ವಿಜಯಪುರ: ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು 45 ವರ್ಷದ ಶಿವಯೋಗಿ ಬಿರಾದಾರ್ ಎಂದು ಗುರುತಿಸಲಾಗಿದೆ. 5.29 ಎಕರೆ ಜಮೀನು ಹೊಂದಿರುವ ಶಿವಯೋಗಿ, ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
- Advertisement 2
- Advertisement 3
ಶಿವಯೋಗಿ ಗ್ರಾಮೀಣ ಬ್ಯಾಂಕ್ನಲ್ಲಿ 2 ಲಕ್ಷ ಮತ್ತು 5 ಲಕ್ಷ ಕೈಸಾಲ ಮಾಡಿದ್ದರು. ಮಳೆ ಇಲ್ಲದೆ ಬೆಳೆಗಳು ಕೈಕೊಟ್ಟಿದ್ದು, ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.