Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಹಿಂಸಾಚಾರ – EVM ಅನ್ನು ಕೊಳಕ್ಕೆ ಎಸೆದ ಕಿಡಿಗೇಡಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಹಿಂಸಾಚಾರ – EVM ಅನ್ನು ಕೊಳಕ್ಕೆ ಎಸೆದ ಕಿಡಿಗೇಡಿಗಳು

Crime

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಹಿಂಸಾಚಾರ – EVM ಅನ್ನು ಕೊಳಕ್ಕೆ ಎಸೆದ ಕಿಡಿಗೇಡಿಗಳು

Public TV
Last updated: June 1, 2024 3:51 pm
Public TV
Share
3 Min Read
Violence During Final Phase Voting In Bengal EVM Tossed Into Pond
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು (ಜೂ.1) ಏಳನೇ ಹಂತದಲ್ಲಿ ಮತದಾನ  (Lokshabha Elections 2024) ನಡೆಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ (West Bengal Violence) ನಡೆದ ವರದಿಯಾಗಿದೆ.

ಕೋಲ್ಕತ್ತಾ (Kolkata) ಬಳಿಯ ಜಾದವ್‍ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‍ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಐಎಸ್‍ಎಫ್ ಸದಸ್ಯರು ಗಾಯಗೊಂಡಿದ್ದಾರೆ. ಅಲ್ಲದೇ ನಾಡ ಬಾಂಬ್‍ಗಳ ಎಸೆತದಿಂದ ಘರ್ಷಣೆ ಇನ್ನೂ ಉಲ್ಬಣಗೊಂಡಿದೆ.

ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಜನರ ಗುಂಪೊಂದು ಮತಗಟ್ಟೆಗಳಿಗೆ ನುಗ್ಗಿ ಇವಿಎಂ (EVM) ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿದೆ. ಮತಗಟ್ಟೆ ಏಜೆಂಟರನ್ನು ಬೂತ್‍ಗಳಿಗೆ ಪ್ರವೇಶಿಸದಂತೆ ನಿಬರ್ಂಧಿಸಿದ ನಂತರ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ವಿವಿಪ್ಯಾಟ್‍ಗಳಲ್ಲಿನ ಪೇಪರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

(1/2)
Today morning at 6.40 am Reserve EVMs & papers of Sector Officer near Benimadhavpur FP school, at 129-Kultali AC of 19-Jaynagar (SC) PC has been looted by local mob and 1 CU, 1 BU , 2VVPAT machines have been thrown inside a pond.

— CEO West Bengal (@CEOWestBengal) June 1, 2024

ಬೆಳಿಗ್ಗೆ 6:40ರ ವೇಳೆಗೆ ಬೇನಿಮಾಧವಪುರ ಎಫ್‍ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್ ರಿಸರ್ವ್ ಇವಿಎಂಗಳು ಮತ್ತು ಪೇಪರ್‍ಗಳನ್ನು ಜಯನಗರ (ಎಸ್‍ಸಿ) ಪಿಸಿಯ ಕುಲ್ತಾಳಿಯಲ್ಲಿ ಸ್ಥಳೀಯ ಜನರ ಗುಂಪು ಲೂಟಿ ಮಾಡಿದ್ದಾರೆ ಮತ್ತು 1 ಸಿಯು, 1 ಬಿಯು, 2 ವಿವಿಪ್ಯಾಟ್ ಯಂತ್ರಗಳನ್ನು ಸಮೀಪದ ಕೊಳಗಳಿಗೆ ಎಸೆದಿದ್ದಾರೆ. ಕೂಡಲೇ ಹೊಸ ಇವಿಎಂಗಳನ್ನು ಆ ಮತಗಟ್ಟೆಗಳಿಗೆ ಒದಗಿಸಲಾಗಿದೆ. ಇವಿಎಂಗಳನ್ನು ಕೊಳಕ್ಕೆ ಎಸೆದವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಂದೇಶ್‍ಖಾಲಿ ಸೇರಿದಂತೆ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಭದ್ರಕೋಟೆಯಾಗಿರುವ ಡೈಮಂಡ್ ಹಾರ್ಬರ್ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯನ್ನು ಬಿಜೆಪಿ ಅಭ್ಯರ್ಥಿ ಅಭಿಜಿತ್ ದಾಸ್ ಟಿಎಂಸಿ ದುಷ್ಕೃತ್ಯ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಟಿಎಂಸಿ ಸ್ಪಷ್ಟವಾಗಿ ನಿರಾಕರಿಸಿದೆ.

ಜಾದವ್‍ಪುರದ ಗಂಗೂಲಿ ಬಗಾನ್‍ನಲ್ಲಿ ಸಿಪಿಐ(ಎಂ) ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅವರ ಶಿಬಿರ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಇಟ್ಖೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿದ್ದರಿಂದ, ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್‍ನಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಮಾಧ್ಯಮದ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಪ್ರತಿಭಟನೆಯ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರನ್ನು ಬೆದರಿಸಲು ಪಕ್ಷದ ಗೂಂಡಾಗಳು ಮತ್ತು ರಾಜ್ಯ ಪೊಲೀಸರನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಭಾಂಗಾರ್‍ನಲ್ಲಿ, ಟಿಎಂಸಿ ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ (ಎಐಎಸ್‍ಎಫ್) ಕಾರ್ಯಕರ್ತರ ನಡುವಿನ ಘರ್ಷಣೆ ಶನಿವಾರ ಮುಂಜಾನೆ ಭುಗಿಲೆದ್ದಿದೆ. ಮಹಿಳಾ ಎಐಎಸ್‍ಎಫ್ ಕಾರ್ಯಕರ್ತೆ ಗಾಯಗೊಂಡಿದ್ದಾರೆ. ಹೆಚ್ಚುವರಿಯಾಗಿ, ಎಐಎಸ್‍ಎಫ್ ಅಭ್ಯರ್ಥಿ ನೂರ್ ಆಲಂ ಖಾನ್ ಅವರ ವಾಹನವನ್ನು ತೃಣಮೂಲ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ.

ದಮ್ ಡಮ್, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ, ಡೈಮಂಡ್ ಹಾರ್ಬರ್, ಜಾದವ್‍ಪುರ, ಕೋಲ್ಕತ್ತಾ ದಕ್ಷಿಣ್ ಮತ್ತು ಕೋಲ್ಕತ್ತಾ ಉತ್ತರ ಸೇರಿದಂತೆ ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಸ್ಥಾನಗಳಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ಅಡಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಯಿತು. ಸಂಜೆ 6ರವರೆಗೆ ಮತದಾನ ನಡೆಯಲಿದೆ. ಈ ಭಾಗಗಳಲ್ಲಿ ಭಾರೀ ಭದ್ರತೆಯಲ್ಲಿ ಮತದಾನ ನಡೆಯುತ್ತಿದೆ. ಬಹುತೇಕ ಭಾಗಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತಕ್ಕೆ ಶುಭ ಸುದ್ದಿ; ಪಿಒಕೆ ದೇಶದ ಅವಿಭಾಜ್ಯ ಅಂಗವಲ್ಲ – ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್!

TAGGED:ECIevmkolkataLokshabha Elections 2024West BengalWest Bengal Violenceಇವಿಎಂಕೋಲ್ಕತ್ತಾಪಶ್ಚಿಮ ಬಂಗಾಳ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
3 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
3 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
3 hours ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
4 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
4 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?