ದಾವಣಗೆರೆ: ಜಿಲ್ಲೆಯ (Davanagere) ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ (Chitradurga) ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಾಂಬ್ ಸಿಡಿದಂತೆ ಶಬ್ಧವಾಗಿದ್ದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಕೂಡ ಯಕ್ಷಪ್ರಶ್ನೆಯಾಗಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 2ನೇ ಗಂಡನನ್ನು ಬಿಟ್ಟು ಕಾನ್ಸ್ಟೇಬಲ್ ಜೊತೆ ಮಹಿಳೆ ಎಸ್ಕೇಪ್ – ಪೇದೆ ಅಮಾನತು
ಈ ಬಗ್ಗೆ ಜಗಳೂರು ತಹಶಿಲ್ದಾರ್ ಸಯ್ಯದ್ ಕಲೀಂವುಲ್ಲಾ ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿದ್ದು, ಜಗಳೂರು ತಾಲೂಕಿನಲ್ಲಿ ಆ ರೀತಿ ಯಾವುದೇ ಸ್ಫೋಟ ಸಂಭವಿಸಿಲ್ಲ. ವಿಜಯನಗರ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಅನುಭವ ಆಗಿದೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ ಗ್ರಾಮಲೆಕ್ಕಿಗರನ್ನು ಕಳಿಸಿ ಮಾಹಿತಿ ಸಂಗ್ರಹಿಸಿದ್ದೇನೆ. ಜಗಳೂರು ತಾಲೂಕಿನ ಜನರು ಭಯಪಡುವ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿಗೆ ಪಬ್ ಬುಕ್ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

