Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಚಿವರಂತೆ ಶಾಸಕರಿಗೂ ಅಭಿವೃದ್ಧಿಗೆ ಹಣ ಕೊಡ್ಬೇಕು: ಯತ್ನಾಳ್

Public TV
Last updated: February 10, 2020 4:15 pm
Public TV
Share
2 Min Read
bij 2
SHARE

– ಕಿರಿಯರಿಗೆ ಸಚಿವರಾಗಲು ಹಿರಿಯರು ಅವಕಾಶ ನೀಡ್ಬೇಕು

ವಿಜಯಪುರ: ಸಿಎಂ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಪಕ್ಷಕ್ಕೆ ಬೆಂಬಲ ನೀಡಿದ್ದ 10 ಜನ ಕೂಡ ಸಚಿವರಾಗಿದ್ದಾರೆ. ಈಗಾಗಲೇ ಅವರಿಗೆ ಅಭಿವೃದ್ಧಿಗಾಗಿ ಸಾಕಷ್ಟು ಹಣವನ್ನು ಸಿಎಂ ಅವರು ಕೊಟ್ಟಿದ್ದಾರೆ. ಬರುವ ಬಜೆಟ್ ನಲ್ಲಿ ಎಲ್ಲಾ ಶಾಸಕರಿಗೂ ಸಮನಾಗಿ ಅಭಿವೃದ್ಧಿಗೆ ಹಣ ಕೊಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿಕೊಂಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮಾನತೆ ಆಗಿದೆ. ಅಲ್ಲದೆ ಎಲ್ಲಾ ಜಿಲ್ಲೆಗಳಿಗೆ, ಎಲ್ಲ ಭಾಗಗಳಿಗೆ ಪ್ರಾತಿನಿದ್ಯ ಕೊಡಬೇಕಿದೆ. ಅಲ್ಪ-ಸ್ವಲ್ಪ ಪುನರ್ ರಚನೆಯಾದ್ರೂ ಪರವಾಗಿಲ್ಲ. ಹಾಗಾಗಿ ಕೆಲ ಹಿರಿಯ ಸಚಿವರು ತ್ಯಾಗ ಮಾಡಬೇಕು, ಹೊಸಬರಿಗೆ ಅವಕಾಶ ಕೊಡಬೇಕು ಎನ್ನುವ ಮೂಲಕ ತಮಗೂ ಸಚಿವ ಸ್ಥಾನ ಸಿಗಬೇಕಿತ್ತು ಎಂಬ ಅಸಮಾಧಾನ ಹೊರಹಾಕಿದ್ದಾರೆ.

CABINET BSY 2 copy

ರಾಜ್ಯ ಸರ್ಕಾರ 3 ವರ್ಷ ಸುಭದ್ರವಾಗಿರಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಪತ್ರ ಬರೆದಿದ್ದೇನೆ. ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮಾನತೆ, ಬಜೆಟ್ ನಲ್ಲಿ ಹಣ ಮೀಸಲು ಬಗ್ಗೆ ಶಾಸಕರೊಂದಿಗೆ ಚರ್ಚಿಸಬೇಕು. ಸಚಿವ ಸಂಪುಟ ಈಗ ಕೇವಲ ಬೆಂಗಳೂರು, ಬೆಳಗಾವಿಗೆ ಎಂಬಂತಾಗಿದೆ. ಸಚಿವ ಸ್ಥಾನದ ಬಗ್ಗೆ ಬಿಜೆಪಿ ಶಾಸಕರ ಆಕಾಂಕ್ಷೆಗಳಿಗೆ ಸ್ಪಂದಿಸಬೇಕು ಎಂದು ಪತ್ರ ಬರೆದಿದ್ದೇನೆ. ಈ ಕುರಿತು ಚರ್ಚಿಸಲು ಸಿಎಂಗೆ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಪತ್ರ ಬರೆದಿದ್ದೇನೆ ಎಂದರು.

ಮುಖ್ಯಮಂತ್ರಿಗಳ ಮೇಲೆ ನಮಗೆ ಅದಮ್ಯ ವಿಶ್ವಾಸವಿದೆ. ಅವರು ಮೂರು ವರ್ಷ ಉಳಿಯಬೇಕು, ಸಿಎಂ ಆಗಿರಬೇಕು ಎಂದರು. ಅವರ ಸಚಿವ ಸಂಪುಟದ ಬಗ್ಗೆ ಅವರೇ ಹೇಳಿಕೆ ಕೊಡಬೇಕು. ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಡಗು, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗಕ್ಕೆ ಸೇರಿದಂತೆ ಅನೇಕ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ತಿಳಿಸಿದರು.

BGVIJAYAPURAYATNAL APP

ಈ ಜಿಲ್ಲೆಗಳಿಗೆಲ್ಲ ನ್ಯಾಯ ಕೊಡಬೇಕು, ಉತ್ತರ ಕರ್ನಾಟಕವೇ ಬಿಜೆಪಿಗೆ ಬೇಸ್(ಮೂಲ) ಆಗಿದೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಗೂ ಒಂದೊಂದು ಸಚಿವ ಸ್ಥಾನ ಕೊಡಬೇಕು ಎನ್ನುವ ಮೂಲಕ ತಮಗೂ ಸಿಗಬೇಕಿದೆ ಎಂಬ ಅಭಿಪ್ರಾಯವನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ. ಅಲ್ಲದೆ ಎಲ್ಲಾ ಒಯ್ದು ಬೆಂಗಳೂರು, ಮಂಗಳೂರಿಗೆ ಕೊಟ್ರೆ ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ನಾವು ಇದ್ದೀವಿ ಅನ್ನೋ ನೋವು ಶಾಸಕರಲ್ಲಿದೆ, ಹಾಗಾಗಿ ಅವರೊಂದಿಗೆ ಸಿಎಂ ಚರ್ಚೆ ಮಾಡಬೇಕು. ಯಡಿಯೂರಪ್ಪನವರು ಸಮರ್ಥರಿದ್ದಾರೆ, ಮಾಡ್ತಾರೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಎಲ್ಲ ಶಾಸಕರ ಭಾವನೆ ಹೇಳಿದ್ದೇನೆ. ಇದು ನನ್ನ ವೈಯಕ್ತಿಕ ಅಲ್ಲ, ನಾನೇನು ಬೇಡುವುದೂ ಇಲ್ಲ ಎನ್ನುವ ಮೂಲಕ ಅಸಮಾಧಾನವನ್ನು ಸರಿಪಡಿಸಿಕೊಂಡ ಯತ್ನಾಳ್, ಸಿಎಂ ಒಳ್ಳೆ ಬಜೆಟ್ ನೀಡಲು ರೆಡಿ ಇದ್ದಾರೆ ಎಂದು ಹೇಳಿದರು.

TAGGED:Basangouda Patil YatnalcabinetPublic TVVijayapurಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ವಿಜಯಪುರಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
6 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
8 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
19 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
22 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
31 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
36 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?