತ್ತಿದ್ದ ಹುಡುಗ ಕೊಹ್ಲಿ ಬಿಡ್‌ ಮಾಡಿದ್ದನ್ನು ನೆನಪಿಸಿಕೊಂಡ ಮಲ್ಯ

ಮುಂಬೈ: 18 ವರ್ಷಗಳ ಹೋರಾಟ, ಛಲ ಮತ್ತು ಪರಿಶ್ರಮದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಅಂತಿಮವಾಗಿ ಐಪಿಎಲ್‌ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹೊತ್ತಿನಲ್ಲೇ ಆರ್‌ಸಿಬಿ ಫ್ರಾಂಚೈಸಿ ಮೊದಲ ಮಾಲೀಕರಾಗಿದ್ದ ವಿಜಯ್‌ ಮಲ್ಯ ಸುದ್ದಿಯಲ್ಲಿದ್ದಾರೆ.

ಐಪಿಎಲ್‌ ಆರಂಭವಾದ ಬಳಿಕ ಆರ್‌ಸಿಬಿ ಫ್ರಾಂಚೈಸಿ ಖರೀದಿಸಿದ ಬಗ್ಗೆ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಪಾಡ್‌ಕಾಸ್ಟ್‌ನಲ್ಲಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ನಾನು ಮುಂಬೈ ಇಂಡಿಯನ್ಸ್ ಸೇರಿದಂತೆ ಒಟ್ಟು ಮೂರು ಫ್ರಾಂಚೈಸಿಗಳಿಗೆ ಬಿಡ್ ಮಾಡಿದ್ದೆ. ಮುಂಬೈ ತಂಡವನ್ನು ಮುಖೇಶ್ ಅಂಬಾನಿ ಖರೀದಿಸಿದರು. ಮುಂಬೈನಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋತ ನಂತರ ಅಂತಿಮವಾಗಿ ಆರ್‌ಸಿಬಿಯನ್ನು 112 ಮಿಲಿಯನ್‌ ಯುಎಸ್‌ ಡಾಲರ್‌ಗೆ (ಇದು 2008 ರಲ್ಲಿ 600-700 ಕೋಟಿ ರೂ. ಮೌಲ್ಯ) ಖರೀದಿಸಿದೆ ಎಂದು ಮಲ್ಯ ತಿಳಿಸಿದ್ದಾರೆ.

ಈ ಲೀಗ್‌ ಬಗ್ಗೆ ಲಲಿತ್‌ ಮೋದಿ ಹೇಳಿದಾಗ ನಾನು ತುಂಬಾ ಪ್ರಭಾವಿತನಾಗಿದ್ದೆ. ಅವರು ಒಂದು ದಿನ ನನಗೆ ಕರೆ ಮಾಡಿ, ತಂಡಗಳನ್ನು ಹರಾಜು ಮಾಡಲಾಗುವುದು ಎಂದು ಹೇಳಿದರು. ನೀವು ಯಾವುದನ್ನು ಖರೀದಿಸುತ್ತೀರಾ? ಎಂದರು. ಹಾಗಾಗಿ, ನಾನು ಮೂರು ಫ್ರಾಂಚೈಸಿಗಳಿಂದ ಬಿಡ್ ಮಾಡಿದೆ. ಮುಂಬೈಯನ್ನು ಬಹಳ ಕಡಿಮೆ ಮೊತ್ತದಿಂದ ಕಳೆದುಕೊಂಡೆ ಎಂದು ಹೇಳಿಕೊಂಡಿದ್ದಾರೆ.

2008 ರಲ್ಲಿ ನಾನು ಆರ್‌ಸಿಬಿ ಫ್ರಾಂಚೈಸಿಯನ್ನು ಬಿಡ್ ಮಾಡಿದಾಗ, ಐಪಿಎಲ್ ಅನ್ನು ಭಾರತೀಯ ಕ್ರಿಕೆಟ್‌ಗೆ ಒಂದು ದಿಕ್ಕನ್ನೇ ಬದಲಾಯಿಸುವ ತಂಡವೆಂದು ನಾನು ನೋಡಿದೆ. ಬೆಂಗಳೂರಿನ ಉತ್ಸಾಹಭರಿತ, ಕ್ರಿಯಾತ್ಮಕ, ಆಕರ್ಷಕ ಮನೋಭಾವವನ್ನು ಸಾಕಾರಗೊಳಿಸುವ ತಂಡವನ್ನು ರಚಿಸುವುದು ನನ್ನ ಗುರಿಯಾಗಿತ್ತು. ಆರ್‌ಸಿಬಿ ಮೈದಾನದಲ್ಲಿ ಮಾತ್ರವಲ್ಲ, ಹೊರಗೂ ಶ್ರೇಷ್ಠತೆಯನ್ನು ಪ್ರತಿನಿಧಿಸುವ ಬ್ರ್ಯಾಂಡ್ ಆಗಬೇಕೆಂದು ನಾನು ಬಯಸಿದ್ದೆ. ಅದಕ್ಕಾಗಿಯೇ ನಾನು ನಮ್ಮ ಮದ್ಯದ ಬ್ರಾಂಡ್‌ಗಳಲ್ಲಿ ಒಂದಾದ ರಾಯಲ್‌ ಚಾಲೆಂಜ್‌ ಹೆಸರನ್ನೇ ಫ್ರಾಂಚೈಸಿಗೆ ಇಟ್ಟೆ ಎಂದು ಆರ್‌ಸಿಬಿ ಹೆಸರು ಹೇಗೆ ಬಂತು ಎಂಬುದನ್ನು ಮಲ್ಯ ವಿವರಿಸಿದ್ದಾರೆ.

ಹರಾಜಿನಲ್ಲಿ ವಿರಾಟ್ ಕೊಹ್ಲಿಯನ್ನು ಖರೀದಿಸಿದ್ದನ್ನು ಕೂಡ ಮಲ್ಯ ನೆನಪಿಸಿಕೊಂಡಿದ್ದಾರೆ. ಕೊಹ್ಲಿಯನ್ನು ಅವರ ರಾಜ್ಯ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ (ಆಗ ಡೆಲ್ಲಿ ಡೇರ್‌ಡೆವಿಲ್ಸ್) ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿತ್ತು. ಆದರೆ, ಫ್ರಾಂಚೈಸಿ ಪ್ರದೀಪ್ ಸಾಂಗ್ವಾನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿತು. ಇದರಿಂದಾಗಿ ಆರ್‌ಸಿಬಿಗೆ ಹದಿಹರೆಯದ ಪ್ರತಿಭೆಯನ್ನು ಸೇರಿಸಿಕೊಳ್ಳಲು ಸಾಧ್ಯವಾಯಿತು. ನಾನು ಆರ್‌ಸಿಬಿಯನ್ನು ಒಂದು ಶಕ್ತಿಶಾಲಿ ತಂಡವನ್ನಾಗಿ ಮಾಡಬಲ್ಲ ಆಟಗಾರರನ್ನು ಆಯ್ಕೆ ಮಾಡಿದೆ. ಅಂಡರ್-19 ವಿಶ್ವಕಪ್ ತಂಡದ ಯುವ ಆಟಗಾರ ವಿರಾಟ್ ಕೊಹ್ಲಿಯನ್ನು ಗುರುತಿಸಿದ್ದು ದೊಡ್ಡ ಹೆಮ್ಮೆ. ಕೊಹ್ಲಿ ವಿಶೇಷ ಎಂದು ನನ್ನ ಮನಸ್ಸು ಆಗಲೇ ಹೇಳಿತ್ತು. ನಾನು ಅವರನ್ನು ಆಯ್ಕೆ ಮಾಡಿದೆ. ರಾಹುಲ್ ದ್ರಾವಿಡ್ ಅವರನ್ನು ನಮ್ಮ ಐಕಾನ್ ಆಟಗಾರನನ್ನಾಗಿ ಪಡೆಯುವುದು ಯಾವುದೇ ತೊಂದರೆಯಾಗಲಿಲ್ಲ. ಅವರು ಬೆಂಗಳೂರಿನ ಹೆಮ್ಮೆ. ನಾವು ಜಾಕ್ವೆಸ್ ಕಾಲಿಸ್, ಅನಿಲ್ ಕುಂಬ್ಳೆ ಮತ್ತು ಜಹೀರ್ ಖಾನ್‌ರಂತಹ ಜಾಗತಿಕ ತಾರೆಗಳನ್ನು ಸಹ ಕರೆತಂದೆವು. ನನಗೆ ಸ್ಥಳೀಯ ನಾಯಕರು ಮತ್ತು ಅಂತರರಾಷ್ಟ್ರೀಯ ಪ್ರತಿಭೆಯ ಮಿಶ್ರಣ ಬೇಕಿತ್ತು. ಐಪಿಎಲ್ ಟ್ರೋಫಿಯನ್ನು ಬೆಂಗಳೂರಿಗೆ ತರುವುದು ನನ್ನ ಕನಸಾಗಿತ್ತು. ಆ ಗುರಿಯೊಂದಿಗೆ ನಾನು ತಂಡವನ್ನು ನಿರ್ಮಿಸಿದೆ ಎಂದು ತಿಳಿಸಿದ್ದಾರೆ.

ಆಯ್ಕೆ ಪ್ರಕ್ರಿಯೆಗೆ ಸ್ವಲ್ಪ ಮೊದಲು, ಅವರು U-19 ವಿಶ್ವಕಪ್ ಆಡುತ್ತಿದ್ದರು. ನಾನು ಅವರ ಬಗ್ಗೆ ತುಂಬಾ ಪ್ರಭಾವಿತನಾಗಿದ್ದೆ. ಹಾಗಾಗಿ, ನಾನು ಅವರನ್ನು ಆಯ್ಕೆ ಮಾಡಿದೆ. 18 ವರ್ಷಗಳ ನಂತರವೂ ಕೊಹ್ಲಿ ಅದೇ ಟೀಂನಲ್ಲಿದ್ದಾರೆ. ನಾನು ಅವರನ್ನು ಖರೀದಿಸುವಾಗ ಸಣ್ಣ ವಯಸ್ಸಿನ ಹುಡುಗ ಕೊಹ್ಲಿ. ಆದರೆ, ಅವರೊಬ್ಬ ಪ್ರತಿಭಾವಂತ ಎಂಬುದು ನಿಮಗೆ ಗೊತ್ತಾಗಿದೆ. ಇದುವರೆಗಿನ ಶ್ರೇಷ್ಠ ಭಾರತೀಯ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ ಎಂದು ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ.

TAGGED:rcbRoyal Challengevijay mallyavirat kohliಆರ್‍ಸಿಬಿವಿಜಯ್ ಮಲ್ಯವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
6 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
45 minutes ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
51 minutes ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
1 hour ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
1 hour ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?