Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

Districts

ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

Public TV
Last updated: February 27, 2020 8:45 pm
Public TV
Share
2 Min Read
vijayapura
SHARE

– ಅಕ್ಕನ ಮನೆಗಾಗಿ ಜೀವಸವೆಸಿದ್ದ ತಂಗಿ
– ಅನಾಥ ಶವಗಳೆಂದು ಅಂತ್ಯಸಂಸ್ಕಾರ

ವಿಜಯಪುರ: ಸಾಕಿದ ಅಕ್ಕನ ಮಗಳೇ ದಿನಬೆಳಗಾದರೆ ಅಣುಕಿನ ಮಾತನಾಡುತ್ತಾಳೆ ಎಂದು ಬೇಸರಗೊಂಡು ಮಹಿಳೆಯೋರ್ವಳು ತನ್ನ ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಬಾಗಕೋಟೆ ಜಿಲ್ಲೆ ಮಧೋಳ ತಾಲೂಕಿನ ಮಳಲಿ ನಿವಾಸಿಯಾದ ತಾಯಿ ರೇಣುಕಾ ಹವಾಲ್ದಾರ (45), ಮಗಳು ಐಶ್ವರ್ಯ ಹವಾಲ್ದಾರ(23), ಮಗ ಅಖಿಲೇಶ ಹವಾಲ್ದಾರ(18) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆ ಕೋಲ್ಹಾರ ತಾಲೂಕಿನ ಕೃಷ್ಣಾ ಸೇತುವೆ ಮೇಲಿನಿಂದ ತನ್ನೆರಡು ಮಕ್ಕಳೊಂದಿಗೆ ನದಿಗೆ ಹಾರಿ ಪ್ರಾಣಬಿಟ್ಟಿದ್ದಾರೆ.

bij 4

ರೇಣುಕಾ ತನ್ನ ಗಂಡ ಅಶೋಕನೊಂದಿಗೆ ಚೆನ್ನಾಗಿ ಜೀವನ ನಡೆಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ತನ್ನ ಅಕ್ಕ ಉಷಾಳಿಗೆ ಮಹಾಮಾರಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದು ಗೊತ್ತಾಗಿತ್ತು. ಹಾಗಾಗಿ ಆಕೆಯನ್ನು ಆರೈಕೆ ಮಾಡಲೆಂದು ರೇಣುಕಾ ತನ್ನ ಪತಿ ಅಶೋಕನನ್ನು ಮಳಲಿಯಲ್ಲೇ ಬಿಟ್ಟು ತನ್ನೆರಡು ಮಕ್ಕಳೊಂದಿಗೆ ವಿಜಯಪುರದಲ್ಲಿರುವ ಅಕ್ಕನ ಮನೆಗೆ ಬಂದಿದ್ದಳು. ಆದರೆ ಕಾಲನ ಕೆರೆಗೆ ಓಗೊಟ್ಟು ಅಕ್ಕ ವಿಧಿವಶರಾಗಿದ್ದರು. ಆ ಬಳಿಕ ಅಕ್ಕನ ಮಗಳು ದೀಪಾ ಮತ್ತು ಅಕ್ಕನ ಗಂಡ ನಾರಾಯಣ ಅವರನ್ನು ನೋಡುವವರು ಯಾರೂ ಇಲ್ಲ ಎಂದು ಅವರ ಆರೈಕೆಯಲ್ಲಿ ತೊಡಗಿಕೊಂಡರು. ಕಾಲಕ್ರಮೇಣ ಕಳೆದ ಮೂರು ವರ್ಷಗಳ ಹಿಂದೆ ಅಕ್ಕನ ಗಂಡ ನಾರಾಯಣ ಸಹ ಅನಾರೋಗ್ಯದಿಂದ ಮೃತಪಟ್ಟಿದ್ದರು.

bij2

ಇದಾದ ನಂತರ ಮನೆಯಲ್ಲಿ ಕಲಹ ಶುರುವಾಗಿತ್ತು. ಎಲ್ಲಿಂದಲೋ ಬಂದು ನಮ್ಮ ಮನೆಯಲ್ಲೇ ಉಳಿದುಕೊಂಡು ನೀವು ನಮ್ಮ ಹಂಗಿನಲ್ಲಿ ಜೀವನ ನಡೆಸುತ್ತಿದೀರಾ ಎಂದು ಅಕ್ಕನ ಮಗಳು ಮತ್ತು ಮನೆಯವರು ಹಂಗಿಸಿದ್ದಾರೆ. ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಫೆಬ್ರುವರಿ 16 ರಂದು ರೇಣುಕಾ ತನ್ನ ಇಬ್ಬರು ಮಕ್ಕಳಾದ ಐಶ್ವರ್ಯ ಹಗೂ ಅಖಿಲೇಶರೊಂದಿಗೆ ಮನೆಬಿಟ್ಟು ತೆರಳಿದ್ದರು. ನಂತರ ರೇಣುಕಾ ಸಹೋದರ ವಿಲಾಸ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದರು.

bij 34

ವಿಜಯಪುರ ಜಿಲ್ಲೆಯ ಕೋಲ್ಹಾರ ಸೇತುವೆಯ ಕೃಷ್ಣಾ ನದಿಯಲ್ಲಿ ಫೆಬ್ರುವರಿ 19 ರಂದು ಒಂದು ಮಹಿಳೆಯ ಶವ ಪತ್ತೆಯಾಗಿದೆ. ತದ ನಂತರ 25 ರಂದು ಯುವತಿ ಮತ್ತು ಯುವಕನ ಶವ ಪತ್ತೆಯಾಗಿದೆ. ಆದರೆ ಕೊಲ್ಹಾರ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರದ ಕಾರಣ ಅನಾಥ ಶವಗಳೆಂದು ಭಾವಿಸಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನರವೇರಿಸಿ ಬಿಟ್ಟಿದ್ದಾರೆ. ತದನಂತರ ಗಾಂಧಿ ಚೌಕ್ ಪೊಲೀಸರು ಶಂಕೆ ವ್ಯಕ್ತಪಡಿಸಿ, ರೇಣುಕಾ ಸಹೋದರ ವಿಲಾಸರನ್ನು ಒಂದು ಬಾರಿ ಶವಗಳ ಸಾಮಗ್ರಿಗಳನ್ನು ನೋಡಿ ಗುರುತಿಸಲು ಹೇಳಿದ್ದಾರೆ. ಆಗ ವಿಲಾಸ ಅವರು ರೇಣುಕಾ ಸೀರೆ ಮತ್ತು ಮಕ್ಕಳ ಉಡುಪು ಮತ್ತು ಉಂಗುರ ನೋಡಿ ಗುರುತಿಸಿದ್ದಾರೆ.

bij 3 1

ಹಲವು ವರ್ಷಗಳ ಕಾಲ ಅಕ್ಕನ ಆರೈಕೆ, ಅಕ್ಕನ ಮಗಳ ಹಾಗೂ ಅಕ್ಕನ ಗಂಡನ ಪೋಷಣೆ ಮಾಡುತ್ತ ಬಂದ ರೇಣುಕಾಳಿಗೆ ಇದೀಗ ತಿರಸ್ಕಾರದ ಮಾತುಗಳನ್ನು ಕೇಳಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಕೋಲ್ಹಾರ-ಕೊರ್ತಿ ಸೇತುವೆಯಿಂದ ಜಿಗಿದು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಕುಟುಂಬಸ್ಥರಿಗೆ ತಿಳಿದಿದೆ. ತನ್ನೆರಡು ಮಕ್ಕಳು ವಯಸ್ಕರಿದ್ದರೂ ಸಹ ಅದ್ಯಾಕೆ ಇಂತಹ ಕಟು ನಿರ್ಧಾರ ಮಾಡಿದಳು ಎಂದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಂತರಿಕ ಕಲಹ ಏನೇ ಇದ್ರೂ ಸಹ ಮಾತನಾಡಿ ಪರಿಹರಿಸಿಕೊಳ್ಳಬಹುದಿತ್ತು. ಆದರೆ ತಾನು ಪ್ರಾಣ ಕಳೆದುಕೊಳ್ಳುವುದರ ಜೊತೆಗೆ ಎರಡು ಮಕ್ಕಳನ್ನು ಆತ್ಮಹತ್ಯೆ ಮಾಡುವಂತೆ ಮಾಡಲು ಅಂತಹದ್ದು ಏನಾಗಿತ್ತು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

police 1

TAGGED:childrenKrishna rivermotherpolicePublic TVsistersvijayapuraಅಕ್ಕ-ತಂಗಿಕೃಷ್ಣ ನದಿತಾಯಿಪಬ್ಲಿಕ್ ಟಿವಿಪೊಲೀಸ್ಮಕ್ಕಳುವಿಜಯಪುರ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
3 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
3 hours ago
02
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-2

Public TV
By Public TV
3 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
4 hours ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?