ಟಿಸಿ ಹೊತ್ತು ನೀರಿನಲ್ಲಿ ಈಜಿದ ಎತ್ತುಗಳು

Public TV
1 Min Read
collage bij

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಮಲದಿನ್ನಿಯಲ್ಲಿ ಬಂಡಿ ಜೋಡಿಸಿದ ಎತ್ತುಗಳೊಂದಿಗೆ ರೈತರು ಸಾಹಸ ಮೆರೆದಿದ್ದಾರೆ. ಎತ್ತಿನ ಬಂಡಿಯಲ್ಲಿ ಟಿಸಿಯನ್ನು ಕೃಷ್ಣ ನದಿಯ ದಡ ಸೇರಿಸಿದ್ದಾರೆ.

ಪ್ರಾಣ ಒತ್ತೆ ಇಟ್ಟು ಎತ್ತುಗಳಿಂದ ವಿದ್ಯುತ್ ಪರಿವರ್ತಕ (ಟಿ.ಸಿ)ಯನ್ನು ಸ್ಥಳಾಂತರ ಮಾಡಲಾಗಿದೆ. ಕೃಷ್ಣಾ ನದಿಯ ಪ್ರವಾಹದ ನೀರಿನಲ್ಲಿ ಮುಳುಗಿ ಸುಟ್ಟುಹೋಗಿದ್ದ ಟಿಸಿಯನ್ನು ಇದೀಗ ಪ್ರವಾಹ ಕಡಿಮೆ ಆಗಿದ್ದರಿಂದ ಟಿಸಿ ದುರಸ್ತಿಗೆ ರೈತರು ತೆಗೆದುಕೊಂಡು ಹೋಗಿದ್ದಾರೆ.

collage bij ox 2

ಟಿಸಿ ಸ್ಥಳಾಂತರಿಸಲು ರೈತರು, ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಈ ಸಾಹಸ ಮಾಡಿದ್ದಾರೆ. ಕೃಷ್ಣಾ ನದಿ ಪ್ರವಾಹದಿಂದ ಸಂಗ್ರಹಗೊಂಡ ಹಳ್ಳದ ನೀರಿನಲ್ಲಿ ಎತ್ತಿನ ಬಂಡಿ ಸಮೇತ ಟಿಸಿಯನ್ನು ರೈತರು ಹೊತ್ತೊಯ್ಯುದಿದ್ದಾರೆ. ನೀರಲ್ಲಿ ಪೂರ್ತಿ ಮುಳುಗಿದ್ದರೂ ಎತ್ತುಗಳು ಬಂಡಿಯನ್ನು ಈಜಿಕೊಂಡು ದಡ ಸೇರಿಸಿವೆ. ತಂಗಡಗಿ ಶಾಖೆಯ ಸೆಕ್ಷನ್ ಅಧಿಕಾರಿ ಎಂ.ಎಸ್.ತೆಗ್ಗಿನಮಠ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *