ಬೆಂಗಳೂರು: ಭ್ರಷ್ಟ ಸರ್ಕಾರದ ದರ ಏರಿಕೆ ಹಾಗೂ ಅಟ್ಟಹಾಸವನ್ನು ಜನರ ಮುಂದಿಡಲು ಜನಾಕ್ರೋಶ ಯಾತ್ರೆ ಆರಂಭಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಭ್ರಷ್ಟ ಸರ್ಕಾರದ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದೇವೆ. ಪ್ರಹ್ಲಾದ್ ಜೋಶಿಯವರು (Prahlad Joshi) ಇಂದು ಮೈಸೂರಿನಲ್ಲಿ (Mysuru) ಚಾಲನೆ ನೀಡುತ್ತಾರೆ. 4 ಹಂತಗಳಲ್ಲಿ ಹೋರಾಟ ಮಾಡುತ್ತಿದ್ದೇವೆ. ನಾವು ಪ್ರಾಮಾಣಿಕ ಹೋರಾಟ ಮಾಡುತ್ತಿದ್ದೇವೆ. ಈಗ ಯಾವುದೇ ಚುನಾವಣೆಗಳು ಇಲ್ಲದಿದ್ದರೂ ಜನರ ಪರ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ದರ ಏರಿಕೆ, ಕಾಂಗ್ರೆಸ್ ಅಟ್ಟಹಾಸ ಜನರ ಮುಂದೆ ಇಡ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ
ಜನಾಕ್ರೋಶ ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲಾ ನಾಯಕರೂ ಭಾಗವಹಿಸುತ್ತಾರೆ. ಪ್ರತೀ ಜಿಲ್ಲೆಗೂ ನಮ್ಮ ಜನಾಕ್ರೋಶ ಯಾತ್ರೆ ತಲುಪಲಿದೆ. ಅಯೋಗ್ಯ ಕಾಂಗ್ರೆಸ್ (Congress) ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಮುಸ್ಲಿಮರ ಓಲೈಕೆ, ದಲಿತರಿಗೆ ದೋಖಾ ಮಾಡುತ್ತಿದೆ. ಈ ಸರ್ಕಾರದ ಜನ ವಿರೋಧಿ ನೀತಿಗಳನ್ನು ಜನರಿಗೆ ತಿಳಿಸುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಗಿಣಿ ದ್ವಿವೇದಿ
ಇನ್ನೂ ಹೋರಾಟದಲ್ಲಿ ಜೆಡಿಎಸ್ (JDS) ಭಾಗವಹಿಸದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ನಡುವೆ ಗೊಂದಲ, ಭಿನ್ನಾಭಿಪ್ರಾಯ ಇಲ್ಲ. ಈ ಹೋರಾಟ ಬಗ್ಗೆ ಕುಮಾರಸ್ವಾಮಿ (Kumaraswamy) ಅವರಿಗೂ ಸ್ಪಷ್ಟ ಪಡಿಸಿದ್ದೇವೆ. ಈ ಹೋರಾಟ ಪ್ರತ್ಯೇಕವಾಗಿ ಮಾಡುತ್ತಿದ್ದೇವೆ ಎಂದು ಏನೂ ವ್ಯತ್ಯಾಸ ಉಂಟಾಗಿಲ್ಲ. ನಾವೂ ಅವರೂ ಹಲವು ಹೋರಾಟ ಒಟ್ಟಿಗೆ ಮಾಡಿದ್ದೇವೆ. ಪ್ರತ್ಯೇಕವಾಗಿಯೂ ಮಾಡಿದ್ದೇವೆ. ನಮ್ಮ ನಡುವೆ ಒಡಕು ಉಂಟಾಗಿಲ್ಲ. ಇದು ಸತ್ಯಕ್ಕೆ ದೂರವಾದ ಅಪವಾದ ಎಂದು ಸ್ಪಷ್ಟಪಡಿಸಿದರು.