ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

Public TV
1 Min Read
VIJAYPUR WORRIOR

ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಬಸವರಾಜ್ ರಜೆಯ ಮೇಲೆ ಊರಿಗೆ ಬಂದಿದ್ದರು. ಎರಡು ದಿನಗಳ ಹಿಂದೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಅಪಘಾತಕ್ಕೊಳಗಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಬಸವರಾಜ್ ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಪೆಡ್ಲರ್‌ಗಳ ಬಂಧನ – 53 ಕೆ.ಜಿ ಗಾಂಜಾ ವಶ

VIJAYPUR WORRIOR 1

ಬಸವರಾಜ್ 8 ವರ್ಷಗಳ ಹಿಂದೆ ಸೇನೆಗೆ ನೇಮಕಗೊಂಡಿದ್ದರು. ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಊರಿಗೆ ಬಂದಾಗ ದುರ್ಘಟನೆ ನಡೆದಿದೆ. ಇದನ್ನೂ ಓದಿ: 21 ಲಕ್ಷ ರೂ. ಮೌಲ್ಯದ ಆಕ್ಸಿಟೋಸಿನ್ ಚುಚ್ಚುಮದ್ದು ವಶ

Share This Article
Leave a Comment

Leave a Reply

Your email address will not be published. Required fields are marked *