ಚಿಕ್ಕಬಳ್ಳಾಪುರ: ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಸರಗಳ್ಳತನಕ್ಕೆ ಯತ್ನಿಸಿದ ಸರಗಳ್ಳನನ್ನು ಹಿಡಿದು ಗ್ರಾಮಸ್ಥರು ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ನಡೆದಿದೆ.
ಸೈಯದ್ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ. ಗ್ರಾಮದ ಸುನಂದಮ್ಮ ಎಂಬವರು ಕಸ ಹಾಕಲು ತಿಪ್ಪೆ ಬಳಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಬೆಂಗಳೂರು ಮೂಲದ ಸೈಯದ್ ಸರಗಳವಿಗೆ ಯತ್ನಿಸಿದ್ದನು.
ಈ ವೇಳೆ ಮಹಿಳೆಯ ಅರಚಾಟ ಕಿರುಚಾಟ ಕೇಳಿದ ಗ್ರಾಮಸ್ಥರು ಸರಗಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಸುನಂದಮ್ಮ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಸದ್ಯ ಸರಗಳ್ಳನನ್ನು ವಶಕ್ಕೆ ಪಡೆದ ಚಿಂತಾಮಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.