ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಲು ಬಯಸಿದರೆ ಅವರು ಒಬ್ಬೊಂಟಿಯಲ್ಲ ಜೊತೆಗೆ ನಾವು ನಿಲ್ಲುತ್ತೇವೆ ಎಂದು ರಾಜ್ಯ ಒಕ್ಕಲಿಗರ ಸಂಘದ (Vokkaliga Sangha ) ನಿರ್ದೇಶಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.
ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು. ಅದಕ್ಕಾಗಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸುತ್ತೇವೆ. ಅವರಿಗೆ ಸಿಎಂ ಆಗಲು ಅವಕಾಶ ಇದುವರೆಗೂ ಸಿಕ್ಕಿಲ್ಲ. ಕಾಂಗ್ರೆಸ್ (Congress) ಪಕ್ಷದ ಏಳಿಗೆಗಾಗಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಆಗಿದ್ದಾರೆ. ಆದರೆ ಡಿಕೆಶಿ ಇದುವರೆಗೂ ಸಿಎಂ ಆಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?
ಶಿವಕುಮಾರ್ ಅವರು ನಮ್ಮ ಸಮುದಾಯದ ಧ್ವನಿಯಾಗಿದ್ದಾರೆ. ನಮ್ಮ ಸಮುದಾಯಕ್ಕೆ ಗೌರವ ಸಿಗಬೇಕಾದರೆ, ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲೇ ಬೇಕು. ಇದು ಮನವಿಯೇ ಹೊರತು ಬೇಡಿಕೆ ಅಲ್ಲ. ಅವರಿಗೆ ಸಿಎಂ ಸ್ಥಾನ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಮುದಾಯದ ಐವರಿಗೆ ಸಚಿವ ಸ್ಥಾನ, 1 ಡಿಸಿಎಂ ಕೊಡಿ – ಮುಸ್ಲಿಂ ಮುಖಂಡರ ಆಗ್ರಹ