Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ

Cinema

ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ

Public TV
Last updated: August 23, 2025 8:01 pm
Public TV
Share
3 Min Read
Vishnuvardhans memorial
SHARE

ಸಾಹಸ ಸಿಂಹ, ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಅವರ ಸಮಾಧಿ ರಾತ್ರೋ ರಾತ್ರಿ ನೆಲಸಮವಾಗಿದೆ. ಈ ವಿಚಾರ ಹಾಗೂ ಅಭಿಮಾನ್ ಸ್ಟುಡಿಯೋದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗಮನಕ್ಕೆ ತರಲು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್, ನಿರ್ಮಾಪಕ ಕೆ.ಮಂಜು, ಸಾಹಿತಿ ಹಾಗೂ ನಿರ್ದೇಶಕರಾದ ಡಾ.ವಿ.ನಾಗೇಂದ್ರ ಪ್ರಸಾದ್ ಇನ್ನಿತರ ವಿಷ್ಣುವರ್ಧನ್ ಅಭಿಮಾನಿಗಳು ಸಭೆ ನಡೆಸಿದರು. ಫಿಲ್ಮ್ ಚೇಂಬರ್‌ನ ಅಧ್ಯಕ್ಷರು ಹಾಗೂ ನಿರ್ಮಾಪಕ ಸಂಘದ ಅಧ್ಯಕ್ಷರ ಸಮಕ್ಷಮದಲ್ಲಿ ಸಭೆ ನಡೆಸಿ ತಮ್ಮ ಮನವಿಯನ್ನ ಸಲ್ಲಿಸಿದ್ದಾರೆ ವಿಷ್ಣುವರ್ಧನ್ ಅಭಿಮಾನಿಗಳು.

ವಿಷ್ಣುಸೇನಾ ಸಮಿತಿಯ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ‘ಘಟನೆ ನಡೆದು 2 ವಾರಗಳು ಕಳೆಯುತ್ತಿದೆ. ಈ ಬಗ್ಗೆ ಚಿತ್ರರಂಗ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾಕೆ ಧ್ವನಿ ಎತ್ತುತ್ತಿಲ್ಲ. ಒಟ್ಟಾರೆ ಫಿಲ್ಮ್ ಚೇಂಬರ್‌ನ ನಿಲುವೇನು..? ನಿಮ್ಮ ಉದ್ದೇಶವೇನು..? ಡಾ.ವಿಷ್ಣುವರ್ಧನ್ ಅವರ ವಿಚಾರದಲ್ಲಿ ಯಾಕೆ ಈ ಧೋರಣೆ ಎಂದು ಪ್ರಶ್ನಿಸಿದರು. ಅಲ್ಲದೆ, ಇದಕ್ಕೆ ಪರಿಹಾರ ಸಿಗದೇ ಇದ್ದರೆ ಕಲಾವಿದರ ಮನೆ ಮುಂದೆ ಧರಣಿ ಕೂರುತ್ತೇವೆ’ ಎನ್ನುವ ಖಡಕ್ ಸಂದೇಶವನ್ನ ರವಾನೆ ಮಾಡಿದ್ದಾರೆ ವೀರಕಪುತ್ರ ಶ್ರೀನಿವಾಸ್. ಇದನ್ನೂ ಓದಿ: ಡಾ. ವಿಷ್ಣು ಅಭಿಮಾನ ಸ್ಮಾರಕ – ಪುತ್ಥಳಿ ನಿರ್ಮಾಣಕ್ಕೆ ಚಾಲನೆ

Vishnuvardhans memorial 1

ವೀರಕಪುತ್ರ ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ಎಂ.ನರಸಿಂಹಲು, ‘ಘಟನೆ ನಡೆದ ದಿನ ಅಭಿಮಾನ್ ಸ್ಟುಡಿಯೋ ಬಳಿ ನಾನು ಆಗಮಿಸಿದ್ದೆ, 2016 ರಿಂದಲೂ ವಿಷ್ಣುವರ್ಧನ್ ಕುಟುಂಬಸ್ಥರು ಬರೆದಿರುವ ದಾಖಲೆಗಳು ನಮ್ಮ ಬಳಿ ಇವೆ. ವಿಷ್ಣು ಸಮಾಧಿ ಮೊದಲು ಹೇಗಿತ್ತು..? ಈಗ ಹೇಗಾಗಿದೆ ಎನ್ನುವ ಬಗ್ಗೆ ಎಲ್ಲ ದಾಖಲೆಗಳಿವೆ ಎಂದಿದ್ದಾರೆ. ಈ ವಿಷಯವನ್ನ ಸರ್ಕಾರದ ಗಮನಕ್ಕೆ ತರಲು ಪ್ರಯತ್ನ ನಡೆಸಿದ್ದೇವೆ. ಆದರೆ, ಈಗ ಅಧಿವೇಶನ ನಡೆಯುತ್ತಿರುವ ಕಾರಣ ಸಿಎಂ ಸಿಗುತ್ತಿಲ್ಲ. ಶೀಘ್ರವೇ ಸರ್ಕಾರದ ಗಮನಕ್ಕೆ ತರುತ್ತೇವೆ’ ಎನ್ನುವ ಭರವಸೆಯನ್ನ ಕೊಟ್ಟಿದೆ ಫಿಲ್ಮ್ ಚೇಂಬರ್. ಅಲ್ಲದೇ 10 ಗುಂಟೆ ಜಾಗವನ್ನ ಅಭಿಮಾನಿಗಳಿಗೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ವಾಣಿಜ್ಯ ಮಂಡಳಿ ನಿಮ್ಮ ಜೊತೆ ಇರುತ್ತೆ ಎನ್ನುವ ಮಾತುಗಳನ್ನಾಡಿದ್ದಾರೆ.

ನಿರ್ಮಾಪಕ ಕೆ.ಮಂಜು ಮಾತನಾಡಿ, ‘ಸಮಾಧಿ ಧ್ವಂಸ ಮಾಡಿದ್ದು ಬೇಸರ ತಂದಿದೆ. ನಾವು ಕಾನೂನಿನ ಚೌಕಟ್ಟನ್ನ ಮೀರಬಾರದು. ಬಾಲಣ್ಣ ಪುತ್ರ ಗಣೇಶ್ ಅವರು ಡಿಸಿ ಮುಂದೆ 10 ಗುಂಟೆ ಜಾಗವನ್ನ ವಿಷ್ಣು ಸಮಾಧಿಗೆ ಕೊಡೋದಾಗಿ ಹಿಂದೆನೇ ಒಪ್ಪಿಕೊಂಡಿದ್ದಾರೆ. ಬಾಲಣ್ಣ ಅವರ ಮೊಮ್ಮಗ ಕಾರ್ತಿಕ್ ಅವರನ್ನ ಕರೆಸಿ ಮಾತ್ನಾಡಿದೆ. ಈ ರೀತಿ ಮಾಡಿದ್ದು ತಪ್ಪು ಎಂದು ಹೇಳಿದ್ದೇನೆ. ಅಭಿಮಾನಿಗಳು ಏನಾದ್ರೂ ತಪ್ಪು ಮಾಡಿದ್ರೆ ನಾನು ಅವರ ಪರವಾಗಿ ಕ್ಷಮೆ ಕೇಳ್ತಿದ್ದೆ ಎಂದು ಕಾರ್ತಿಕ್ ಮುಂದೆ ಹೇಳಿದ್ದೇನೆ. ಆ ಜಾಗಕ್ಕಾಗಿ ಹಣ ನೀಡಲು ಕೂಡಾ ನಾವು ಸಿದ್ಧರಿದ್ದೇವೆ ಎಂದು ಹೇಳಿದೆ ಆದ್ರೆ ಅವರು ಹಣದ ವಿಚಾರ ಬಂದರೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಾವು ಕಾನೂನು ನಿಟ್ಟಿನಲ್ಲಿ ಹೋರಾಡೋಣ ಇಲ್ಲವೇ ಬಾಲಣ್ಣ ಕುಟುಂಬಸ್ಥರ ಮುಂದೆ ಮನವಿ ಮಾಡಿ ಆ 10 ಗುಂಟೆ ಜಾಗ ಬಿಟ್ಟುಕೊಡುವಂತೆ ಕೇಳಿಕೊಳ್ಳೋಣ’ ಎಂದು ನಿರ್ಮಾಪಕ ಕೆ.ಮಂಜು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ

Vishnuvardhan fans

ಸರ್ಕಾರ ಪರ್ಯಾಯವಾಗಿ ಮೈಸೂರಿನಲ್ಲಿ ಜಾಗ ಕೊಟ್ಟಿದೆ. ಅಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ. ಆದರೆ, ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯಾದ ಜಾಗಕ್ಕೂ ಅಭಿಮಾನಿಗಳಿಗೂ ಭಾವನಾತ್ಮ ಬೆಸುಗೆ ಇದೆ. ಹೀಗಾಗಿ ಆ 10 ಗುಂಟೆ ಜಾಗವನ್ನ ಅಭಿಮಾನಿಗಳಿಗೆ ಕೊಡಿಸುವಲ್ಲಿ ಸರ್ಕಾರ, ಫಿಲ್ಮ್ ಚೇಂಬರ್ ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ದೊಡ್ಡ ಮನಸ್ಸು ಮಾಡಬೇಕು ಎನ್ನುವುದು ಸಮಸ್ತ ಕುಲಕೋಟಿ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕೂಗಾಗಿದೆ. ಮುಂದಿನ ದಿನಗಳಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಮರು ನಿರ್ಮಾಣವಾಗುತ್ತಾ..? ಅಭಿಮಾನಿಗಳ ಕನಸು ನನಸಾಗುತ್ತಾ ಕಾದು ನೋಡಬೇಕು.

TAGGED:bengaluruVishnuvardhan Memorialಬೆಂಗಳೂರುವಿಷ್ಣುವರ್ಧನ್‌ ಸಮಾಧಿ
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
10 minutes ago
Delhi weather
Latest

Delhi Cold Wave | ವರ್ಷದಲ್ಲೇ ಅತ್ಯಂತ ಕನಿಷ್ಠ; 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ

Public TV
By Public TV
25 minutes ago
Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
29 minutes ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
1 hour ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
1 hour ago
Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?