Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರಕ್ಕೆ ನೀರು ಬಿಡುವ ಬಗ್ಗೆ ಸಿಎಂ ಪರ ಯತ್ನಾಳ್ ಬ್ಯಾಟಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಾರಾಷ್ಟ್ರಕ್ಕೆ ನೀರು ಬಿಡುವ ಬಗ್ಗೆ ಸಿಎಂ ಪರ ಯತ್ನಾಳ್ ಬ್ಯಾಟಿಂಗ್

Districts

ಮಹಾರಾಷ್ಟ್ರಕ್ಕೆ ನೀರು ಬಿಡುವ ಬಗ್ಗೆ ಸಿಎಂ ಪರ ಯತ್ನಾಳ್ ಬ್ಯಾಟಿಂಗ್

Public TV
Last updated: October 17, 2019 8:25 pm
Public TV
Share
2 Min Read
Yatnal BSY
SHARE

– ಕರ್ನಾಟಕ, ಮಹಾರಾಷ್ಟ್ರ ಒಂದೇ ತಾಯಿಯ ಮಕ್ಕಳಿದ್ದಂತೆ
– ಕೊಡುವುದು, ಕೊಳ್ಳುವುದು ಸಹಜ ಪ್ರಕ್ರಿಯೆ

ವಿಜಯಪುರ: ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರವಾಗಿ ಹೇಳಿಕೆ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಟ್ ಬೀಸಿದ್ದಾರೆ.

ನಗರದಲ್ಲಿ ಮಾತನಾಡಿದ ಶಾಸಕರು, ಕರ್ನಾಟಕ ಹಾಗೂ ಮಹಾರಾಷ್ಟ್ರ ಒಂದೇ ತಾಯಿಯ ಮಕ್ಕಳಿದ್ದಂತೆ. ಕೇಂದ್ರ ಬಿಜೆಪಿ ಸರ್ಕಾರವು ಕಾಶ್ಮೀರ ಸಮಸ್ಯೆಯನ್ನೇ ಬಗೆಹರಿಸಿದೆ. ಇನ್ನು ರಾಜ್ಯಗಳ ಮಧ್ಯೆ ಇರುವ ಜಲ ಸಮಸ್ಯೆ ಬಗೆಹರಿಸುವುದಿಲ್ಲವೇ? ನದಿಗಳ ಜೋಡನೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಪ್ರಮುಖ್ಯತೆ ನೀಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ಕರ್ನಾಟಕದ ನೀರು – ಸಿಎಂ ಬಿಎಸ್‍ವೈ ಸ್ಪಷ್ಟನೆ

ಕರ್ನಾಟಕ, ಮಹಾರಾಷ್ಟ್ರ ಸಹೋದರ ರಾಜ್ಯಗಳು. ಕೊಡುವುದು, ಕೊಳ್ಳುವುದು ಸಹಜ ಪ್ರಕ್ರಿಯೆ. ವ್ಯಾಜ್ಯಗಳು ಬಂದಾಗ ಕರ್ನಾಟಕ ತನ್ನ ನಿಲುವನ್ನು ಯಾವತ್ತೂ ಬದಲಿಸಿಲ್ಲ. ಮಹದಾಯಿ ವಿವಾದದಲ್ಲಿ ಗೋವಾ ಮಾತ್ರ ಮೊಂಡುತನ ತೋರುತ್ತಿದೆ. ಈ ಸಮಸ್ಯೆಯನ್ನು ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಬೇಕು ಎಂದರು.

Narendra Modi A

ಮಹಾರಾಷ್ಟ್ರದ ಜತ್ ಭಾಗದಲ್ಲಿ ಕನ್ನಡಿಗರೇ ಹೆಚ್ಚಾಗಿದ್ದಾರೆ. ಈ ಹಿಂದೆ ಬಿ.ಡಿ.ಜತ್ತಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದು ಪ್ರಮಾದವಾಗಿದೆ. ಅನೇಕ ಬಾರಿ ಮಹಾರಾಷ್ಟ್ರ ಹಣ ಪಡೆಯದೇ ಕೃಷ್ಣಾ, ಭೀಮಾ ನದಿ ಮೂಲಕ ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡಿದೆ. ಇಲ್ಲಿ ಕೊಡುವ, ಕೊಳ್ಳುವ ನೀತಿ ಅನುಸರಿಸುವುದು ಸೂಕ್ತ. ಭಾರತವು ಪಾಕಿಸ್ತಾನಕ್ಕೆ ನೀರು ಬಿಟ್ಟಿದೆ. ಹೀಗಿರುವಾಗ ನೆರೆ ರಾಜ್ಯಗಳಿಗೆ ನೀರು ಪೂರೈಕೆ ಮಾಡದೆ ಇರುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಗಡಿ, ಜಲ ವಿವಾದ ಮೀರಿ ಮಾನವೀಯತೆ ಮೇಲೆ ವರ್ತಿಸುವುದು ಅಗತ್ಯವಾಗಿದೆ. ಮಹದಾಯಿ ವಿವಾದದಲ್ಲಿ ಕೇಂದ್ರ ಸರ್ಕಾರ ಗೋವಾ ಜೊತೆ ಮಾತನಾಡಬೇಕು. ಮಹಾರಾಷ್ಟ್ರ, ಕರ್ನಾಟಕ ಒಂದಾದರೆ ಗೋವಾ ಒಪ್ಪಲೇ ಬೇಕಾಗುತ್ತದೆ. ಈ ಮೂಲಕ ಮಹದಾಯಿ ಸಮಸ್ಯೆಗೆ ಪರಿಹಾರ ಸಿಗಲಿದೆ. ಸಿಎಂ ಯಡಿಯೂರಪ್ಪ ಅವರು ಈಗಷ್ಟೇ ಅಲ್ಲ, ಚುನಾವಣೆ ಬಳಿಕವೂ ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

BSY 3

ಬಿಎಸ್‍ವೈ ಹೇಳಿದ್ದೇನು?
ಮಹಾರಾಷ್ಟ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿಎಸ್‍ವೈ, ಜತ್ ತಾಲೂಕಿನ ಹೆಚ್ಚು ಜನರು ಕನ್ನಡ ಭಾಷಿಕರು. ಕೃಷಿ ಮತ್ತು ಕುಡಿಯುವ ನೀರಿನ ಅಭಾವ ತೀವ್ರವಾಗಿರುವಂತದ್ದು. ಇವತ್ತು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ತಲುಪಿದೆ. ಈ ಗ್ರಾಮದಿಂದ 8-10 ಕಿಮೀ ದೂರದಲ್ಲಿ ಹರಿಯುತ್ತಿರುವ ಬೋರಾ ನದಿಗೆ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಹರಿಸುವುದರಿಂದ 30-40 ಗ್ರಾಮಗಳಿಗೆ 1 ಲಕ್ಷಕ್ಕೂ ಹೆಚ್ಚು ಜನರಿಗೆ ಇದರಿಂದ ಅನುಕೂಲ ಆಗುತ್ತೆ ಅನ್ನೋದನ್ನು ಕೇಳಿದ್ದೇವೆ.

ನಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಹಾರಾಷ್ಟ್ರ ಸಿಎಂ ಘಡ್ನವೀಸ್ ಜೊತೆಗೂ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಬೇರೆ, ಕರ್ನಾಟಕ ಬೇರೆಯಲ್ಲ. ನೀರಿಲ್ಲದಿದ್ದರೆ ಬದುಕಲು ಆಗಲ್ಲ. ರೈತರ ಹೊಲಕ್ಕೆ ನೀರು ಬೇಕು, ರೈತರ ಬೆಳೆದಂತಹ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕು. ರೈತರ ಉತ್ಪನ್ನ 2 ಪಟ್ಟು ಹೆಚ್ಚಾಗಬೇಕು ಅಂತಾ ಪ್ರಧಾನಿ ಮೋದಿ ಅಪೇಕ್ಷೆ ಇದೆ. ಇದನ್ನು ಪೂರೈಸಲು ನಮ್ಮ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ನಿಮಗೆ ಯಾವ ರೀತಿ ಅನುಕೂಲ ಮಾಡಕ್ಕೆ ಸಾಧ್ಯ ಇದೆಯೋ, ಚರ್ಚೆ ಮಾಡಿ ಸಹಕಾರ ಕೊಡುತ್ತೇನೆ. ಯಡಿಯೂರಪ್ಪ ಬಂದಿದ್ದಕ್ಕೆ, ಇಲ್ಲಿ ಮಾತನಾಡಿದ್ದಕ್ಕೆ ಹಿಂದಿನ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಡಬೇಕು ಎಂದು ಮತದಾರರಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದರು.

TAGGED:B.S.YeddyurappaBasangouda Patil YatnalbjpkarnatakamaharashtraPublic TVvijayapurawaterನೀರುಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ ಶಾಸಕಮಹಾರಾಷ್ಟ್ರಸಿಎಂ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
5 minutes ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
37 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
41 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
2 hours ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
2 hours ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?