ಡೆಹ್ರಾಡೂನ್: ಉತ್ತರಾಖಂಡದ (Uttarakhand) ನೈನಿತಾಲ್ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಮೂರ್ಛೆ ಹೋಗಿದ್ದಾರೆ.
ನೈನಿತಾಲ್ನ ಕುಮಾವೂನ್ ವಿಶ್ವವಿದ್ಯಾಲಯದಲ್ಲಿ (Nainital Kumaon University) ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಉಪರಾಷ್ಟ್ರಪತಿ ಧನಕರ್ ಮುಖ್ಯ ಅತಿಥಿಯಾಗಿ 45 ನಿಮಿಷಗಳ ಭಾಷಣ ಮಾಡಿದರು. ಭಾಷಣದ ನಂತರ, ಉಪರಾಷ್ಟ್ರಪತಿ ವೇದಿಕೆಯಿಂದ ಇಳಿದ ತಕ್ಷಣ ಅವರ ಆರೋಗ್ಯ ಏರುಪೇರಾಗಿದ್ದು, ಅವರ ಜೊತೆ ಇದ್ದ ಮಾಜಿ ಸಂಸದ ಡಾ. ಮಹೇಂದ್ರ ಸಿಂಗ್ ಪಾಲ್ ಅವರ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಸ್ಥಳದಲ್ಲೇ ಇದ್ದ ವೈದ್ಯರ ತಂಡ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದೆ. ಇದನ್ನೂ ಓದಿ: ಮಂಗಳೂರಲ್ಲಿ ‘ನೋಂದಣಿ’ ಗೋಲ್ಮಾಲ್ – ಕೋಟಿ ಬೆಲೆಯ ಕಾರಿಗೆ ಲಕ್ಷ ಬೆಲೆಯ ಕಾರಿನ ಮಾಡೆಲ್ ನಂಬರ್
ನಂತರ ಅವರನ್ನು ರಾಜ್ಯಪಾಲ ಗುರ್ಮಿತ್ ಸಿಂಗ್ ಅವರೊಂದಿಗೆ ರಾಜಭವನಕ್ಕೆ ಕರೆದೊಯ್ಯಲಾಯಿತು. ನಂತರ ವೈದ್ಯರು ಉಪರಾಷ್ಟ್ರಪತಿಯವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್ಗೆ ಖರ್ಗೆ ಟಾಂಗ್