ಬೆಂಗಳೂರು: ಅಪ್ರಾಪ್ತೆಯನ್ನು ಕಿಪಡ್ ಮಾಡಿ, ತಮ್ಮ ಪ್ರೇಮಕ್ಕೆ ಪೊಲೀಸರು ಅಡ್ಡಿಪಡಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ವಿಡಿಯೋ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶ್ವಸಿಯಾಗಿದ್ದಾರೆ.
ವೇಣು ಬಂಧಿತ ಆರೋಪಿ. ಮೂರು ದಿನಗಳ ಹಿಂದೆ ಅಪ್ರಾಪ್ತ ಯುವತಿಯನ್ನು ವೇಣು ಎಂಬಾತ ಅಪಹರಣ ಮಾಡಿದ್ದಾನೆ ಎಂದು ಬಾಲಕಿಯ ಪೋಷಕರು ನಗರದ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ವೇಣುಗೆ ಕರೆಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಪೊಲೀಸರ ವಿಚಾರಣೆಗೆ ಹೆದರಿದ ವೇಣು ಅಪ್ರಾಪ್ತ ಯುವತಿಗೆ ಪುಸಲಾಯಿಸಿ ತಮ್ಮ ಪ್ರೀತಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಮತ್ತು ನಮ್ಮನ್ನು ದೂರ ಮಾಡಲು ಯತ್ನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಸೋಮವಾರ ತಡರಾತ್ರಿ ಹೊಸಕೋಟೆ ಪೊಲೀಸರು ವೇಣುನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಪೋಷಕರ ವಶಕ್ಕೆ ನೀಡಿದ್ದಾರೆ. ಇನ್ನು ವೇಣು ವಿರುದ್ಧ ಪೂಕ್ಸೋ ಕಾಯ್ದೆ ಅಡಿ, ಅಪಹರಣ ಹಾಗು ಆತ್ಮಹತ್ಯೆ ಪ್ರಚೋದನೆ ಕೇಸು ದಾಖಲಿಸಿದ್ದಾರೆ.