ಬೆಂಗಳೂರು: ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಾನು ವಿಶೇಷ ಪ್ರಕಟಣೆಯನ್ನು ಪ್ರಕಟಿಸುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಈ ಕುರಿತು ವಿರಾಟ್ ಸ್ವತಃ ತಮ್ಮ ಟ್ವಿಟ್ಟರ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ಜೊತೆ ಮುಖ್ಯವಾಗಿ ಮಾತನಾಡಬೇಕು. ನಾಳೆ ನಾನು 1.30ಕ್ಕೆ ಲೈವ್ ಬರುತ್ತಿದ್ದೇನೆ. ಯಾರೂ ಈ ಲೈವ್ ಮರೆಯಬೇಡಿ. ಏಕೆಂದರೆ ಇದು ಬಹಳ ಮುಖ್ಯವಾದದ್ದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ವಿರಾಟ್ ನಾಳೆ ಲೈವ್ ಬರುತ್ತಿರುವುದರಿಂದ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿದೆ. ಐಪಿಎಲ್ನಲ್ಲಿ ಆರ್ಸಿಬಿ ಕಳಪೆ ಪ್ರದರ್ಶನದ ಬಗ್ಗೆ ಮಾತನಾಡಲಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.
ಐಪಿಎಲ್ 2018 ರ 11ನೇ ಆವೃತ್ತಿಯಲ್ಲಿ ಸತತ ನೀರಸ ಪ್ರದರ್ಶನ ತೋರಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದರು. ಹಾಗೆಯೇ ವಿರಾಟ್ ಕೊಹ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುತ್ತಾರಾ? ಈ ಕಾರಣಕ್ಕೆ ದಿನಾಂಕ ಫಿಕ್ಸ್ ಮಾಡಿದ್ದಾರಾ ಎನ್ನುವ ಪ್ರಶ್ನೆಯನ್ನು ಈಗ ಅಭಿಮಾನಿಗಳು ಕೇಳುತ್ತಿದ್ದಾರೆ.
ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಡೆಲ್ಲಿ ತಂಡದ ನಾಯಕ ಪಟ್ಟದಿಂದ ಗೌತಮ್ ಗಂಭೀರ್ ಇಳಿದಿದ್ದರು. ಬಳಿಕ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
I'm going live on my Facebook and Instagram tomorrow at 1:30pm. Join me. We've got a lot of important things to discuss. pic.twitter.com/d6ndhYw34u
— Virat Kohli (@imVkohli) May 10, 2018