Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇನಾಮಿಯಾಗಿ ಅರಮನೆ ಆಸ್ತಿ ಖರೀದಿ – ಇಡಿ ಪ್ರಕರಣಕ್ಕೆ ತಿರುವು ಕೊಟ್ಟಿದ್ದೇ ವಿಶಾಲಾಕ್ಷಿ ದೇವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೇನಾಮಿಯಾಗಿ ಅರಮನೆ ಆಸ್ತಿ ಖರೀದಿ – ಇಡಿ ಪ್ರಕರಣಕ್ಕೆ ತಿರುವು ಕೊಟ್ಟಿದ್ದೇ ವಿಶಾಲಾಕ್ಷಿ ದೇವಿ

Bengaluru City

ಬೇನಾಮಿಯಾಗಿ ಅರಮನೆ ಆಸ್ತಿ ಖರೀದಿ – ಇಡಿ ಪ್ರಕರಣಕ್ಕೆ ತಿರುವು ಕೊಟ್ಟಿದ್ದೇ ವಿಶಾಲಾಕ್ಷಿ ದೇವಿ

Public TV
Last updated: September 5, 2019 7:27 pm
Public TV
Share
3 Min Read
vishalakshi dkshi copy
SHARE

ಬೆಂಗಳೂರು: ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿಶಾಲಕ್ಷಿ ದೇವಿ ಅವರಿಂದ ಆಸ್ತಿಯನ್ನು ಬೇನಾಮಿಯಾಗಿ ಪಡೆದುಕೊಂಡಿದ್ದಾರೆ ಎನ್ನಲಾದ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಬಂಧನದಲ್ಲಿರುವ ಡಿಕೆಶಿಯನ್ನು ಬುಧವಾರ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಸಂದರ್ಭದಲ್ಲಿ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ಅವರು ಶಿವಕುಮಾರ್ ಅವರು 44 ಕೋಟಿ ಅಕ್ರಮ ವಹಿವಾಟು ನಡೆಸಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಸಿಕ್ಕಿದೆ. ಹೀಗಾಗಿ ಅವರನ್ನು ಮತ್ತಷ್ಟು ವಿಚಾರಣೆ ನಡೆಸಬೇಕಾಗಿರುವ ಕಾರಣ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದ್ದರು. ವಾದ ಸಂದರ್ಭದಲ್ಲಿ ಬೇರೆ ವಿಚಾರದ ಜೊತೆ ಈ ಅಂಶ ಬಲವಾಗಿ ಪ್ರತಿಪಾದನೆಯಾದ ಕಾರಣ ಕೋರ್ಟ್ ಡಿಕೆಶಿಯನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತು.

ಡಿಕೆಶಿ ಮತ್ತು ಆಪ್ತರ ನಿವಾಸದ ಮೇಲಿನ ಐಟಿ ದಾಳಿಯ ವೇಳೆ ಈ ಮಹತ್ವದ ದಾಖಲೆಗಳು ಲಭ್ಯವಾಗಿದ್ದು ಅದರಲ್ಲಿ 5 ಕೋಟಿ ಬೇನಾಮಿ ವಹಿವಾಟಿನ ವಿಚಾರ ಪತ್ತೆಯಾಗಿತ್ತು. ದೆಹಲಿ ಫ್ಲ್ಯಾಟ್ ನಲ್ಲಿ ಪತ್ತೆಯಾದ 8.59 ಕೋಟಿ ರೂಪಾಯಿಯ ಮೂಲವನ್ನು ಪತ್ತೆ ಮಾಡುವ ಜೊತೆ ಇಡಿ ಈಗ 44 ಕೋಟಿ ರೂ. ಅಕ್ರಮ ವ್ಯವಹಾರಗಳ ಕುರಿತು ಡಿಕೆ ಶಿವಕುಮಾರ್ ಅವರಲ್ಲಿ ಪ್ರಶ್ನೆ ಕೇಳಿ ಮಾಹಿತಿ ಪಡೆದುಕೊಳ್ಳುತ್ತಿದೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ.

DK 1

ವಿಶಾಲಾಕ್ಷಿದೇವಿ ಯಾರು?
ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್ ಅವರ ಪುತ್ರಿ ಯಾಗಿರುವ ವಿಶಾಲಾಕ್ಷಿದೇವಿ ಶ್ರೀಕಂಠದತ್ತ ಒಡೆಯರ್ ಸಹೋದರಿ ಆಗಿದ್ದಾರೆ. ಬೆಂಗಳೂರು ಅರಮನೆ ಆಸ್ತಿಯ ಒಡೆತನ ಹೊಂದಿದ್ದ ವಿಶಾಲಾಕ್ಷಿ ದೇವಿ ಡಿಕೆ ಶಿವಕುಮಾರ್ ಜೊತೆ ಬೇನಾಮಿ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಐಟಿ ಮಾಡಿತ್ತು. 2018 ಆಕ್ಟೋಬರ್ ನಲ್ಲಿ ವಿಶಾಲಾಕ್ಷಿ ದೇವಿ ನಿಧನ ಹೊಂದಿದ್ದರು.

ಲಿಂಕ್ ಹೇಗೆ?
ಬೆಂಗಳೂರು ಅರಮನೆ ಆಸ್ತಿಯಲ್ಲಿ ವಿಶಾಲಾಕ್ಷಿ ದೇವಿ ಪಾಲನ್ನು ಹೊಂದಿದ್ದರು. ಈ ಆಸ್ತಿಯನ್ನು ಶಿವಕುಮಾರ್ ಬೇನಾಮಿ ರೂಪದಲ್ಲಿ ಖರೀದಿಸಿದ್ದಾರೆ ಎಂದು ಈ ಹಿಂದೆಯೇ ಆದಾಯ ತೆರಿಗೆ ಇಲಾಖೆ ಹೈಕೋರ್ಟಿಗೆ ಮಾಹಿತಿ ನೀಡಿತ್ತು. ಡಿಕೆ ಶಿವಕುಮಾರ್ ಅವರು ತಮ್ಮ ಸೋದರ ಸಂಬಂಧಿ ಶಶಿಕುಮಾರ್ ಮೂಲಕ ಈ ವ್ಯವಹಾರ ನಡೆಸಿದ್ದು, ವಿಶಾಲಕ್ಷಿ ದೇವಿ ಅವರಿಗೆ 1 ಕೋಟಿ ರೂ. ಹಣವನ್ನು ಚೆಕ್ ಮೂಲಕ ನೀಡಿದ್ದರೆ 4 ಕೋಟಿ ರೂ. ಹಣವನ್ನು ಚಂದ್ರಶೇಖರ್ ಸುಖಪುರಿ ಎಂಬವರ ಮೂಲಕ ನಗದು ರೂಪದಲ್ಲಿ ನೀಡಲಾಗಿದೆ. ಈ ವ್ಯವಹಾರದಲ್ಲಿ ವಿಶಾಲಾಕ್ಷಿ ದೇವಿ ಸಹ ಭಾಗಿಯಾಗಿದ್ದಾರೆ ಎಂದು ಐಟಿ ಆರೋಪಿಸಿತ್ತು.

DK 2 1

ಪತ್ತೆಯಾಗಿದ್ದು ಹೇಗೆ?
ಡಿಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಡಿಕೆಶಿಯ ಸೋದರ ಸಂಬಂಧಿ ಶಶಿಕುಮಾರ್ ನಿವಾಸದ ಮೇಲೂ ದಾಳಿ ನಡೆದಿತ್ತು ಇಲ್ಲಿ ಸಿಕ್ಕಿದ ದಾಖಲೆ ಆಧಾರಿಸಿ ವಿಶಾಲಕ್ಷಿ ದೇವಿ ನಿವಾಸದ ಮೇಲೂ ದಾಳಿ ನಡೆಸಿ ಅವರ ಆಸ್ತಿ ಮುಟ್ಟುಗೋಲು ಹಾಕಿತ್ತು. ದಾಳಿಯ ಬಳಿಕ ವಿಶಾಲಕ್ಷಿ ದೇವಿ ನನಗೂ ಬೇನಾಮಿ ವ್ಯವಹಾರಕ್ಕೂ ಸಂಬಂಧ ಇಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಐಟಿ ಚಂದ್ರಶೇಖರ್ ಮತ್ತು ಶಶಿಕುಮಾರ್ ಈ ಹಣದ ಮೂಲವನ್ನು ಸಾಬೀತು ಪಡಿಸಿಲ್ಲ. ಉದ್ಯಮಿ ಸಚಿನ್ ನಾರಾಯಣ ಅವರು ಈ ಹಣ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಮೂಲವನ್ನು ತೋರಿಸುವಲ್ಲಿ ವಿಫಲರಾಗಿದ್ದು, ಡಿಕೆ ಶಿವಕುಮಾರ್ ಅವರೇ ಬೇನಾಮಿಯಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದಿತ್ತು.

DK Shivakumar ED Main 1 1

ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು ಹೇಗೆ?
ಡಿಕೆ ಶಿವಕುಮಾರ್ ನಿವಾಸ, ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿಲ್ಲ. ಆದರೆ ಡಿಕೆಶಿಯನ್ನು ಇಡಿ ಬಂಧಿಸಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡುವುದು ಸಹಜ. ಇಡಿ ದಾಳಿ ನಡೆಸದೇ ಇದ್ದರೂ ಒಟ್ಟು ನಾಲ್ಕು ದೂರು ದಾಖಲಿಸಿದ್ದ ಐಟಿ ಇಲಾಖೆಯ ತನಿಖಾ ವರದಿ ಆಧರಿಸಿ ಇಡಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ)ಅಡಿ ಪ್ರಕರಣ ದಾಖಲಿಸಿ ವಿಚಾರಣೆಗೆ ಸಮನ್ಸ್ ಜಾರಿ ಮಾಡಿತ್ತು. ನಾಲ್ಕು ದಿನಗಳಿಂದ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದ ಇಡಿ ಅಧಿಕಾರಿಗಳು ಪ್ರಶ್ನೆಗೆ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಡಿಕೆಶಿಯನ್ನು ಬಂಧಿಸಿದ್ದರು.

ಡಿಕೆಶಿ ಆಸ್ತಿ ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?
ಚರಾಸ್ತಿ
2013- 60.34 ಕೋಟಿ
2019- 101.31 ಕೋಟಿ
5 ವರ್ಷದ ಮ್ಯಾಜಿಕ್- 94.97 ಕೋಟಿ ರೂ. ಜಾಸ್ತಿ

ಕೃಷಿ ಜಮೀನು
2013-1.14 ಕೋಟಿ
2019- 9.04 ಕೋಟಿ
5 ವರ್ಷದ ಮ್ಯಾಜಿಕ್- 7.90 ಕೋಟಿ ಜಾಸ್ತಿ

ವಸತಿ ಕಟ್ಟಡಗಳು
2013-14.02 ಕೋಟಿ
2019-103.29 ಕೋಟಿ
5 ವರ್ಷದ ಮ್ಯಾಜಿಕ್- 89 ಕೋಟಿ ಜಾಸ್ತಿ

ಡಿಕೆಶಿ ಆಸ್ತಿ
ಕೃಷಿಯೇತರ ಜಮೀನು
2013-149.65 ಕೋಟಿ
2019-511.25 ಕೋಟಿ
5 ವರ್ಷದ ಮ್ಯಾಜಿಕ್- 361 ಕೋಟಿ

ವಾಣಿಜ್ಯ ಕಟ್ಟಡಗಳು
2013-26.24 ಕೋಟಿ
2019-37.27 ಕೋಟಿ
5 ವರ್ಷದ ಮ್ಯಾಜಿಕ್- 11 ಕೋಟಿ ಜಾಸ್ತಿ

2013- 251.39
2019- 762.16
5 ವರ್ಷದ ಮ್ಯಾಜಿಕ್- 510.77

TAGGED:bengalurud k shivakumarpropertyPublic TVVishalakshi Deviಆಸ್ತಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುವಿಶಾಲಾಕ್ಷಿ ದೇವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
4 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
30 minutes ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
53 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
2 hours ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?