ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕರ ಹೆಸರು ಹಾಕದೇ ಪ್ರೋಟೋಕಾಲ್‌ ಉಲ್ಲಂಘನೆ – ಶಾಸಕ ಕೆ.ಸಿ ರಾಮಮೂರ್ತಿ ದೂರು

Public TV
1 Min Read
KC Ramamurthy 2

ಬೆಂಗಳೂರು: ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕರಿಗೆ ಆಹ್ವಾನ ನೀಡದೇ ಶಿಷ್ಟಾಚಾರ (Protocol) ಉಲ್ಲಂಘನೆ ಮಾಡಲಾಗಿದೆ ಅಂತ ಜಯನಗರ ಶಾಸಕ ಕೆ.ಸಿ ರಾಮಮೂರ್ತಿ (KC Ramamurthy) ಸ್ಪೀಕರ್‌ಗೆ ದೂರು ನೀಡಿದ್ದಾರೆ.

ವಿಧಾನಸೌಧದಲ್ಲಿ ಸ್ಪೀಕರ್‌ಗೆ ದೂರು ಕೊಟ್ಟ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಆಗಸ್ಟ್‌ 5 ರಂದು ಗೃಹಜ್ಯೋತಿ (Gruhajyothi Scheme) ಉದ್ಘಾಟನೆ ಕಾರ್ಯಕ್ರಮ ಇದೆ. ಸಿಎಂ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಶಿಷ್ಟಾಚಾರದ ಪ್ರಕಾರ ಎಲ್ಲಾ ಶಾಸಕರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಬೇಕು. ಆದ್ರೆ ನನ್ನ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇಲ್ಲ. ಶಾಸಕರ ಹೆಸರು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಆಗಿದೆ ಅಂತ ಆರೋಪ ಮಾಡಿದ್ರು. ಇದನ್ನೂ ಓದಿ: ಬಿಜೆಪಿ ಶಾಸಕರ ಅಮಾನತು ಕ್ರಮ ಅಕ್ಷಮ್ಯ; ಮುಳ್ಳು ಚುಚ್ಚಿದ್ದಕ್ಕೆ ಕಾಲು ಕತ್ತರಿಸಿಕೊಂಡಂತೆ: ಕಾಗೇರಿ

GRUHAJYOTHI

ಅನ್ನಭಾಗ್ಯ ಯೋಜನೆ (Anna Bhagya Scheme) ಉದ್ಘಾಟನೆ ವೇಳೆಯೂ ನನ್ನ ಹೆಸರು ಹಾಕಿರಲಿಲ್ಲ. ಗೋಪಾಲಯ್ಯ ಅವರಿಗೂ ಹೀಗೆ ಮಾಡಿದ್ರು. ಈಗ ನನ್ನ ಹೆಸರು ಹಾಕಿಲ್ಲ. ಹೀಗಾಗಿ ಸ್ಪೀಕರ್‌ಗೆ ದೂರು ನೀಡಿದ್ದೇನೆ. ಇಂತಹ ಕೆಲಸ ಮಾಡಿರೋ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸ್ಪೀಕರ್ ಗೆ ದೂರು ನೀಡಿದ್ದೇನೆ. ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಗೆ ಮನವಿ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ‌ ನಿಯಂತ್ರಣಕ್ಕೆ ಗಡ್ಕರಿಗೆ ಸಿದ್ದರಾಮಯ್ಯ ಮನವಿ

ಬಿಜೆಪಿಯಿಂದ ಗೆದ್ದ ಶಾಸಕರಿಗೆ ಹೀಗೆ ಮಾಡ್ತಿದ್ದಾರೆ. ಉದ್ದೇಶ ಪೂರ್ವಕವಾಗಿ ಹೀಗೆ ಸರ್ಕಾರ ಮಾಡುತ್ತಿದೆ ಅನ್ನಿಸುತ್ತೆ. ಲೋಪ ಸರಿ ಮಾಡಿ ಹೊಸ ಆಹ್ವಾನ ಪತ್ರಿಕೆ ಮುದ್ರಿಸಬೇಕು. ಇಲ್ಲದೆ ಹೋದ್ರೆ ಆಗಸ್ಟ್ 5 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಟನೆ ಮಾಡ್ತೀನಿ ಅಂತ ಜಯನಗರ ಬಿಜೆಪಿ ಶಾಸಕ ರಾಮಮೂರ್ತಿ ಎಚ್ಚರಿಕೆ ನೀಡಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article