ಸೋಲು ಒಪ್ಪಿಕೊಂಡು, ನನ್ನನ್ನು ಬಿಟ್ಟು ಬಿಡಿ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

Public TV
2 Min Read
FotoJet 82

ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek AgniHotri) ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಸಿನಿಮಾಗಳ ಮೇಲೆ ಮುಗಿಬಿದ್ದಿದ್ದರು. ಅದರಲ್ಲೂ ಹಿಂದೂ ವಿರೋಧಿ ನಟರ ಮತ್ತು ನಿರ್ದೇಶಕರ ಸಿನಿಮಾಗಳ ಬಗ್ಗೆ ವಿವಾದ ಆಗುವಂತಹ ಕಾಮೆಂಟ್ ಗಳನ್ನು ಮಾಡುತ್ತಿದ್ದರು. ಹೀಗಾಗಿ ಕಂಗನಾ ರಣಾವತ್ (Kangana Ranaut) ಅವರ ಪಟ್ಟಿಗೆ ಇವರನ್ನು ಸೇರಿಸಲಾಗಿತ್ತು. ಈ ಇಬ್ಬರೂ ಸೇರಿಕೊಂಡು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಮೇಲೆ ಕಾಮೆಂಟ್ ಮೇಲೆ ಕಾಮೆಂಟ್ ಮಾಡುತ್ತಿದ್ದರು.

vivek agnihotri

ಬ್ರಹ್ಮಾಸ್ತ್ರ (Brahmastra) ಸಿನಿಮಾ 250 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ ಎನ್ನುವ ಸುದ್ದಿಯನ್ನು ಕಂಗನಾ ಮತ್ತು ಅಗ್ನಿಹೋತ್ರಿ ಇಬ್ಬರಿಗೂ ಅರಗಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ಬಾಕ್ಸ್ ಆಫೀಸ್ ರಿಪೋರ್ಟ್ ಸುಳ್ಳು ಎಂದು ವಾದಿಸುತ್ತಿದ್ದರು. 650 ಕೋಟಿಗೂ ಅಧಿಕ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಸಿನಿಮಾ 250 ಕೋಟಿ ಗಳಿಸಿದರು ಹೇಗೆ ಗೆದ್ದಂತೆ ಎಂದು ಪ್ರಶ್ನೆಯನ್ನು ಮಾಡಿದ್ದರು. ಹಾಗಾಗಿ ಬ್ರಹ್ಮಾಸ್ತ್ರ ಸಿನಿಮಾ ಗೆದ್ದಿಲ್ಲ ಎನ್ನುವುದು ಅವರ ವಾದವಾಗಿತ್ತು. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

kangana ranaut 2

ಈಗ ಬ್ರಹ್ಮಾಸ್ತ್ರ ಚಿತ್ರವು ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಮೀರಿಸಿದೆ ಅಂತೆ. ಹಾಗಾಗಿಯೇ ಎರಡೂ ಸಿನಿಮಾಗಳನ್ನು ಹೋಲಿಕೆ ಮಾಡುತ್ತಾ, ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ನಿರ್ದೇಶಕನನ್ನು ಟ್ರೋಲ್ ಮಾಡುತ್ತಿದ್ದರು. ಕೊನೆಗೂ ನೀವೇ ಸೋತಿದ್ದು, ರಣಬೀರ್ (Ranbir Kapoor) ಗೆದ್ದರು ಎಂದು ಕಾಮೆಂಟ್ ಮಾಡಲಾಗುತ್ತಿದೆ. ಹಾಗಾಗಿ ಈ ಆಟದಲ್ಲಿ ನಾನಿಲ್ಲ. ನನ್ನನ್ನು ಬಿಟ್ಟು ಬಿಡಿ ಎಂದು ವಿವೇಕ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದೂ ಅವರು ಹೇಳಿದ್ದಾರೆ.

ranbir kapoor 1

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಕಲೆಕ್ಷನ್ ಅನ್ನು ಬ್ರಹ್ಮಸ್ತ್ರಾ ಸಿನಿಮಾ ನಿಜವಾಗಿಯೂ ಮೀರಿಸಿದೆಯಾ? ಈವರೆಗೂ ಅದು 250 ಕೋಟಿಗೂ ಅಧಿಕ ಹಣವನ್ನು ಗಳಿಕೆ ಮಾಡಿದೆಯಾ? ಈ ಕುರಿತು ಅಧಿಕೃತವಾಗಿ ಸಿನಿಮಾ ಟೀಮ್ ಹೇಳದೇ ಇದ್ದರೂ, ಬಾಲಿವುಡ್ ವಿಮರ್ಶೆಕರು ಈ ಕುರಿತಾಗಿ ಸುದ್ದಿಗಳನ್ನು ಮಾಡಿದ್ದಾರೆ. ಹಾಗಾಗಿ ಈ ಪ್ರಮಾಣದಲ್ಲಿ ಹಣ ಬಂದಿದೆ ಎಂದು ಟ್ರೋಲ್ ಮಾಡಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *