Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?

Bengaluru City

ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?

Public TV
Last updated: October 2, 2025 9:25 am
Public TV
Share
3 Min Read
banni Habba
SHARE

ನವರಾತ್ರಿಯ ಕೊನೆಯ ದಿನ ಬನ್ನಿ ಪೂಜೆಯನ್ನು ಮಾಡಲಾಗುತ್ತದೆ. ಬನ್ನಿ ಕೊಡುವ ಸಂಪ್ರದಾಯದೊಂದಿಗೆ ಈ ದಸರಾ ಹಬ್ಬವನ್ನು ಆಚರಿಸುತ್ತೇವೆ. ಬನ್ನಿಯ ಮಹತ್ವವೇನು? ಯಾಕೆ ಬನ್ನಿ ಕೊಡುವ ಸಂಪ್ರದಾಯವಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ವಿಜಯದಶಮಿ ಹೆಸರೇ ಹೇಳುವಂತೆ ವಿಜಯದ ಸಂಕೇತವಾಗಿರುವ ವಿಜಯ ದಶಮಿಯ ದಿನ ಬನ್ನಿ ವೃಕ್ಷವನ್ನು ಪೂಜಿಸಲಾಗುತ್ತದೆ. ಬನ್ನಿ ವೃಕ್ಷದ ಪೂಜೆ ಮಾಡುವುದು ಸಾಮಾನ್ಯ. ಆದರೆ ಪ್ರತಿಯೊಂದು ತನ್ನ ಒಳ ಕಥೆಯನ್ನು ಹೊಂದಿರುತ್ತದೆ. ಬನ್ನಿಯ ಹಿಂದೆ ಒಂದು ಪೌರಾಣಿಕ ಕಥೆಯಿದೆ.

ಹಿಂದೂ ಸಂಸ್ಕೃತಿಯ ಪ್ರತಿಯೊಂದು ವೈದಿಕ ಆಚಾರ-ವಿಚಾರಗಳೂ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿರುತ್ತದೆ. ಹಿಂದಿನ ಕಾಲದಲ್ಲಿ ಸೂರ್ಯವಂಶಸ್ಥ ರಘು ಮಹಾರಾಜ ಎಂಬ ರಾಜ ಭರತಖಂಡವನ್ನು ಆಳುತ್ತಿದ್ದ. ಈ ಸಮಯದಲ್ಲಿ ಕೌಸ್ಥೇಯನೆಂಬ ಬಡ ಬ್ರಾಹ್ಮಣ ಬಾಲಕನೊಬ್ಬ ವಿದ್ಯಾರ್ಜನೆಗೋಸ್ಕರ ಅರುಣಿ ಮಹರ್ಷಿಗಳೆಂಬ ಗುರುಗಳ ಗುರುಕುಲಕ್ಕೆ ಬಂದಿದ್ದ. ಆ ಮುನಿಗಳ ಆಶ್ರಯದಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ ಕೌಸ್ಥೇಯ ಗುರುಗಳಿಗೆ ವಿನಮ್ರಪೂರ್ವಕವಾಗಿ ಕೈ ಮುಗಿದು ತಾನು ಗುರುದಕ್ಷಿಣೆಯಾಗಿ ಏನು ಕೊಡಬೇಕೆಂದು ಕೇಳುತ್ತಾನೆ. ಅರುಣೀ ಮುನಿಗಳು ಕೌಸ್ಥೇಯನು ಬಡವನಾದ್ದರಿಂದ ಯಾವುದೇ ಗುರುದಕ್ಷಿಣೆಯನ್ನು ಅಪೇಕ್ಷಿಸದೆ ಗುರುಕುಲವನ್ನು ಬಿಡುವ ಆಜ್ಞೆ ನೀಡುತ್ತಾರೆ. ಆದರೆ ಕೌಸ್ಥೇಯನು ಗುರುದಕ್ಷಿಣೆಯಾಗಿ ಏನನ್ನಾದರೂ ಆಜ್ಞಾಪಿಸಬೇಕೆಂದು ಆಗ್ರಹ ಪೂರ್ವಕವಾಗಿ ಪ್ರಾರ್ಥಿಸುತ್ತಾನೆ. ಇದರಿಂದ ಕುಪಿತಗೊಂಡ ಅರುಣಿ ಮಹರ್ಷಿಗಳು “ಗುರುದಕ್ಷಿಣೆ” ಕೊಡುವುದೇ ಇದ್ದರೆ “ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೊಡು” ಎದು ಬಡ ಕೌಸ್ಥೇಯನಿಗೆ ಅಸಾಧ್ಯವಾದ ಗುರುದಕ್ಷಿಣೆಯನ್ನು ಕೇಳಿಕೊಳ್ಳುತ್ತಾರೆ.

Banni Pooje 1

ಇಷ್ಟು ದೊಡ್ಡ ಗುರುದಕ್ಷಿಣೆ ಕೇಳುತ್ತಾರೆಂಬ ಕಲ್ಪನೆ ಕೂಡ ಕೌಸ್ಥೇಯ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಹೇಗೆ ಸ0ಪಾದಿಸುವುದೆಂಬ ಗಾಢ ಚಿಂತೆಗೆ ತೊಡಗುತ್ತಾನೆ. ಹೀಗೇ ರಘು ಮಹಾರಾಜನ ಆಸ್ಥಾನಕ್ಕೆ ಕೌಸ್ಥೇಯ ಬಂದು ತಲುಪುತ್ತಾನೆ. ರಘು ಮಹಾರಾಜ ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ತನ್ನ ಪತ್ನಿ ಸಮೇತ ತನ್ನ ರಾಜಭಂಡಾರದ ಸಮಸ್ತ ಧನವನ್ನು ಪ್ರಜೆಗಳಿಗೆ ದಾನವಾಗಿ ಕೊಡುವ ಪರಿಪಾಠವಿಟ್ಟುಕೊಂಡಿರುತ್ತಾನೆ. ಆ ರೀತಿ ದಾನ ನೀಡಿ ಕೆಲವೇ ದಿನಗಳು ಕಳೆದಿರುತ್ತವೆ. ರಾಜ ಭಂಡಾರ ಬರಿದಾಗಿರುತ್ತದೆ. ರಘು ಮಹಾರಾಜನ ತಪಃಶಕ್ತಿಯ ಫಲವಾಗಿ ಕೆಲವೇ ವರ್ಷಗಳಲ್ಲಿ ರಾಜಕೋಶವು ಮತ್ತೆ ತುಂಬುತ್ತಿರುತ್ತದೆ. ರಾಜನು ಒಮ್ಮೆ ಕೌಸ್ಥೇಯನಿಗೆ ನಿತ್ಯ ಆಸ್ಥಾನಕ್ಕೆ ಬರುವ ಕಾರಣವೇನೆಂದು ಕೇಳುತ್ತಾನೆ. ಕೌಸ್ಥೇಯ ತನ್ನ ಸಮಸ್ಯೆಯನ್ನು ಮಹಾರಾಜನಲ್ಲಿ ಹೇಳಿಕೊಳ್ಳುತ್ತಾನೆ.

ರಾಜ್ಯಕೋಶ ಬರಿದಾದ ಮಹಾರಾಜ ಕೌಸ್ಥೇಯನಿಗೆ ಶೀಘ್ರವಾಗಿ ಸಹಾಯ ಮಾಡಬೇಕೆoಬ ಸದುದ್ದೇಶದಿಂದ ಧನಾಧಿಪತಿಯಾದ ಕುಬೇರನ ಮೇಲೆ ಯುದ್ಧವನ್ನು ಮಾಡಿ ಕೌಸ್ಥೇಯನ ಮನೋಭಿಲಾಷೆಯನ್ನು ಪೂರ್ಣಗೊಳಿಸುವುದೆ಼ದು ಸoಕಲ್ಪ ಮಾಡುತ್ತಾನೆ. ತನ್ನ ಚತುರಂಗ ಬಲ ಸಮೇತ ಕುಬೇರನ ಮೇಲೆ ಯುದ್ಧಕ್ಕೆ ಪ್ರಸ್ಥಾನ ಮಾಡುವಾಗ ಮಾರ್ಗ ಮಧ್ಯೆ ರಾತ್ರಿಯಾದ ಕಾರಣ ಒoದು ವನದಲ್ಲಿ ರಾಜ ಬಿಡಾರ ಹಾಕುತ್ತಾನೆ. ಅದು ಶಮೀವೃಕ್ಷಗಳಿ0ದ ತುಂಬಿದ ವನ. ಇದೇ ಸಂದರ್ಭದಲ್ಲಿ ಕುಬೇರನಿಗೆ ರಘು ಮಹಾರಾಜ ವಿದ್ಯಾರ್ಥಿಯೊಬ್ಬನ ಗುರುದಕ್ಷಿಣೆಯಾಗಿ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೂಡಿಸುವ ಸದುದ್ದೇಶದಿ0ದ ತನ್ನ ಮೇಲೆ ಯುದ್ಧಕ್ಕೆ ಬರುತ್ತಿರುವ ವಿಷಯ ತಿಳಿಯುತ್ತದೆ. ರಾಜನ ಸದುದ್ದೇಶ ಕೇಳಿ ಸುಪ್ರೀತನಾದ ಕುಬೇರ, ತನ್ನ ಮಾಯಾ ಶಕ್ತಿಯಿಂದ ರಘು ಮಹಾರಾಜ ಬಿಡಾರ ಹೂಡಿದ್ದ ಶಮೀವೃಕ್ಷದ ಪ್ರತಿಯೊ0ದು ಎಲೆಯೂ ಸುವರ್ಣ ನಾಣ್ಯವಾಗುವಂತೆ ಮಾಡುತ್ತಾನೆ.

ಸೂರ್ಯೋದಯವಾಗುತ್ತಿದ್ದಂತೆಯೇ ಶಮೀವೃಕ್ಷದ ಎಲೆಗಳೆಲ್ಲಾ ಸುವರ್ಣ ನಾಣ್ಯಗಳಾಗಿ ಪರಿವರ್ತನೆಗೊಳ್ಳುತ್ತವೆ. ರಾಜ ಇದನ್ನು ದೈವೀಕೃಪೆ ಎoದು ಭಾವಿಸಿ ಕುಬೇರನ ಮೇಲೆ ತಾನು ಹೂಡಬೇಕಿದ್ದ ಯುದ್ಧವನ್ನು ತ್ಯಜಿಸುತ್ತಾನೆ. ಬಳಿಕ ಶಮೀವನಕ್ಕೆ ಕೌಸ್ಥೇಯನನ್ನು ಕರೆಯಿಸುತ್ತಾನೆ ಹಾಗೂ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ತೆಗೆದುಕೊಂಡು ಅರುಣೀ ಮಹರ್ಶಿಗಳ ಗುರುದಕ್ಷಿಣೆಯ ಋಣವನ್ನು ತೀರಿಸಲು ಹೇಳುತ್ತಾನೆ.

Banni Pooje 2

ರಾಜನ ಭಂಡಾರ ಮತ್ತೆ ಸುವರ್ಣ ನಾಣ್ಯಗಳಿoದ ತುಂಬಿ ತುಳುಕುತ್ತದೆ. ಈ ಅಸಾಧ್ಯವೆನಿಸಿದ ಗುರುದಕ್ಷಿಣೆಯನ್ನು ಸ್ವೀಕರಿಸಿದ ಅರುಣೀ ಮಹರ್ಷಿಗಳು ಕೌಸ್ಥೇಯನ ಗುರುಭಕ್ತಿಯನ್ನೂ, ರಘು ಮಹಾರಾಜನ ಸಹಾಯಕ ಗುಣ ಮತ್ತು ದಾನದ ಗುಣವನ್ನು ಕಂಡು ಮನಃಪೂರ್ವಕವಾಗಿ ಹರಸುತ್ತಾರೆ. ಶಮೀವೃಕ್ಷದ ಎಲೆಗಳು ಸ್ವರ್ಣ ಮುದ್ರೆಗಳಾಗಿ ಪರಿವರ್ತನೆಯಾದ ದಿನವೇ ಅಶ್ವಯುಜ ಮಾಸ, ಶುಕ್ಲ ಪಕ್ಷ ದಶಮಿ ಅಥವಾ ಶರನ್ನವರಾತ್ರಿಯ ವಿಜಯದಶಮಿ. ಈ ಪುಣ್ಯತೋಮಯ ದಿನದಂದು ಶಮೀವೃಕ್ಷಕ್ಕೆ ಭಕ್ತಿಯಿ0ದ ಪೂಜೆ ಮಾಡಿ, ಶಮೀಪತ್ರೆಗಳನ್ನು ಮನೆಗೆ ತಂದು ತಿಜೋರಿ, ಗಲ್ಲ, ಆಭರಣದ ಪೆಟ್ಟಿಗೆ ಇತ್ಯಾದಿಗಳಲ್ಲಿ ಇಡುವುದರಿಂದ ಧನ-ಧಾನ್ಯ ಸಮೃದ್ಧಿಯಾಗುವುದೆಂಬ ನ0ಬಿಕೆಯಿದೆ.

ಹೀಗಾಗಿ ದಸರಾ ಸಂದರ್ಭದಲ್ಲಿ ಬನ್ನೀ ವೃಕ್ಷವನ್ನು ಅತ್ಯಂತ ವಿಶೇಷವಾಗಿ ಪೂಜಿಸಲಾಗುತ್ತದೆ. ಇದೇ ಬನ್ನಿ ವೃಕ್ಷದಲ್ಲಿ ಪಾಂಡವರು ತಮ್ಮ ಆಯುಧಗಳನ್ನು ಬಚ್ಟಿಟ್ಟು, ವಿಜಯದಶಮಿಯಂದು ಹೊರತೆಗೆದಿದ್ದರು ಎಂಬ ಪ್ರತೀತಿ ಕೂಡ ಇದೆ.

TAGGED:Banni HabbaBanni PoojeDasara 2025Vijayadashamiದಸರಾ 2025ಬನ್ನಿ ಪೂಜೆವಿಜಯ ದಶಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
1 hour ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?