Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಿಶಾಖಪಟ್ಟಣ ದುರಂತ – ಏನಿದು ಸ್ಟೈರೀನ್? ಸೋರಿಕೆ ಆಗಿದ್ದು ಹೇಗೆ? ದೇಹ ಸೇರಿದ್ರೆ ಏನಾಗುತ್ತೆ?

Public TV
Last updated: May 7, 2020 3:34 pm
Public TV
Share
3 Min Read
india gas leak
SHARE

ಹೈದರಾಬಾದ್: ಆಂಧ್ರಪ್ರದೇಶದ ವಿಶಾಖಪಟ್ಟಣದ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ನನ್ನಮ್ಮ ಕೂಡ ಏಕಾಏಕಿ ಕೆಳಗೆ ಬಿದ್ರು, ಕೂಡ್ಲೇ ಆಸ್ಪತ್ರೆಗೆ ಕರೆದೊಯ್ದೆ- ಪ್ರತ್ಯಕ್ಷದರ್ಶಿ ವಿವರಣೆ

ಇಂದು ಮುಂಜಾನೆ ವಿಶಾಖಪಟ್ಟಣಂ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೂ 13 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 1,000ಕ್ಕೂ ಅಧಿಕ ಜನ ಈ ವಿಷಾನಿಲ ಗಾಳಿ ಸೇವಿಸಿರಬಹುದು ಎಂದು ತಜ್ಞರು ಅಂದಾಜಿಸಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಲ್ಲಿ ಸೋರಿಕೆಯಾದ ಸ್ಟೈರಿನ್ ಎಷ್ಟು ಅಪಾಯಕಾರಿ? ಯಾವುದಕ್ಕೆ ಬಳಕೆ ಮಾಡುತ್ತಾರೆ ಇತ್ಯಾದಿ ಪ್ರಶ್ನೆಗಳಿಗೆ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.

gas leak a 1

ಏನಿದು ಸ್ಟೈರೀನ್ ಗ್ಯಾಸ್?
ಎಲ್‍ಜಿ ಪಾಲಿಮರ್ಸ್ ಕಾರ್ಖಾನೆಯಿಂದ ಸೋರಿಕೆಯಾದ ಅನಿಲದ ಹೆಸರು ಸ್ಟೈರೀನ್. ಸ್ಟೈರೀನ್ ಪ್ಲಾಸ್ಟಿಕ್ ತಯಾರಿಕೆಗೆ ಉಪಯೋಗಿಸುವ ರಾಸಾಯನಿಕ ಸಂಯುಕ್ತವಾಗಿದೆ. ಬೆಂಜೀನ್ ರಾಸಾಯನಿಕದಿಂದ ಇದನ್ನು ಪಡೆಯಬಹುದು. C6H5CH=CH2 ಇದರ ರಾಸಾಯನಿಕ ಸೂತ್ರವಾಗಿದೆ.

ಯಾವುದಕ್ಕೆ ಬಳಕೆಯಾಗುತ್ತದೆ?
ಸ್ಟೈರೀನ್ ಪ್ಲಾಸ್ಟಿಕ್ ತಯಾರಿಕೆ ಉಪಯೋಗಿಸುವ ರಾಸಾಯನಿಕ ಸಂಯುಕ್ತವಾಗಿದ್ದು, ಇದನ್ನು ಪ್ಲಾಸ್ಟಿಕ್ ಮತ್ತು ಆಟಿಕೆ ವಸ್ತುಗಳನ್ನು ತಯಾರಿಸಲು ಬಳಸಲಾಗುತ್ತದೆ. ಸಿಂಥೆಟಿಕ್ ರಬ್ಬರ್ ಮತ್ತು ಪಾಲಿಸ್ಟೈರೀನ್ ರಾಳಗಳನ್ನು ತಯಾರಿಸಲು ಬಳಕೆ ಮಾಡಲಾಗುತ್ತದೆ. ಜಿಡ್ಡಿನಂತಿರುವ ಈ ಅನಿಲಕ್ಕೆ ಬಣ್ಣವಿಲ್ಲ. ಆದ್ರೆ ಇದನ್ನು ಸೇವಿಸಿದವರಿಗೆ ಸಿಹಿ ವಾಸನೆ ಬರುತ್ತದೆ. ಆದರೆ ಇದು ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಈ ರಾಸಾಯನಿಕ ಅನಿಲ ಗಾಳಿಗೆ ಬಂದ್ರೆ ಬಹು ಬೇಗನೇ ಆವಿಯಾಗುತ್ತದೆ.

leak 1

ಅಪಾಯಕಾರಿ ಯಾಕೆ?
ಭಾರೀ ಪ್ರಮಾಣದಲ್ಲಿ ಸ್ಟೈರೀನ್ ಅನಿಲವನ್ನು ಸೇವಿಸಿದರೆ ಕಣ್ಣು, ಮೂಗು ವಿಪರೀತ ಉರಿಯುತ್ತದೆ. ಗಂಟಲು ಮತ್ತು ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಉಸಿರಾಟಕ್ಕೆ ತೊಂದರೆಯಾಗುತ್ತದೆ. ಒಂದು ವೇಳೆ ಈ ಅನಿಲವನ್ನು ಹೆಚ್ಚಿನ ಪ್ರಮಾಣದಲ್ಲಿ ಉಸಿರಾಡಿದರೆ ತಲೆನೋವು, ಸುಸ್ತು, ನಿಶ್ಯಕ್ತಿ, ಕಿವುಡು, ಖಿನ್ನತೆ ನೋವುಗಳು ಕಾಣಿಸಬಹುದು. ಇದರ ಜೊತೆ ಕಿಡ್ನಿ, ಲಿವರ್ ಸಮಸ್ಯೆಯಾಗುತ್ತದೆ. ಭಾರೀ ಪ್ರಮಾಣದಲ್ಲಿ ದೇಹ ಸೇರಿದರೆ ದೀರ್ಘಕಾಲದವರೆಗೆ ನರಮಂಡಲಕ್ಕೆ ಹಾನಿಯಾಗುವ ಸಾಧ್ಯತೆಯಿದೆ.

ವಾತಾವರಣದಲ್ಲಿ ಸ್ಟೈರೀನ್ ಇದೆ:
ಆಮ್ಲಜನಕ ಹೇಗೆ ವಾತಾವರಣದಲ್ಲಿ ಇದೆಯೋ ಅದೇ ರೀತಿಯಾಗಿ ನಮ್ಮ ಸುತ್ತಮುತ್ತಲು ಸ್ಟೈರಿನ್ ಸೇರಿದಂತೆ ಹಲವು ಅನಿಲಗಳು ಇರುತ್ತದೆ. ವಾಹನದ ಎಕ್ಸಾಸ್ಟ್, ಸಿಗರೇಟಿನ ಹೊಗೆಯಲ್ಲೂ ಸ್ಟೈರೀನ್ ಇರುತ್ತದೆ. ಕಟ್ಟಡ ನಿರ್ಮಾಣ ವಸ್ತುಗಳು, ಬಳಕೆದಾರ ವಸ್ತುಗಳಿಂದಲೂ ಬರುತ್ತದೆ. ಇವುಗಳ ಪ್ರಮಾಣ ಕಡಿಮೆ ಇರುವ ಕಾರಣ ದೇಹಕ್ಕೆ ಸೇರಿದರೂ ಅದು ತಿಳಿಯುವುದಿಲ್ಲ. ಪ್ಲಾಸ್ಟಿಕ್ ಕಾರ್ಖಾನೆಗಳಿಂದ ಹೆಚ್ಚಾಗಿ ಸ್ಟೈರೀನ್ ಹೊರ ಬರುತ್ತದೆ.

500 kg of Para-tertiary butyl catechol (PTBC) chemical will be airlifted from Daman by Andhra Pradesh govt for neutralizing the gas leakage in Visakhapatnam plant: Ashwani Kumar, Secretary to Gujarat Chief Minister Vijay Rupani #VizagGasLeak pic.twitter.com/ZUfBAlu5Rs

— ANI (@ANI) May 7, 2020

ಸೋರಿಕೆಯಾಗಿದ್ದು ಹೇಗೆ?
ವಿಶಾಖಪಟ್ಟಣಂನ ಸಹಾಯಕ ಪೊಲೀಸ್ ಆಯುಕ್ತ ಸ್ವರೂಪಾ ರಾಣಿ ಮಾತನಾಡಿ, ಮಾರ್ಚ್ ಅಂತ್ಯದಿಂದ ದೇಶವೇ ಕೊರೊನಾ ವೈರಸ್ ಲಾಕ್‍ಡೌನ್ ಆಗಿದ್ದರಿಂದ ಈ ಕಾರ್ಖಾನೆ ಎರಡು ತಿಂಗಳು ಕಾರ್ಯನಿರ್ವಹಿಸಿರಲಿಲ್ಲ. ಆದರೆ ಈಗ ಲಾಕ್‍ಡೌನ್ ಸಡಿಲಿಕೆ ಆದ ಮೇಲೆ ಕಾರ್ಖಾನೆಯನ್ನು ತೆರೆಯಲಾಗಿತ್ತು. ಈ ಟ್ಯಾಂಕ್‍ಗಳಲ್ಲಿ ಮೊದಲೇ ಉಳಿದಿದ್ದ ಅನಿಲ ಈಗ ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶಾಖೋತ್ಪತ್ತಿಯಾಗಿ ಸೋರಿಕೆಯಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ಎಲ್‍ಜಿ ಕಂಪನಿ ಹೇಳಿಕೆ ಬಿಡುಗಡೆ ಮಾಡಿ, ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಸದ್ಯ ಈಗ ಎಲ್ಲಿಯೂ ಸೋರಿಕೆ ಆಗುತ್ತಿಲ್ಲ ಎಂದು ತಿಳಿಸಿದೆ.

ಪರಿಸ್ಥಿತಿ ಹೇಗಿದೆ?
ಈಗಾಗಲೇ ಎನ್‍ಡಿಆರ್‍ಎಫ್ ತಂಡ ತೊಂದರೆಗೊಳಗಾದ 5 ಗ್ರಾಮಗಳಿಗೆ ಬಂದಿದ್ದು, ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. 5 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕ ಮತ್ತು ವೆಂಟಿಲೇಟರ್ ಗಳು ಮೊದಲೇ ಸಿದ್ಧವಾಗಿರಿಸಿದ್ದ ಕಾರಣ ಹಲವು ಜೀವಗಳು ಉಳಿದಿದೆ. ಗಾಳಿ ಯಾವ ಕಡೆ ಹೆಚ್ಚು ಬೀಸುತ್ತದೋ ಆ ಪ್ರದೇಶಗಳಿಗೆ ಹೆಚ್ಚಿನ ಸಮಸ್ಯೆಯಾಗಿದೆ.

Visakhapatnam: Andhra Pradesh Chief Minister YS Jagan Mohan Reddy meets those hospitalized at King George hospital. #VizagGasLeak pic.twitter.com/vD94qKgSBZ

— ANI (@ANI) May 7, 2020

ಎಲ್‍ಜಿ ಪಾಲಿಮರ್ಸ್ ಕಾರ್ಖಾನೆ:
ಹಿಂದೂಸ್ಥಾನ್ ಪಾಲಿಮರ್ಸ್ ಎಂಬ ಹೆಸರಿನೊಂದಿಗೆ 1961ರಲ್ಲಿ ಆರಂಭವಾದ ಈ ಕಾರ್ಖಾನೆಯನ್ನು 1997 ರಲ್ಲಿ ದಕ್ಷಿಣ ಕೊರಿಯಾದ ಎಲ್‍ಜಿ ಸಂಸ್ಥೆ ಖರೀದಿಸಿತ್ತು. ಈ ಹಿನ್ನೆಲೆಯಲ್ಲಿ ಈ ಕಾರ್ಖಾನೆಗೆ ಎಲ್‍ಜಿ ಪಾಲಿಮರ್ಸ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಇದು ಪಾಲಿಸ್ಟೈರೀನ್ ತಯಾರಿಸುವ ಘಟಕವಾಗಿದ್ದು, ಆಟಿಕೆ ಮತ್ತು ವಿವಿಧ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಹೀಗಾಗಿ ಈ ಕಾರ್ಖಾನೆಯಲ್ಲಿ ಭಾರೀ ಪ್ರಮಾಣದಲ್ಲಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ಬಳಕೆಯಾಗದೇ ಸಂಗ್ರಹಿಸಿಟ್ಟಿದ್ದ ಸುಮಾರು 5 ಸಾವಿರ ಟನ್ ರಾಸಾಯನಿಕದಿಂದ ವಿಷಾನಿಲ ಸೋರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ.

It is a chemical disaster the response requires expertise on chemical side, on chemical management side, on medical side as well as on the evacuation side. Prime Minister took stock of what across the board response should be: National Disaster Management Authority #VizagGasLeak pic.twitter.com/XdQPTsgJln

— ANI (@ANI) May 7, 2020

TAGGED:Factorygas leakhospitalHyderabadpolicePublic TVStyrene Gasಆಸ್ಪತ್ರೆಕಾರ್ಖಾನೆಗ್ಯಾಸ್ ಲೀಕ್ಪಬ್ಲಿಕ್ ಟಿವಿಪೊಲೀಸ್ಸ್ಟೈರೀನ್ ಅನಿಲಹೈದರಾಬಾದ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 hour ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
4 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
5 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
5 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
41 minutes ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
2 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
35 minutes ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
54 minutes ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
1 hour ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?