ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್

Public TV
1 Min Read
LADY ASSAULT 1

ಬೆಂಗಳೂರು: ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ನೀಡಿದ ವಿಕಲಚೇತನ ಮಹಿಳೆಯ ಮೇಲೆ ಎಎಸ್‍ಐ ದರ್ಪ ತೋರಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

LADY ASSAULT

ಬೆಂಗಳೂರಿನ ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪದಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

LADY ASSAULT 5

ಟೋಯಿಂಗ್ ವಾಹನದಲ್ಲಿ ಕೂತಿದ್ದ ಹಲಸೂರ್ ಗೇಟ್ ಸಂಚಾರಿ ಟೋಯಿಂಗ್ ಎಎಸ್ ಐ ನಾರಾಯಣ್ ಮೇಲೆ ವಿಕಲಚೇತನ ಮಹಿಳೆ ಕಲ್ಲೇಟು ನೀಡಿದ್ದಾರೆ. ಪರಿಣಾಮ ಎಎಸ್‍ಐ ಮುಖಕ್ಕೆ ಕಲ್ಲು ತಾಗಿ ರಕ್ತ ಬಂದಿದೆ. ಇದರಿಂದ ಸಿಟ್ಟಿಗೆದ್ದ ಎಎಸ್‍ಐ, ಕೂಡಲೇ ವಾಹನದಿಂದ ಕೆಳಗಿಳಿದು ಮಹಿಳೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಬೂಟಿನಿಂದ ಒದ್ದು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಸಚಿವರ ವಿರುದ್ಧ ತಿರುಗಿ ಬಿದ್ದ ರೇಣುಕಾಚಾರ್ಯ – ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು

LADY ASSAULT 4

ಜ.24 ರಂದು ನಡೆದಿರುವ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ. ವೀಡಿಯೋದಲ್ಲಿ ಅಂಗವಿಕಲ ಮಹಿಳೆ ಮೇಲೆ ಎಎಸ್‍ಐ ಹಲ್ಲೆ ಮಾಡಿರುವುದನ್ನು ಕಾಣಬಹುದಾಗಿದೆ. ಪೊಲೀಸ್ ಅಧಿಕಾರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅಂಗವಿಕಲ ಮಹಿಳೆ ಮೇಲೆ ಹಲ್ಲೆ ಮಾಡಬಾರದಿತ್ತು ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

LADY ASSAULT 3

ಸ್ಥಳೀಯರ ಮಾಹಿತಿ ಪ್ರಕಾರ, ಎಎಸ್‍ಐ ಮೇಲೆ ಮಹಿಳೆ ಎರಡು ಬಾರಿ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಮಹಿಳೆ ಹಲ್ಲೆಯಿಂದ ಕೋಪಗೊಂಡ ಎಎಸ್‍ಐ ನಿಂದಲೂ ಮಹಿಳೆ ಮೇಲೆ ರಸ್ತೆಯಲ್ಲೆ ಹಲ್ಲೆಗೈದಿರುವುದಾಗಿ ತಿಳಿದುಬಂದಿದೆ. ಘಟನೆ ಬಳಿಕ ಎಎಸ್ ಐ ನಾರಾಯಣ್ ಅವರು ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿ ಹಲ್ಲೆ ಆರೋಪದಡಿ ಮಹಿಳೆಯನ್ನು ಬಂಧಿಸಲಾಗಿದೆ.

LADY ASSAULT 2

ಮಹಿಳೆ ಕಲ್ಲಿನಿಂದ ಹಲ್ಲೆ ಮಾಡಿದ್ದೇಕೆ..?
ಈ ವಿಕಲಚೇತನ ಮಹಿಳೆಗೆ ಟೋಯಿಂಗ್ ಮಾಡೋರು ಕಂಡ್ರೆ ಆಗುತ್ತಿರಲಿಲ್ಲವಂತೆ. ಹೀಗಾಗಿ ಟೋಯಿಂಗ್ ನವರು ಕಂಡ್ರೆ ಸಾಕು ಕಲ್ಲಿನಿಂದ ಹಲ್ಲೆ ಮಾಡುತ್ತಾರೆ. ಅದೇ ರೀತಿ ಎಎಸ್‍ಐ ಮೇಲೆಯೂ ಆಕೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *