ಪಾಕ್ ಪಂದ್ಯದ ನಿಷೇಧ – ಕೊನೆಗೂ ಮೌನ ಮುರಿದ ನಾಯಕ ಕೊಹ್ಲಿ

Public TV
1 Min Read
ind vs pak

ಮುಂಬೈ: ಪುಲ್ವಾಮಾ ಭಯೋತ್ಪಾದನ ದಾಳಿಯ ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಆಡಬಾರದು ಎಂಬ ಸಾರ್ವಜನಿಕರ ಆಗ್ರಹದ ಕುರಿತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧರ ಟಿ20 ಸರಣಿಯ ಟೂರ್ನಿ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ವೇಳೆ ಕೊಹ್ಲಿ ಈ ಕುರಿತು ಮಾತನಾಡಿದ್ದು, ಪಾಕಿಸ್ತಾನ ವಿರುದ್ಧ ಆಡಬೇಕಾ ಬೇಡವಾ ಎಂಬ ಬಗ್ಗೆ ಸರ್ಕಾರ ಹಾಗೂ ಬಿಸಿಸಿಐ ಯಾವುದೇ ನಿರ್ಣಯ ತೆಗೆದುಕೊಂಡರು ಗೌರವಿಸಿ ಬದ್ಧರಾಗಿರುತ್ತೇವೆ ಎಂದು ಕೊಹ್ಲಿ ಹೇಳಿದ್ದಾರೆ.

world cup

ಇದೇ ವೇಳೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ರು. ಮೇ 30 ರಿಂದ ಆರಂಭವಾಗುವ 2019ರ ವಿಶ್ವಕಪ್ ಸರಣಿಯ ಲೀಗ್ ಹಂತದಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಎದುರಿಸಲಿದೆ.

ಪಂದ್ಯದ ಕುರಿತು ನಿರ್ಧಾರ ಕೈಗೊಳ್ಳಲು ಶುಕ್ರವಾರ ಸಭೆ ಸೇರಿದ್ದ ಬಿಸಿಸಿಐ ದ್ವಂದ್ವ ನಿರ್ಧಾರವನ್ನೇ ಮುಂದುವರಿಸಿತು. ಆದರೆ ಐಸಿಸಿ ಸಮಿತಿಯ ಸದಸ್ಯ ರಾಷ್ಟ್ರಗಳಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುವ ದೇಶಗಳೊಂದಿಗೆ ಕ್ರಿಕೆಟ್ ಒಪ್ಪಂದಗಳನ್ನು ರದ್ದು ಮಾಡಿಕೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿತ್ತು. ಇದರ ನಡುವೆಯೇ ಸಚಿನ್ ತೆಂಡೂಲ್ಕರ್ ಅವರು ಭಾರತ, ಪಾಕ್ ಪಂದ್ಯಕ್ಕೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್‍ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿ ದೇಶ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ಕ್ರಿಕೆಟಗಿಂತ ನನಗೆ ದೇಶವೇ ಮೊದಲು ಎಂದು ತಿಳಿಸಿದ್ದರು.

sachin bcci

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article