ವಿಜಯಪುರ: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಅಗ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಲುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಮನ್ ಸಿವಿಲ್ ಕೋಡ್ ಜಾರಿ ಮಾಡಿ ಎಲ್ಲರಿಗೂ ಒಂದೇ ಕಾನೂನು ತರಲಾಗುವುದು. ಎಲ್ಲರು ಒಂದೇ ಮದುವೆ ಆಗಬೇಕು, ಎರಡೇ ಮಕ್ಕಳನ್ನು ಪಡೆಯಬೇಕು ಎಂದು ನಿಯಮ ಮಾಡುತ್ತೇವೆ. ಕಾಶ್ಮೀರಕ್ಕೆ ನೀಡಲಾದ 370ನೇ ವಿಧಿ ತೆಗೆದು ಹಾಕಿ ಸಮಾನ ನಾಗರಿಕ ಸಂಹಿತೆ ತರಲಾಗುವುದು ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಮಾಡುತ್ತೇವೆ. ಕಾಶಿ ವಿಶ್ವನಾಥ ದೇವಾಲಯವನ್ನು ಪುನಃ ನಿರ್ಮಾಣ ಮಾಡುತ್ತೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತ ಹೆಚ್ಚು ಸ್ಥಾನ ಬರುತ್ತದೆ. ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಯತ್ನಾಳ್ ವಿಶ್ವಾಸ ವ್ಯಕ್ತಪಡಿಸಿದರು.