ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಯೂಟರ್ನ್

Public TV
1 Min Read
BGK KASHAPPA

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್, ಸಚಿವ ಆರ್.ಬಿ ತಿಮ್ಮಾಪುರ್ ಹಾಗೂ ಎಐಸಿಸಿ ಪ್ರಚಾರ ಸಮಿತಿ ಉಪಧ್ಯಾಕ್ಷರಾದ ಎಸ್.ಜಿ ನಂಜಯನಮಠ ಅವರೇ ಕಾರಣ ಎಂದು ಆರೋಪಿಸಿದ್ದ ಹುನಗುಂದ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸದ್ಯ ಯೂಟರ್ನ್ ಹೊಡೆದಿದ್ದಾರೆ.

ತಮ್ಮ ಧರ್ಮಪತ್ನಿ ಕಾಂಗ್ರೆಸ್ ಪಕ್ಷದ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಈ ಹಿಂದೆ ನಾನು ವಿಧಾನಸಭಾ ಚುನಾವಣೆಯಲ್ಲಿ ಸೋತ ನೋವಿನಿಂದ ಆಕ್ರೋಶ ಭರಿತನಾಗಿ ತಪ್ಪು ತಿಳುವಳಿಕೆಯಿಂದ ನಾನು ಪಕ್ಷದ ಕೆಲವು ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದೆ. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚರ್ಚಿಸಿ ಇದಕ್ಕೆ ವಿಷಾಧ ವ್ಯಕ್ತಪಡಿಸಿದ್ದೇನೆ. ನನ್ನ ತಪ್ಪು ಮಾತುಗಳಿಂದ ಹಿರಿಯ ನಾಯಕರುಗಳಿಗೆ ನೋವಾಗಿದರೆ ಬಹಿರಂಗವಾಗಿ ಕ್ಷಮೆಯಾಚಿಸುತ್ತೇನೆ ಎಂದು ಸಮಜಾಯಿಸಿ ನೀಡಿದ್ದಾರೆ.

BGK CONGRESS NOMINATION AVB 1

ಎಲ್ಲ ಹಿರಿಯರ ಜೊತೆ ಸೇರಿ ಪಕ್ಷದ ಲೋಕಸಭಾ ಅಭ್ಯರ್ಥಿ ವೀಣಾ ಕಾಶಪ್ಪನವರ್ ಅವರನ್ನು ಗೆಲ್ಲಿಸಲು ಶ್ರಮಿಸೋಣ. ಈ ಜಿಲ್ಲೆಯನ್ನು ಮತ್ತೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿ ಕಟ್ಟೋಣ ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೂ ಮುಂಚೆ ಸಹ ಪರಿವಾರದೊಂದಿಗೆ ಜಿಲ್ಲಾಡಳಿತ ಭವನಕ್ಕೆ ತೆರಳಿದ ವೀಣಾ ಕಾಶಪ್ಪನವರ್, ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ವೇಳೆ ವೀಣಾ ಕಾಶಪ್ಪನವರ್ ಗೆ ಮಾಜಿ ಸಚಿವರಾದ ಎಚ್.ವೈ ಮೇಟಿ, ಬಿ.ಆರ್ ಯಾವಗಲ್ ಸಾಥ್ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *