– ಪತಿ, ಪೋಷಕರಲ್ಲಿ ಆತಂಕ
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಹಶೀಲ್ದಾರ್ ಕಚೇರಿಯ ಭೂಮಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಕೊಟ್ಟರು ತಾಲೂಕಿನ ಗಂಗಮ್ಮನಹಳ್ಳಿ ಗ್ರಾಮದ ನಿವಾಸಿ ಚೈತ್ರಾ(20) ಡಿಸೆಂಬರ್ 11ರ ಬೆಳಗ್ಗಿನ ಜಾವ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು, ಆದರೆ ಸಂಜೆ ಕೆಲಸದ ಸಮಯ ಮುಗಿದರೂ ಮನೆಗೆ ಮರಳಲಿಲ್ಲ. ಹೀಗಾಗಿ ಚೈತ್ರ ಅವರ ಗಂಡ ಕೊಟ್ರೇಶ್ ಆತಂಕದಿಂದ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ವಿಚಾರಿಸಿದ್ದರು. ಆದರೆ ಚೈತ್ರಾ ಕೆಲಸ ಮುಗಿಸಿ ಮನೆಗೆ ಹೋಗಿದ್ದಾರೆ ಎಂದು ಸಿಬ್ಬಂದಿ ತಿಳಿಸಿದರು.
ಚೈತ್ರಾ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕೊಟ್ರೇಶ್ ಅವರು ಪತ್ನಿ ತವರು ಮನೆಯಲ್ಲಿ ವಿಚಾರಿಸಿದ್ದಾರೆ. ಅಲ್ಲಿಗೂ ಚೈತ್ರ ಬಂದಿಲ್ಲ ಎನ್ನುವ ವಿಷಯ ತಿಳಿದ ಬಳಿಕ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚೈತ್ರಾ ಅವರ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.