ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಟೂರ್ನಿಯ 2 ಪಂದ್ಯಗಳಿಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದ್ದು, ಆಯ್ಕೆ ಸಮಿತಿ ದಿನೇಶ್ ಕಾರ್ತಿಕ್ ಅವರಿಗೆ ಕೋಕ್ ನೀಡಿ ಯುವ ಆಟಗಾರ ರಿಷಭ್ ಪಂತ್ರನ್ನು ಆಯ್ಕೆ ಮಾಡಿದೆ.
ಏಷ್ಯಾಕಪ್ನಲ್ಲಿ ವಿಶ್ರಾಂತಿ ಪಡೆದಿದ್ದ ನಾಯಕ ವಿರಾಟ್ ಕೊಹ್ಲಿ ಅವರು ಮತ್ತೆ ತಂಡದ ನಾಯಕತ್ವ ವಹಿಸಿದ್ದಾರೆ. ಸದ್ಯ 14 ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ತಂಡದಲ್ಲಿ ದಿನೇಶ್ ಕಾರ್ತಿಕ್, ಕೇದರ್ ಜಾದವ್, ಬುಮ್ರಾ, ಭುವನೇಶ್ವರ್, ಹಾರ್ದಿಕ್ ಪಾಂಡ್ಯ ಅವರಿಗೆ ಮೊದಲ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ, ಕೇದರ್ ಜಾದವ್ ಗಾಯದ ಸಮಸ್ಯೆಯಿಂದ ಚೇತರಿಕೆ ಪಡೆಯುತ್ತಿದ್ದಾರೆ. ಏಷ್ಯಾಕಪ್ ಕಪ್ ಕ್ರಿಕೆಟ್ ಟೂರ್ನಿಯ ವೇಳೆ ಇಬ್ಬರು ಆಟಗಾರರು ಗಾಯಗೊಂಡಿದ್ದರು.
ಏಷ್ಯಾಕಪ್ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಥಾನ ಪಡೆದಿದ್ದ ದಿನೇಶ್ ಕಾರ್ತಿಕ್ 5 ಇನ್ನಿಂಗ್ಸ್ ಗಳಿಂದ 146 ರನ್ ಮಾತ್ರ ಗಳಿಸಿದ್ದರು. ಆದರೆ ಇತ್ತೀಚಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇದರ ಹಿನ್ನೆಲೆಯಲ್ಲಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಏಕದಿನ ಟೂರ್ನಿ ಅಕ್ಟೋಬರ್ 21 ರಿಂದ ನವೆಂಬರ್ 1ವರೆಗೂ ನಡೆಯಲಿದೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಟಿ ರಾಯುಡು, ಮನೀಷ್ ಪಾಂಡೆ, ಧೋನಿ (ಕೀಪರ್), ರಿಷಭ್ ಪಂತ್, ಆರ್ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹ್ಮದ್, ಶಾರ್ದೂಲ್ ಠಾಕೂರ್, ಕೆಎಲ್ ರಾಹುಲ್.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
????Team for first 2 ODIs against Windies announced
Virat Kohli (Capt), Rohit Sharma (vc), Shikhar Dhawan, Ambati Rayudu, Manish Pandey, MS Dhoni (wk),Rishabh Pant, R Jadeja, Yuzvendra Chahal, Kuldeep Yadav, Mohammed Shami, Khaleel Ahmed, Shardul Thakur, KL Rahul #INDvWI
— BCCI (@BCCI) October 11, 2018