Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ ಕುಮಾರ್ ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ ಕುಮಾರ್ ಕಟೀಲ್

Dakshina Kannada

ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ ಕುಮಾರ್ ಕಟೀಲ್

Public TV
Last updated: January 3, 2023 10:15 am
Public TV
Share
2 Min Read
SIDDESHWARA SRI KATEEL
SHARE

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwara Swamiji), ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ (Nalin Kumar Kateel) ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Siddheshwar Swamij 1

ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

Siddheshwar Swamij 01

ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ದೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದವರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದಪ್ರಯೋಗ, ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದರು ಎಂದು ವಿವರಿಸಿದ್ದಾರೆ. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರು. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ದಾಸ ವಾಣಿಯಂತೆ ಅವರು ನಡೆದವರು ಎಂದಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

Siddheshwar Swamij 02

ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿದ್ದವು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.

Untitled 1 copy

ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಚೆಲ್ಲಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದವರು. ಅವರು ಜೀವನವನ್ನು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಪುಸ್ತಕಗಳು ನಮಗೆ ಮಾರ್ಗದರ್ಶನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ಅವರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:MangaluruNalin Kumar KateelSiddeshwara Sriನಳಿನ್ ಕುಮಾರ್ ಕಟೀಲ್ಮಂಗಳೂರುಸಿದ್ದೇಶ್ವರ ಶ್ರೀ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Shivalingegowda
Bengaluru City

ಕುಮಾರಸ್ವಾಮಿ ಎರಡು ಬಾರಿ ಲೀಸ್ ಬೇಸ್‌ನಲ್ಲಿಯೇ ಸಿಎಂ ಆಗಿದ್ದು: ಸಿದ್ದು ಸಮರ್ಥಿಸಿ ಶಿವಲಿಂಗೇಗೌಡ ಕಿಡಿ

Public TV
By Public TV
13 minutes ago
KJ George
Bengaluru City

ಜಿಬಿಎ 5 ಪಾಲಿಕೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಕೆ.ಜೆ.ಜಾರ್ಜ್

Public TV
By Public TV
25 minutes ago
G Parameshwar
Districts

ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ? – ಪರಮೇಶ್ವರ್

Public TV
By Public TV
39 minutes ago
Ramalinga Reddy
Bengaluru City

ಬೆಂಗಳೂರಿನ ಆಸ್ತಿ ಅಡಮಾನ ಇಟ್ಟಿದ್ದು ಬಿಜೆಪಿ ಸಾಧನೆ – ರಾಮಲಿಂಗಾರೆಡ್ಡಿ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Bagalkot

10 ವರ್ಷದ ಬಳಿಕ ಚಾಲುಕ್ಯ ಉತ್ಸವ – ಜ. 19 ರಂದು ಚಾಲನೆ

Public TV
By Public TV
1 hour ago
Bengaluru Kempegowda International Airport 4
Bengaluru City

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?