ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ರನ್ನು (Darshan) ನೋಡಲು ಬಳ್ಳಾರಿ ಜೈಲಿಗೆ ಪುತ್ರ ವಿನೀಶ್ (Vineesh) ಮತ್ತು ವಿಜಯಲಕ್ಷ್ಮಿ (Vijaylakshmi) ಭೇಟಿ ನೀಡಿದ್ದಾರೆ. ಮೊದಲ ಬಾರಿಗೆ ಅಪ್ಪನನ್ನು ನೋಡಲು ಬಳ್ಳಾರಿಗೆ ಜೈಲಿಗೆ ವಿನೀಶ್ ಭೇಟಿ ಕೊಟ್ಟಿದ್ದಾನೆ. ಇದನ್ನೂ ಓದಿ:ಆರಾಮ್ ಅರವಿಂದ್ ಸ್ವಾಮಿ: ರೊಮ್ಯಾಂಟಿಕ್ ಹಾಡಿನಲ್ಲಿ ಅನೀಶ್ ತೇಜಶ್ವರ್
Advertisement
ದರ್ಶನ್ ಜೈಲು ಸೇರಿ 3 ತಿಂಗಳಿಗಿಂತ ಅಧಿಕವಾಗಿದೆ. ಕಾನೂನು ಸಮರದ ಕುರಿತು ಚರ್ಚಿಸಲು ಪ್ರತಿ ವಾರ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಬಳ್ಳಾರಿ ಜೈಲಿಗೆ ಭೇಟಿ ನೀಡುತ್ತಿದ್ದರು. ಈ ಬಾರಿ ಅಮ್ಮನ ಜೊತೆ ಪುತ್ರ ವಿನೀಶ್ ಕೂಡ ಭೇಟಿ ನೀಡಿದ್ದಾರೆ. ಈ ವೇಳೆ, ದರ್ಶನ್ಗೆ ಅಗತ್ಯವಿರುವ ಬಟ್ಟೆ, ಬೆಡ್ಶಿಟ್ ಮತ್ತು ಬೇಕರಿ ತಿನಿಸುಗಳೊಂದಿಗೆ 2 ಬ್ಯಾಗ್ ಹಿಡಿದು ಆಪ್ತರೊಂದಿಗೆ ಪತ್ನಿ, ಪುತ್ರ ಜೈಲಿಗೆ ಆಗಮಿಸಿದ್ದಾರೆ.
Advertisement
Advertisement
ಇನ್ನೂ ಬಳ್ಳಾರಿಗೆ ಜೈಲಿಗೆ ಭೇಟಿ ಕೊಟ್ಟ ವೇಳೆ, ಅಪ್ಪ ದರ್ಶನ್ರನ್ನು ನೋಡಿ ವಿನೀಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಗನನ್ನು ಸಂತೈಸಿ, ಯೋಗ ಕ್ಷೇಮ ವಿಚಾರಿಸಿದ್ದಾರೆ. ಬಳಿಕ ಪತ್ನಿ ವಿಜಯಲಕ್ಷ್ಮಿ ಜೊತೆ ದರ್ಶನ್ ಕಾನೂನು ಸಮರದ ಬಗ್ಗೆ ಚರ್ಚಿಸಿದ್ದಾರೆ. ಪತ್ನಿ ಹಾಗೂ ಪುತ್ರನ ಜೊತೆ 45 ನಿಮಿಷ ಮಾತನಾಡಿ ಹೈ ಸೆಕ್ಯೂರಿಟಿ ಸೆಲ್ಗೆ ತೆರಳುವ ಮುನ್ನ ಅಪ್ಪನ ತಬ್ಬಿಕೊಂಡ ಪುತ್ರ, ಪಪ್ಪಾ ಐ ಮಿಸ್ ಯು ಎಂದು ಹೇಳಿದ್ದಾನೆ. ಕೂಡಲೇ ಮಗನ ಮಾತಿಗೆ ಪ್ರತಿಕ್ರಿಯಿಸಿದ ಆರೋಪಿ ದರ್ಶನ್ ಮಿಸ್ ಯು ಮಗನೆ, ಆದಷ್ಟು ಬೇಗ ಬರುತ್ತೇನೆ. ನಿನ್ನ ಜೊತೆ ಸಮಯ ಕಳೆಯುತ್ತೇನೆ ಎಂದು ಮಗನಿಗೆ ಧೈರ್ಯ ಹೇಳಿ ದರ್ಶನ್ ಸೆಲ್ಗೆ ತೆರಳಿದರು.