Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡೀ ರಾತ್ರಿ ಪ್ರೇಯಸಿ ಶವದ ಜೊತೆ ಕುಳಿತು ಸಿಗರೇಟ್ ಸೇದಿದ್ದ ಹಂತಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಡೀ ರಾತ್ರಿ ಪ್ರೇಯಸಿ ಶವದ ಜೊತೆ ಕುಳಿತು ಸಿಗರೇಟ್ ಸೇದಿದ್ದ ಹಂತಕ

Bengaluru City

ಇಡೀ ರಾತ್ರಿ ಪ್ರೇಯಸಿ ಶವದ ಜೊತೆ ಕುಳಿತು ಸಿಗರೇಟ್ ಸೇದಿದ್ದ ಹಂತಕ

Public TV
Last updated: November 27, 2024 11:12 am
Public TV
Share
2 Min Read
indiranagar vlogger muder case
SHARE

– ಇಂದಿರಾನಗರ ಯುವತಿ ಕೊಲೆ ಪ್ರಕರಣದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ಬಹಿರಂಗ

ಬೆಂಗಳೂರು: ಇಂದಿರಾನಗರದ ಹೋಟೆಲ್‌ನಲ್ಲಿ ಯುವತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಮಾಹಿತಿ ಕಲೆಹಾಕಿದ್ದಾರೆ. ಪ್ರೇಯಸಿ ಹತ್ಯೆ ಮಾಡಿ ಇಡೀ ರಾತ್ರಿ ಆಕೆಯ ಶವದ ಜೊತೆ ಕುಳಿತು ಹಂತಕ ಸಿಗರೇಟ್ ಸೇದಿದ್ದಾನೆ ಎಂಬುದು ತಿಳಿದುಬಂದಿದೆ.

ಎರಡು ದಿನ ಪ್ರೇಯಸಿ ಜೊತೆ ಕಾಲ ಕಳೆದಿದ್ದು ಆ ಬಳಿಕ ಕೊಲೆ ಮಾಡಿದ್ದಾನೆ. ನಿನ್ನೆ ಬೆಳಗ್ಗೆ 8:20 ರ ಸುಮಾರಿಗೆ ರೂಂ ನಿಂದ ಗಾಬರಿಯಲ್ಲೇ ಹೊರಟಿದ್ದಾನೆ. ರೂಂ ನಿಂದ ಹಂತಕ ಹೊರಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Indiranagar Murder copy

ಕೊಲೆ ಬಳಿಕ ಪ್ರೇಯಸಿಯ ಮೃತದೇಹವನ್ನ ಪೀಸ್ ಪೀಸ್ ಮಾಡುವ ಆಲೋಚನೆಯಲ್ಲಿ ಹಂತಕನಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ. ಹೋಟೆಲ್‌ನಲ್ಲೇ ಶವ ಬಿಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ವರೆಗೂ ಹೋಗಿದ್ದಾನೆ. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡ್ಕೊಂಡು ಪರಾರಿಯಾಗಿದ್ದಾನೆ. ಹಂತಕ ಕೇರಳಕ್ಕೆ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಮಾಯ ಅಕ್ಕ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಮತ್ತೊಬ್ಬನ ಜೊತೆ ವಾಸವಾಗಿದ್ದಾರೆ. ಶುಕ್ರವಾರ ಅಕ್ಕನಿಗೆ ಕಾಲ್ ಮಾಡಿ, ‘ಆಫೀಸ್ ಪಾರ್ಟಿ ಇದೆ. ರಾತ್ರಿ ಬರಲ್ಲ’ ಎಂದು ಮಾಯ ಹೇಳಿದ್ದಳು. ಶನಿವಾರ ಕೂಡ ಮೆಸೇಜ್ ಮಾಡಿ, ‘ಇಂದೂ ಪಾರ್ಟಿಯಿದ್ದ ರೂಂಗೆ ಬರಲ್ಲ’ ಎಂದು ತಿಳಿಸಿದ್ದಳು. ಹಂತಕ ಆರನ್ ಹಾಗೂ ಮಾಯ 6 ತಿಂಗಳಿಂದ ಪ್ರೀತಿಯಲ್ಲಿದ್ದರು ಎಂಬುದು ಮಾಯ ಸಹೋದರಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ಸೇರ್ಪಡೆ

ಹೋಟೆಲ್‌ಗೆ ಬರೋಕು ಮುನ್ನ ಹಳೆಯ ಚಾಕುವೊಂದನ್ನ ಹಂತಕ ತಂದಿದ್ದ. ಹೋಟಲ್‌ಗೆ ಬಂದ ಬಳಿಕ ನೈಲಾನ್ ದಾರವನ್ನ ಆನ್‌ಲೈನ್ ಮೂಲಕ ಆರ್ಡರ್ ಮಾಡಿ ತರಿಸಿಕೊಂಡಿದ್ದ. ಹೀಗಾಗಿ, ಪ್ರೇಯಸಿ ಜೊತೆ ಎರಡು ದಿನಗಳ ಕಾಲ ಕಳೆದು ಪ್ರೀ ಪ್ಲಾನ್‌ನಂತೆ ಕೊಲೆ ಮಾಡಿದ್ದಾನೆ. ಕೇರಳ ಸೇರಿದಂತೆ ಹಲವು ಕಡೆ ಹಂತಕನಿಗಾಗಿ ಹುಡುಕಾಟ ನಡೆಸಲಾಗಿದೆ.

ಆರೋಪಿ ಆರವ್ ಹನೋಯ್ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಇಂದಿರಾನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಕೊಲೆ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆರೋಪಿ ಎಸ್ಕೇಪ್ ಆಗಿದ್ದಾನೆ. ಆರೋಪಿ ಎಸ್ಕೇಪ್ ಆದ ಕ್ಯಾಬ್ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಕ್ಯಾಬ್ ಮಾಹಿತಿ ಸಂಗ್ರಹಿಸಿದ್ದಾರೆ. ಆರೋಪಿಯು ಕೊಲೆ ಬಳಿಕ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿದ್ದ.

ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳ ಪರಿಶೀಲನೆ ನಡೆಸಲಾಗಿದೆ. ಆರೋಪಿ ಕ್ಯಾಬ್ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಆರವ್ ಹನೋಯ್ ಹಾಗೂ ಮಾಯಾ ಗೊಗಾಯ್ ಪರಿಚಯದ ಬಗ್ಗೆಯೂ ತನಿಖೆ ನಡೆಸಲಾಗಿದೆ. ಈ ಇಬ್ಬರೂ ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾಗಿದ್ದರು. ಕಳೆದ ಕೆಲ ತಿಂಗಳ ಹಿಂದಷ್ಟೇ ಪರಿಚಯವಾಗಿದ್ದರು. ಇದೇ 23 ರಂದು ಇಂದಿರಾನಗರ ಸರ್ವೀಸ್ ಅಪಾರ್ಟ್ಮೆಂಟ್‌ಗೆ ಬಂದಿದ್ದರು. ಶನಿವಾರದಿಂದ ನಿನ್ನೆ ಬೆಳಗ್ಗೆ ವರೆಗೂ ಆರೋಪಿ ಅಪಾರ್ಟ್ಮೆಂಟ್‌ನಲ್ಲಿದ್ದ.

ಮೂರು ದಿನಗಳ ಅಂತರದಲ್ಲಿ ಮಾಯಾ ಗೊಗೊಯ್ ಕೊಲೆಯಾಗಿದೆ. ಬಳಿಕ ನಿನ್ನೆ ಬೆಳಗ್ಗೆ 8:19 ಕ್ಕೆ ರೂಂನಿಂದ ಆರೋಪಿ ಹೊರ ಬಂದಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಕೊಲೆಯಾದ ಮಾಯಾ ಗೊಗೊಯ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

TAGGED:bengaluruindiranagaraVlogger Muder
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
3 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
3 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
19 minutes ago
UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
40 minutes ago
D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆಗೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
1 hour ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?