ಕಿರುತೆರೆಯ ಮಜಾಭಾರತ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಪ್ರತಿಭೆ ವಿನೋದ್ ಗೊಬ್ಬರಗಾಲ (Vinod Gobaragala) ದೊಡ್ಮನೆಗೆ ಕಾಲಿಟ್ಟಿದ್ದರು. ಇದೀಗ ಈ ವಾರ ಬಿಗ್ ಬಾಸ್ (Bigg Boss) ಮನೆಯಿಂದ ಎಲಿಮಿನೇಷನ್ ಆಗಿದ್ದಾರೆ.
ಟಿವಿ ಲೋಕದಲ್ಲಿ ಸಾಕಷ್ಟು ರಿಯಾಲಿಟಿ ಶೋಗಳಲ್ಲಿ ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿದ್ದ ಗೊಬ್ಬರಗಾಲ ಬಿಗ್ ಬಾಸ್ ಮನೆಯಲ್ಲೂ ಕಮಾಲ್ ಮಾಡಿದ್ದರು. ಇದೀಗ ಸಾನ್ಯ ಅಯ್ಯರ್ (Sanya Iyer) ಎಲಿಮಿನೇಷನ್ ನಂತರ ವಿನೋದ್ ಗೊಬ್ಬರಗಾಲ ಆಟಕ್ಕೆ ಬಿಗ್ ಬಾಸ್ ಬ್ರೇಕ್ ಹಾಕಿದ್ದಾರೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ
ಮನರಂಜನೆ, ಟಾಸ್ಕ್ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದ ಗೊಬ್ಬರಗಾಲ ಎಲಿಮಿನೇಷನ್ ಇದೀಗ ಮನೆ ಮಂದಿಗೆ ಶಾಕ್ ಕೊಟ್ಟಿದೆ. ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ವಿನೋದ್ ಗೊಬ್ಬರಗಾಲ ಈಗ ದೊಡ್ಮನೆಯಿಂದ ಹೊರಬಂದಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾದ ಹರಿಪ್ರಿಯಾ – ಸೂಪರ್ ಜೋಡಿ ಅಂದ್ರು ಫ್ಯಾನ್ಸ್