Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Cinema - ವಿಷ್ಣು ಸ್ಮಾರಕ ಲೋಕಾರ್ಪಣೆ : ಶುಭ ಕೋರಿದ ಕಿಚ್ಚ, ಸುಮಲತಾ ಅಂಬರೀಶ್

Cinema

ವಿಷ್ಣು ಸ್ಮಾರಕ ಲೋಕಾರ್ಪಣೆ : ಶುಭ ಕೋರಿದ ಕಿಚ್ಚ, ಸುಮಲತಾ ಅಂಬರೀಶ್

Public TV
Last updated: 2023/01/29 at 11:07 AM
Public TV
Share
2 Min Read
SHARE

ಇಂದು ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ ಲೋಕಾರ್ಪಣೆ (Memorial, Inauguration) ಆಗುತ್ತಿದೆ. ಸತತ 13 ವರ್ಷಗಳ ಹೋರಾಟದ ಫಲವಾಗಿ ಇಂದು ಉದ್ಘಾಟನೆ ಆಗುತ್ತಿರುವ ಸ್ಮಾರಕದ ಕಾರ್ಯಕ್ರಮಕ್ಕೆ ಕನ್ನಡ ಸಿನಿಮಾ ರಂಗದ ಕೆಲವೇ ಕೆಲವು ಗಣ್ಯರು ಶುಭ ಕೋರಿದ್ದಾರೆ. ಉಳಿದವರ ದಿವ್ಯ ಮೌನ ತಾಳಿದ್ದಾರೆ. ಸಂಸದೆ ಹಾಗೂ ವಿಷ್ಣು ಕುಟುಂಬಕ್ಕೆ ತೀರಾ ಹತ್ತಿರವಿರುವ ಸುಮಲತಾ ಅಂಬರೀಶ್ (Sumalatha) ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರಿದ್ದಾರೆ. ಸಂಸತ್ ಅಧಿವೇಶನದ ಸಲುವಾಗಿ ದೆಹಲಿಯಲ್ಲಿರುವ ಅವರು ಶೀಘ್ರದಲ್ಲೇ ಸ್ಮಾರಕಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ಕಿಚ್ಚ ಸುದೀಪ್ (Sudeep) ಕೂಡ ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರಿದ್ದು, ‘ಕಾಯುತ್ತಿದ್ದರು ಕರುನಾಡ ಜನತೆ ಇಂಥದ್ದೊಂದು ಅದ್ಭುತ ಕ್ಷಣಕ್ಕೆ. ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ. ಒಳ್ಳೆಯದೇ ಆಗುತ್ತಿದೆ. ಯಜಮಾನ್ರ ಸ್ಮಾರಕ ಲೋಕಾರ್ಪಣೆ ಸಮಾರಂಭಕ್ಕೆ ಶುಭ ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಮೈಸೂರಿನ ಹೆಚ್.ಡಿ. ಕೋಟೆ ರಸ್ತೆಯ, ಉದ್ಬೂರು ಗೇಟ್ ಬಳಿ ಇರುವ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾದ  ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇನ್ನೇನು ಕೆಲವೇ ಕ್ಷಣಗಳಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಪೇಪರ್ ಡ್ರೆಸ್ ಧರಿಸಿ ಮಿಂಚಿದ ʻಬಿಗ್‌ ಬಾಸ್‌ʼ ಖ್ಯಾತಿಯ ನಿವೇದಿತಾ ಗೌಡ

2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚುವೆಲ್ ಆಗಿ ಭೂಮಿ ಪೂಜೆಯನ್ನು ನೆರವೇರಿಸಿದ್ದರು. ಬರೋಬ್ಬರಿ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದ್ದು, ಪೊಲೀಸ್ ವಸತಿ ನಿಗಮವು ಇದರ ಉಸ್ತುವಾರಿ ವಹಿಸಿಕೊಂಡಿತ್ತು.  5 ಎಕರೆ ಜಾಗದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಒಟ್ಟು 27 ಸಾವಿರ ಚದರಡಿಯಲ್ಲಿ ಸ್ಮಾರಕದ ಕಟ್ಟಡ ತಲೆಯೆತ್ತಿದೆ.

ಸ್ಮಾರಕ ಕಟ್ಟದಲ್ಲಿ ಎರಡು ಎಕರೆಯಲ್ಲಿ ತಳಮಹಡಿ, ನೆಲಮಹಡಿ ಹಾಗೂ ವಿಷ್ಣುವರ್ಧನ್ ನಿಂತಿರುವ ಭಂಗಿಯ ಪ್ರತಿಮೆ, ಸಭಾಂಗಣ, ಕಲಾವಿದರ ಕೊಠಡಿ, ತರಗತಿ ಕೊಠಡಿಗಳು ಹೀಗೆ ನಾನಾ ಕಟ್ಟಡಗಳನ್ನು ಅದು ಒಳಗೊಂಡಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ವಿಷ್ಣು ಪ್ರತಿಮೆಯು ಕೂಡ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ. ಅಲ್ಲದೇ, ವಿಷ್ಣುವರ್ಧನ್ ಅವರ ಚಿತಾಭಸ್ಮವನ್ನು ಇಲ್ಲಿಯೇ ತಂದಿಡಲಾಗುತ್ತದೆ.

ಇಂಥದ್ದೊಂದು ಸ್ಮಾರಕಕ್ಕಾಗಿ ವಿಷ್ಣುವರ್ಧನ್ ಕುಟುಂಬ ಮತ್ತು ವಿಷ್ಣು ಅಭಿಮಾನಿಗಳು ಸತತ ಹೋರಾಟ ಮಾಡುತ್ತಲೇ ಬಂದರು. ವಿಷ್ಣುವರ್ಧನ್ ಅವರ ಸಮಾಧಿಯ ಜಾಗದಲ್ಲೇ ಸ್ಮಾರಕವನ್ನು ನಿರ್ಮಾಣ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಸ್ಮಾರಕ ನಿರ್ಮಾಣಕ್ಕಾಗಿ 2010-11ರ ಬಜೆಟ್ ನಲ್ಲಿ 11 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿತ್ತು. ಆದರೆ, ಅಭಿಮಾನ ಸ್ಟುಡಿಯೋ ಜಾಗ ಕೋರ್ಟ್ ನಲ್ಲಿ ಇರುವ ಕಾರಣದಿಂದಾಗಿ ಅಲ್ಲಿ ಸಾಧ್ಯವಾಗಲಿಲ್ಲ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: ambarish, Basavaraja Bommai, Bharti, inauguration, Memorial, mysore, sudeep, Sumalatha, Vishnuvardhan, ಅಂಬರೀಶ್, ಉದ್ಘಾಟನೆ, ಬಸವರಾಜ ಬೊಮ್ಮಾಯಿ, ಭಾರತಿ, ಮೈಸೂರು, ವಿಷ್ಣುವರ್ಧನ್, ಸುದೀಪ್, ಸುಮಲತಾ, ಸ್ಮಾರಕ
Share this Article
Facebook Twitter Whatsapp Whatsapp Telegram
Share

Latest News

ನನಗೆ ಮಕ್ಕಳು ಇಲ್ಲದಿರಬಹುದು, ಶ್ವಾನಗಳೇ ನನಗೆ ಮಕ್ಕಳ ಸಮಾನ: ರಮ್ಯಾ
By Public TV
ಸಂಚಾರ ದಟ್ಟಣೆ ನಿವಾರಣೆಗೆ ಪ್ಲಾನ್- ಇದೇ ವರ್ಷ ತಲೆ ಎತ್ತಲಿವೆ 5 ಫ್ಲೈಓವರ್‌ಗಳು!
By Public TV
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು
By Public TV
ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ
By Public TV
ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ
By Public TV
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‌ ಬಾಸ್‌ ಬೆಡಗಿ ಅಕ್ಷತಾ ಕುಕಿ
By Public TV

You Might Also Like

Cinema

ನನಗೆ ಮಕ್ಕಳು ಇಲ್ಲದಿರಬಹುದು, ಶ್ವಾನಗಳೇ ನನಗೆ ಮಕ್ಕಳ ಸಮಾನ: ರಮ್ಯಾ

Public TV By Public TV 19 mins ago
Bengaluru City

ಸಂಚಾರ ದಟ್ಟಣೆ ನಿವಾರಣೆಗೆ ಪ್ಲಾನ್- ಇದೇ ವರ್ಷ ತಲೆ ಎತ್ತಲಿವೆ 5 ಫ್ಲೈಓವರ್‌ಗಳು!

Public TV By Public TV 50 mins ago
International

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು

Public TV By Public TV 52 mins ago
Bollywood

ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

Public TV By Public TV 57 mins ago
Follow US
Go to mobile version
Welcome Back!

Sign in to your account

Lost your password?