Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?

Cinema

ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?

Public TV
Last updated: August 17, 2025 6:17 pm
Public TV
Share
3 Min Read
Aniruddha
SHARE

ಅಭಿಮಾನಿ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ (Vishnuvardhan) ಸಮಾಧಿ ನೆಲಸಮ ಆಗುತ್ತಿದ್ದಂತೆಯೇ ಭಾರೀ ಆಕ್ರೋಶ ವ್ಯಕ್ತವಾಯಿತು. ನಟ ಸುದೀಪ್ (Sudeep) ಸೇರಿದಂತೆ ಹಲವರು ಸಮಾಧಿ ನೆಲಸಮ ಆದ ಕುರಿತಂತೆ ಆವೇಶ ಭರಿತ ಮಾತುಗಳನ್ನು ಆಡಿದರು. ಸಮಾಧಿಯ ಜಾಗವನ್ನು ದುಡ್ಡು ಕೊಟ್ಟ ಖರೀದಿಸುವ ಮಾತುಗಳನ್ನು ಸುದೀಪ್ ಆಡಿದರು. ಈ ಕುರಿತಂತೆ ಇವತ್ತು ವಿಷ್ಣು ಮನೆಯಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಸುದೀಪ್ ಅವರ ಹೆಸರನ್ನು ತಗೆದುಕೊಳ್ಳದೇ, ಈವರೆಗೂ ಜಾಗ ಖರೀದಿ ಯಾಕೆ ಮಾಡಿಲ್ಲ? ಅಂತ ಅನಿರುದ್ಧ ಪ್ರಶ್ನೆ ಮಾಡಿದರು. ಈ ಮೂಲಕ ಸುದೀಪ್ ಅವರಿಗೆ ಅನಿರುದ್ಧ (Aniruddha) ಟಾಂಗ್ ಕೊಟ್ಟರಾ? ಅನ್ನುವ ಚರ್ಚೆ ಶುರುವಾಗಿದೆ.

ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆದ ಕುರಿತು ಸಾಕಷ್ಟು ಟೀಕೆಗಳು ಕೇಳಿ ಬಂದವು. ಸಮಾಧಿ ನೆಲಸಮ ಆಗಿದ್ದರ ಹಿಂದೆ ಸ್ವತಃ ವಿಷ್ಣುವರ್ಧನ್ ಕುಟುಂಬವೂ ಇದೆ ಅಂತ ಕೆಲವರು ಆರೋಪ ಮಾಡಿದ್ದರು. ಸಮಾಧಿ ಉಳಿಸಿಕೊಳ್ಳಲು ಅಭಿಮಾನಿಗಳು ಮಾಡಿದ ಹೋರಾಟಕ್ಕೆ ವಿಷ್ಣು ಕುಟುಂಬದ ಬೆಂಬಲವಿರಲಿಲ್ಲ ಅನ್ನೋ ಆರೋಪ ಕೂಡ ಕೇಳಿ ಬಂದಿತ್ತು. ದೂರ ಉಳಿಯುವುದಕ್ಕಾಗಿಯೇ ವಿಷ್ಣು ಕುಟುಂಬ ಹಣ ಪಡೆದಿದೆ ಅಂತಾನೂ ಆರೋಪ ಹೊರಸಲಾಗಿತ್ತು. ಈ ಎಲ್ಲದರ ಕುರಿತು ಮಾತನಾಡಲು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಅಭಿಮಾನಿಗಳ ಸಭೆ ಕರೆದಿದ್ದರು. ತಮ್ಮ ಮೇಲಿನ ಆರೋಪಗಳ ಬಗ್ಗೆ ಮಾತಾಡಿದರು. ವಿಷ್ಣು ಸಮಾಧಿ ಕುರಿತಾದ ಹೋರಾಟಕ್ಕೆ ತಮ್ಮ ಬೆಂಬಲವನ್ನೂ ಅವರು ವ್ಯಕ್ತಪಡಿಸಿದರು.

ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿದ್ದ (Abhiman Studio) ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿಷ್ಣುವರ್ಧನ್ ಸಮಾಧಿ ಉಳಿವಿಗಾಗಿ ಹೋರಾಟ ಮಾಡುತ್ತಿದ್ದು, ವಿಷ್ಣು ಅಭಿಮಾನಿಗಳು ಅಕ್ಷರಶಃ ಕಣ್ಣೀರಿಟ್ಟಿದ್ದರು. ಜೊತೆಗೆ ವಿಷ್ಣುವರ್ಧನ್ ಕುಟುಂಬದ ಮೇಲೆಯೇ ಹರಿಹಾಯ್ದಿದ್ದರು. ವಿಷ್ಣು ಸಮಾಧಿ ನೆಲಸಮ ಆಗುವ ವಿಚಾರ, ವಿಷ್ಣು ಕುಟುಂಬಕ್ಕೆ ಮೊದಲೇ ಗೊತ್ತಿತ್ತು. ಅವರು ಅದಕ್ಕಾಗಿ ಹಣ ಪಡೆದಿದ್ದರಿಂದ, ಮೌನಕ್ಕೆ ಜಾರಿದ್ದಾರೆ ಅಂತ ಆರೋಪ ಮಾಡಲಾಗಿತ್ತು. ಸಮಾಧಿ ನೆಲಸಮ ಆಗುವುದರ ಹಿಂದೆ ಸ್ವತಃ ವಿಷ್ಣು ಕುಟುಂಬವೇ ಇದೆ ಅನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತು ಅನಿರುದ್ಧ ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ

 

ವಿಷ್ಣುವರ್ಧನ್ ಅವರ ಸಮಾಧಿಯು ನೆಲಸಮ ಆಗಿದ್ದಕ್ಕೆ ವಿಷ್ಣು ಕುಟುಂಬ ಸಂಭ್ರಮಿಸುತ್ತಿದೆ ಅಂತ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡರು. ಸಮಾಧಿ ಜಾಗಕ್ಕೆ ಕುಟುಂಬದವರು ಕಾಲಿಡದೇ ಇರುವ ಕಾರಣಕ್ಕಾಗಿ, ಕೋರ್ಟ್ನಲ್ಲೂ ತಮ್ಮ ಹೋರಾಟಕ್ಕೆ ಹಿನ್ನೆಡೆ ಆಯಿತು ಅಂತ ಕೆಲ ಅಭಿಮಾನಿಗಳು ಮಾಧ್ಯಮಗಳ ಜೊತೆ ಮಾತಾಡಿದ್ದರು. ಈ ಎಲ್ಲದರ ಕುರಿತು ಅನಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗಿದ್ದು ನಮಗೂ ಅಪಾರ ನೋವನ್ನುಂಟು ಮಾಡಿದೆ. ಸಂಭ್ರಮಿಸುವ ವಿಕೃತ ಮನಸ್ಸು ನಮ್ಮದಲ್ಲ ಅಂತ ಅನಿರುದ್ಧ ತಿರುಗೇಟು ನೀಡಿದ್ದಾರೆ. ಕುಟುಂಬದ ಘನತೆಯನ್ನು ಹಾಳು ಮಾಡಲು ಹೊರಟರೆ, ಕಾನೂನು ಮೂಲಕ ಉತ್ತರ ಕೊಡುತ್ತೇವೆ ಅಂತ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ.

ಬೆಂಗಳೂರಿನ ವಿಷ್ಣುವರ್ಧನ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಭಿಮಾನಿಗಳ ಪ್ರಶ್ನೆಗಳನ್ನು ಆಲಿಸಿದ ಅನಿರುದ್ಧ, ಅಭಿಮಾನಿ ಸ್ಟುಡಿಯೋದಲ್ಲಿ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ತಮ್ಮ ಕುಟುಂಬದ ಬೆಂಬಲವಿದೆ ಎಂದು ಹೇಳಿದ್ದಾರೆ. ಅಭಿಮಾನ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಉಳಿಯಬೇಕು ಅಂತ ಬಯಸಿದ್ದವರಲ್ಲಿ ನಾನೂ ಒಬ್ಬ. ಈಗಲೂ ಹೋರಾಟ ಮುಂದುವರೆಯುತ್ತದೆ ಅಂದರೆ, ಕಂಡಿತಾ ನಮ್ಮ ಕುಟುಂಬದ ಬೆಂಬಲ ಇದ್ದೇ ಇರುತ್ತದೆ ಅಂತ ಅನಿರುದ್ಧ ಘೋಷಿಸಿದ್ದಾರೆ. ಸಮಾಧಿ ನೆಲಸಮ ಆಗಿದ್ದರ ಹಿಂದೆ ತಾವಾಗಲಿ, ತಮ್ಮ ಕುಟುಂಬವಾಗಲಿ ಇಲ್ಲ ಅನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಗೆ ಅಭಿಮಾನ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕು ಅಂತ ತಾವು ಪಟ್ಟಿರುವ ಕಷ್ಟವನ್ನೂ ವಿವರಿಸಿದ್ದಾರೆ. ಅದು ಫಲ ಕೊಡದೇ ಹೋದಾಗ, ಮೈಸೂರಿಗೆ ಶಿಫ್ಟ್ ಮಾಡಲಾಯಿತು ಅಂದಿದ್ದಾರೆ.

 

ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲೂ ವಿಷ್ಣುವರ್ಧನ್ ಅವರ ಸಮಾಧಿ ಇರಬೇಕು ಅಂತ ಇದೇ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಆಗ್ರಹಿಸಿದರು. ಸರಕಾರದ ವಿರುದ್ಧ ಘೋಷಣೆ ಕೂಡ ಕೂಗಿದರು. ತಮಗೆ ನ್ಯಾಯ ಸಿಗಬೇಕು ಅಂತ ಕೆಲವರು ಆಗ್ರಹಿಸಿದರು. ಅಭಿಮಾನಿಗಳ ಎಲ್ಲ ಪ್ರಶ್ನೆಗಳಿಗೂ ಅನಿರುದ್ಧ ಸಮಾಧಾನದಿಂದಲೇ ಉತ್ತರಿಸಿದರು. ಇನ್ಮುಂದೆ ತಮ್ಮ ಕುಟುಂಬದ ವಿರುದ್ಧ ಮಾತಾಡಬೇಕಾದರೆ, ಎಚ್ಚರಿಕೆಯಿಂದ ಮಾತಾಡಿ ಅಂತ ಗುಡುಗಿದರು. ತಮ್ಮ ಕುಟುಂಬದ ವಿರುದ್ಧ ಮಾತಾಡುವ ಅಭಿಮಾನಿಗಳ ವಿರುದ್ಧ ದೂರು ನೀಡುವುದಾಗಿಯೂ ಅವರು ಹೇಳಿದ್ದಾರೆ. ಸಮಾಧಿ ನೆಲಸಮ ವಿಚಾರದಲ್ಲಿ ಸ್ಯಾಂಡಲ್ವುಡ್ ಕೂಡ ಆಕ್ರೋಶ ವ್ಯಕ್ತ ಪಡಿಸಿದೆ. ವಿಷ್ಣು ಕುಟುಂಬ ಕೂಡ ಹೋರಾಟಕ್ಕೆ ಜೊತೆಯಾಗುವುದಾಗಿ ತಿಳಿಸಿದೆ. ಸಮಾಧಿಗಾಗಿ ಮತ್ತೊಂದು ಸುತ್ತಿನ ಹೋರಾಟ ನಡೆಯುತ್ತಾ? ಕಾದು ನೋಡಬೇಕು.

TAGGED:Abhiman StudioAniruddhaVishnuvardhanಅನಿರುದ್ಧಅಭಿಮಾನ್ ಸ್ಟುಡಿಯೋವಿಷ್ಣುವರ್ಧನ್ಸುದೀಪ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

DK Shivakumar 9
Bengaluru City

ವಿಬಿ ರಾಮ್‌ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ

Public TV
By Public TV
22 seconds ago
Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
31 minutes ago
veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
39 minutes ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
1 hour ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
2 hours ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?