ಶಿವರಾಜ್ ಕುಮಾರ್ (Shivraj Kumar) ಮತ್ತು ಶ್ರೀನಿ (Srinivas) ಕಾಂಬಿನೇಷನ್ ನ ‘ಘೋಸ್ಟ್’ (Ghost) ಸಿನಿಮಾ ಕುರಿತಾಗಿ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿವೆ. ಮೊನ್ನೆಯಷ್ಟೇ ಬಾಲಿವುಡ್ ನಟ ಅನುಪಮ್ ಖೇರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಮತ್ತೋರ್ವ ಹೆಸರಾಂತ ನಟನ ಹೆಸರು ತೇಲಿಬಂದಿದ್ದು, ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಘೋಸ್ಟ್ ಸಿನಿಮಾದ ಭಾಗವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮಿಳು, ತೆಲುಗು ಸಿನಿಮಾಗಳಲ್ಲಿ ಸಾಕಷ್ಟು ಬ್ಯುಸಿಯಾಗಿರುವ ವಿಜಯ್ ಸೇತುಪತಿ, ನಿಜವಾಗಿಯೂ ಕನ್ನಡ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಾರಾ ಎನ್ನುವ ಪ್ರಶ್ನೆ ಅನೇಕರದ್ದು. ಅದಕ್ಕೆ ನಿರ್ದೇಶಕ ಶ್ರೀನಿ ಹೇಳುವುದು ಹೀಗೆ, ‘ವಿಜಯ್ ಸೇತುಪತಿ ಅವರನ್ನು ಅಪ್ರೋಚ್ ಮಾಡಿದ್ದೇವೆ. ಅವರಿಂದ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ’ ಎನ್ನುತ್ತಾರೆ. ಈ ಮೂಲಕ ತಾವು ವಿಜಯ್ ಸೇತುಪತಿ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ಮಾಡಿದ್ದೇವೆ ಎಂದು ಒಪ್ಪಿಕೊಳ್ಳುತ್ತಾರೆ. ಇದನ್ನೂ ಓದಿ: ಸಿಹಿ ಸುದ್ದಿ ಕೊಡಲು ಸಜ್ಜಾದ್ರಾ ನಟ ಸಿದ್ಧಾರ್ಥ್- ಅದಿತಿ ರಾವ್ ಹೈದರಿ?
ಈಗಾಗಲೇ ಎರಡು ಹಂತದ ಚಿತ್ರೀಕರಣವನ್ನು ಮುಗಿಸಿರುವ ಶ್ರೀನಿ, ಮೂರನೇ ಹಂತದ ಶೂಟಿಂಗ್ ಅನ್ನು ಫೆ.10 ರಿಂದ ಬೆಂಗಳೂರಿನಲ್ಲೇ ಆರಂಭಿಸಲಿದ್ದಾರೆ. ಈ ಹಂತದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್, ಅರ್ಚನಾ ಜೋಯಿಸ್ ಸೇರಿದಂತೆ ಹಲವರು ಇರಲಿದ್ದಾರೆ. ಸಂದೇಶ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರ ಇದಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k