Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ವಿರಾಟ್‌ – ಕಿಂಗ್‌ ಆದ ಕೊಹ್ಲಿಯ ರೋಚಕ ಜರ್ನಿ

Public TV
Last updated: August 18, 2023 3:53 pm
Public TV
Share
4 Min Read
Kohli
SHARE

ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಇಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 15 ವರ್ಷ ಕಳೆದಿದೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಇತಿಹಾಸ ಪುಟ ಸೇರಿದ್ದಾರೆ.

Contents
ಕೊಹ್ಲಿ ಎಂಟ್ರಿ ಕೊಟ್ಟಿದ್ದು ಯಾವಾಗ?76 ಅಂತಾರಾಷ್ಟ್ರೀಯ ಶತಕನಾಯಕನಾಗಿ ಕೊಹ್ಲಿ ಸಾಧನೆಕೊಹ್ಲಿ ವೃತ್ತಿಜೀವನಐಸಿಸಿ ಟ್ರೋಫಿ ಗೆದ್ದಿಲ್ಲ ಅನ್ನೋದೆ ಚಿಂತೆ

Congratulations to the incredible @imVkohli on 15 years of unwavering commitment to international cricket! Your passion, perseverance, and remarkable achievements have inspired millions. Wishing you continued success and many more milestones ahead! pic.twitter.com/oUsnAVLvqu

— Jay Shah (@JayShah) August 18, 2023

ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿ ಕೋಟ್ಯಂತರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾಜಿ ಹಾಗೂ ಹಾಲಿ ಕ್ರಿಕೆಟರ್‌ಗಳು ಶುಭಾಶಯದ ಹೂಮಳೆಗರೆದಿದ್ದಾರೆ. ಪ್ಲೇಯರ್‌ ಆಗಿ, ನಾಯಕನಾಗಿ, ಉಪನಾಯಕನಾಗಿ ಟೀಂ ಇಂಡಿಯಾಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತನಗಿಂತಲೂ ಕ್ರಿಕೆಟ್‌ ಲೋಕಕ್ಕೆ ಎಂಟ್ರಿಕೊಟ್ಟ ಅನೇಕ ದಿಗ್ಗಜರ ದಾಖಲೆಯನ್ನ ಮುರಿದು ಧೂಳೆಬ್ಬಿಸಿರುವ ವಿರಾಟ್‌ ಕೊಹ್ಲಿ ಇದೀಗ ವೃತ್ತಿ ಜೀವನದ ನಿರ್ಣಾಯಕ ಹಂತದಲ್ಲಿದ್ದಾರೆ. ಅಂದು ಸಾಮಾನ್ಯ ಹುಡುಗನಾಗಿ ಕ್ರಿಕೆಟ್‌ ಅಂಗಳಕ್ಕಿಳಿದ ಕೊಹ್ಲಿ ಇಂದು ಕಿಂಗ್‌ ಆಗಿ ಮೆರೆದಾಡುತ್ತಿದ್ದಾರೆ. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

Virat

ಕೊಹ್ಲಿ ಎಂಟ್ರಿ ಕೊಟ್ಟಿದ್ದು ಯಾವಾಗ?

2008ರ ಆಗಸ್ಟ್ 18ರಂದು ಶ್ರೀಲಂಕಾದ ಡಂಬುಲ್ಲಾ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಕೊಹ್ಲಿ, ಇಂದು ನಿರ್ಣಾಯಕ ಹಂತದಲ್ಲಿದ್ದಾರೆ. ಜೊತೆಗೆ 2023ರ ಏಕದಿನ ವಿಶ್ವಕಪ್‌ ಬಳಿಕ ಕೊಹ್ಲಿ ನಿವೃತ್ತಿ ಹೊಂದುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮ ಮೊದಲ ಪಂದ್ಯದಲ್ಲಿ ಗೌತಮ್ ಗಂಭೀರ್​ ಅವರೊಂದಿಗೆ ಇನ್ನಿಂಗ್ಸ್​ ಆರಂಭಿಸಿದ್ದ ಕೊಹ್ಲಿ, ಕೇವಲ 12 ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಈ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಸೋಲು ಕಂಡಿತ್ತು. ಅಂದು 12 ರನ್​ಗಳಿಂದ ಆರಂಭವಾದ ಕೊಹ್ಲಿ ಇನ್ನಿಂಗ್ಸ್‌ ಇಂದು 25 ಸಾವಿರಕ್ಕೂ ಹೆಚ್ಚು ರನ್ ಕಲೆ ಹಾಕುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಇದನ್ನೂ ಓದಿ: ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

76 ಅಂತಾರಾಷ್ಟ್ರೀಯ ಶತಕ

ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ಅತಿ ಹೆಚ್ಚು ಶತಕಗಳ ಸಾಧನೆ ಮಾಡಿದವರ ಪಟ್ಟಿಯಲ್ಲಿ 100 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್​ ಅಗ್ರಸ್ಥಾನದಲ್ಲಿದ್ದಾರೆ. ಅವರನ್ನು ಹಿಂದಿಕ್ಕುವ ಸಾಮರ್ಥ್ಯ ಕೊಹ್ಲಿಗಿದೆ ಎಂಬುದು ತಜ್ಞರ ಅಭಿಪ್ರಾಯ. ಏಕೆಂದರೆ 76 ಅಂತಾರಾಷ್ಟ್ರೀಯ ಶತಕ ಸಿಡಿಸಿರುವ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 24 ಶತಕ ಸಿಡಿಸಿದರೆ ಸಾಕು ಸಚಿನ್​ ಸಾಧನೆ ಸರಿಗಟ್ಟಲಿದ್ದಾರೆ ಎಂಬ ನಿರೀಕ್ಷೆ ಇದೆ. ಏಕದಿನದಲ್ಲಿ 46 ಶತಕ, ಟೆಸ್ಟ್​​​ನಲ್ಲಿ 29 ಶತಕ, ಟಿ20ಯಲ್ಲಿ 1 ಶತಕ ಸಿಡಿಸಿದ್ದಾರೆ.

ನಾಯಕನಾಗಿ ಕೊಹ್ಲಿ ಸಾಧನೆ

ಬ್ಯಾಟ್ಸ್‌ಮ್ಯಾನ್‌ ಆಗಿ ದಿಗ್ಗಜರ ದಾಖಲೆಗಳನ್ನ ಉಡೀಸ್‌ ಮಾಡಿರುವ ಕೊಹ್ಲಿ ನಾಯಕನಾಗಿಯೂ ಅಮೋಘ ಸಾಧನೆ ಮಾಡಿದ್ದಾರೆ. ಟೆಸ್ಟ್​​ ಕ್ರಿಕೆಟ್​​ನಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು ಎನಿಸಿದ್ದಾರೆ. ವಿದೇಶಿ ನೆಲದಲ್ಲಿ ಟೆಸ್ಟ್​ ಗೆಲ್ಲುವುದೇ ಕಷ್ಟ ಎನ್ನುವಂತಿದ್ದ ಕಾಲದಲ್ಲಿ ಕೊಹ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್‌ ನೆಲದಲ್ಲಿ ಅವಿಸ್ಮರಣೀಯ ಟೆಸ್ಟ್​ ಸರಣಿಗಳನ್ನ ಗೆದ್ದು ಟೀಂ ಇಂಡಿಯಾದ ಘನತೆ ಮೆರೆದಿದ್ದಾರೆ.

68 ಟೆಸ್ಟ್​ ಪಂದ್ಯಗಳನ್ನು ಮುನ್ನಡೆಸಿರುವ ಕೊಹ್ಲಿ, ಬರೋಬ್ಬರಿ 40ರಲ್ಲಿ ಗೆಲುವು ದಾಖಲಿಸಿದ್ದಾರೆ. ಕೇವಲ 17 ಪಂದ್ಯಗಳಲ್ಲಿ ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 11 ಪಂದ್ಯಗಳಲ್ಲಿ ಡ್ರಾ ನಲ್ಲಿ ಫಲಿತಾಂಶ ಅಂತ್ಯಕಂಡಿವೆ. ಗೆಲುವಿನ ಪ್ರಮಾಣ ಶೇ.58.82 ರಷ್ಟಿದೆ. ಏಕದಿನ ಕ್ರಿಕೆಟ್​​ನಲ್ಲೂ 95 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದಾರೆ. 65 ಪಂದ್ಯಗಳಲ್ಲಿ ಗೆಲುವು, ಕೇವಲ 27 ಸೋಲು ಕಂಡಿದ್ದಾರೆ. ಗೆಲುವಿನ ಪ್ರಮಾಣ 68.42ರಷ್ಟಿದೆ. ಇನ್ನೂ 50 ಟಿ20 ಪಂದ್ಯಗಳಿಗೆ ನಾಯಕತ್ವ ವಹಿಸಿದ ಕೊಹ್ಲಿ, 30 ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. 16 ಪಂದ್ಯಗಳಲ್ಲಿ ಸೋಲು ಕಂಡಿದ್ದು, 60ರಷ್ಟು ಗೆಲುವಿನ ಪ್ರಮಾಣ ಹೊಂದಿದ್ದಾರೆ.

ಕೊಹ್ಲಿ ವೃತ್ತಿಜೀವನ

2008ರಿಂದ ಒಟ್ಟು ಈವರೆಗೆ 275 ಏಕದಿನ ಪಂದ್ಯಗಳನ್ನ ಆಡಿರುವ ಕೊಹ್ಲಿ, 57.32ರ ಸರಾಸರಿಯಲ್ಲಿ, 46 ಶತಕ, 65 ಅರ್ಧಶತಕಗಳ ನೆರವಿನಿಂದ 12,898 ರನ್ ಗಳಿಸಿದ್ದಾರೆ. ಟೆಸ್ಟ್​ ಕ್ರಿಕೆಟ್​​ನಲ್ಲಿ 111 ಪಂದ್ಯಗಳಲ್ಲಿ 29 ಶತಕ, 7 ದ್ವಿಶತಕ, 29 ಅರ್ಧಶತಕಗಳ ನೆರವಿನಿಂದ 8,676 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್​ 254 ರನ್. 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ 4,008 ರನ್ ಬಾರಿಸಿದ್ದಾರೆ. ಇದರಲ್ಲಿ 37 ಅರ್ಧಶತಕ, 1 ಶತಕ ಕೂಡ ಸೇರಿದೆ.

ಐಸಿಸಿ ಟ್ರೋಫಿ ಗೆದ್ದಿಲ್ಲ ಅನ್ನೋದೆ ಚಿಂತೆ

ಹಲವು ವಿಶೇಷ ಸಾಧನೆಗಳನ್ನು ಮಾಡಿರುವ ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಐಸಿಸಿ ಟ್ರೋಫಿ ಗೆದ್ದಿಲ್ಲ ಎಂಬ ಕೊರಗು ಕಾಡುತ್ತಿದೆ. ದೇಶ-ವಿದೇಶಗಳಲ್ಲಿ ದ್ವಿಪಕ್ಷೀಯ ಸರಣಿಗಳಲ್ಲಿ ಧೂಳೆಬ್ಬಿಸಿದ ಕಿಂಗ್​ ಕೊಹ್ಲಿ, ಎರಡು ಬಾರಿ ಭಾರತ ತಂಡವನ್ನು ಐಸಿಸಿ ಫೈನಲ್​ಗೇರಿಸಿದ್ದರು. 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2021ರ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​​​ನಲ್ಲಿ ಭಾರತ ಮುಗ್ಗರಿಸಿತ್ತು. ಇನ್ನುಳಿದಂತೆ ಸೆಮಿಫೈನಲ್​​​ನಲ್ಲಿ ಹೆಚ್ಚಾಗಿ ಐಸಿಸಿ ಟೂರ್ನಿಗಳಲ್ಲಿ ಸೋಲು ಕಂಡಿದೆ. 2013ರ ಬಳಿಕ ಭಾರತ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿ ವಿಶ್ವಕಪ್‌ ಟೂರ್ನಿ ಕೊಹ್ಲಿಗೆ ಕೊನೆಯ ವಿಶ್ವಕಪ್‌ ಟೂರ್ನಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಟೀಂ ಇಂಡಿಯಾ ಕೊಹ್ಲಿಗಾಗಿ ಕಪ್‌ ಗೆಲ್ಲಲ್ಲೇಬೇಕೆಂಬುದು ಎಲ್ಲರ ಆಶಯ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:AsiaCupbcciICC WorldCupTeam indiavirat kohliಅಂತಾರಾಷ್ಟ್ರೀಯ ಕ್ರಿಕೆಟ್ಏಷ್ಯಾಕಪ್ 2023ಐಸಿಸಿ ವಿಶ್ವಕಪ್ಟೀಂ ಇಂಡಿಯಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema News

chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories
DARSHAN 1 1
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Cinema Court Latest Main Post
Shodha Pawan Kumar
ವೆಬ್ ಸಿರೀಸ್‌ಗಾಗಿ ಬಣ್ಣ ಹಚ್ಚಿದ ಲೂಸಿಯಾ ನಿರ್ದೇಶಕ ಪವನ್
Cinema Latest Sandalwood Top Stories

You Might Also Like

5 year old girl raped Man from Bagalkot arrested in Belagavi
Belgaum

5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

Public TV
By Public TV
29 minutes ago
Narendra Modi Donald Trump
Latest

ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್

Public TV
By Public TV
30 minutes ago
nirmala sitharaman b.y.raghavendra
Latest

ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

Public TV
By Public TV
50 minutes ago
DARSHAN 5
Bengaluru City

ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Public TV
By Public TV
1 hour ago
Dinesh Gundurao 1
Bengaluru City

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Public TV
By Public TV
1 hour ago
HD Kumaraswamy Mohan Charan Majhi
Latest

ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?