ವಿಜಯಪುರ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಮತಯಂತ್ರಗಳಲ್ಲಿ ದೋಷ ಕಂಡು ಬಂದು ವಿಜಯಪುರದ ತಾರಾಪೂರ ಗ್ರಾಮ ಹಾಗೂ ಬೆಳಗಾವಿಯ ಮೀರಾಪೂರಹಟ್ಟಿ ಗ್ರಾಮದಲ್ಲಿ ಮತದಾನ ಸ್ಥಗಿತಗೊಂಡಿದೆ.
ತಾರಾಪೂರ ಗ್ರಾಮದ ಮತಗಟ್ಟೆ ಸಂಖ್ಯೆ 16ರಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದಿದೆ. ಈ ಹಿನ್ನೆಲೆ ಅದನ್ನು ಸರಿಪಡಿಸಲು ಒಂದು ಗಂಟೆ ಸಮಯ ಕೊಡಲು ಅಧಿಕಾರಿಗಳ ಬೇಡಿಕೆ ಇಟ್ಟಿದ್ದಾರೆ. ಆದ್ರೆ ಇದರಿಂದ ರೊಚ್ಚಿಗೆದ್ದ ಮತದಾರರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಚುನಾವಣಾಧಿಕಾರಿಗಳು ಹಾಗೂ ಮತದಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.
ಮೀರಾಪೂರಹಟ್ಟಿ ಗ್ರಾಮದ 169 ನೇ ಬೂತ್ನಲ್ಲಿ ಇವಿಎಂನಲ್ಲಿ ದೋಷ ಉಂಟಾಗಿದ್ದು, ಕಳೆದ ಒಂದು ಗಂಟೆಯಿಂದ ಮತದಾನ ಸ್ಥಗಿತವಾಗಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ.