Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಮರು ಹಿಂದೂ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮುಸ್ಲಿಮರು ಹಿಂದೂ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

Court

ಮುಸ್ಲಿಮರು ಹಿಂದೂ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

Public TV
Last updated: April 16, 2025 6:31 pm
Public TV
Share
4 Min Read
Supreme Court
SHARE

– ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಆರಂಭ
– ಐತಿಹಾಸಿಕ ಕಟ್ಟಡಗಳಿಗೆ ದಾಖಲೆಗಳಿಲ್ಲ ಹೇಗೆ ನೋಂದಣಿ ಮಾಡುತ್ತೀರಿ?
– ವಕ್ಫ್ ಕಾಯ್ದೆಯಿಂದ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಎಂದ ಅರ್ಜಿದಾರರು
– ಧಾರ್ಮಿಕ ಸಂಸ್ಥೆಯ ಮೇಲೆ ಹಸ್ತಕ್ಷೇಪ ಇಲ್ಲ, ಪಾರದರ್ಶಕತೆ ಉದ್ದೇಶ ಎಂದ ಕೇಂದ್ರ

ನವದೆಹಲಿ: ಮುಸ್ಲಿಮರು (Muslims) ಹಿಂದೂ (Hindu) ದತ್ತಿ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ ಎಂದು ಸುಪ್ರೀಂ ಕೋರ್ಟ್‌ (Supreme Court) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾ. ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿತು.

ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ವಿರುದ್ಧ ಸಲ್ಲಿಸಿದ್ದ ಅರ್ಜಿದಾರರ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಗ್ವಿ, ರಾಜೀವ್ ಧವನ್, ಹುಜೇಫಾ ಅಹ್ಮದಿ ತೀಕ್ಷ್ಣವಾದ ವಾದಗಳನ್ನು ಮಂಡಿಸಿದರು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕಾಯ್ದೆಯನ್ನು ಸಮರ್ಥಿಸಿಕೊಂಡರು.

ಅರ್ಜಿದಾರರು ಕಾಯ್ದೆಯು ಸಂವಿಧಾನದ 14 (ಸಮಾನತೆ), 15 (ತಾರತಮ್ಯ ನಿಷೇಧ), 25 (ಧಾರ್ಮಿಕ ಸ್ವಾತಂತ್ರ್ಯ), 26 (ಧಾರ್ಮಿಕ ಸಂಸ್ಥೆಗಳ ಸ್ವಾಯತ್ತತೆ) ಮತ್ತು 300ಎ (ಆಸ್ತಿ ಹಕ್ಕು) ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು.  ಇದನ್ನೂ ಓದಿ: ರೀಲ್ಸ್ ಕೇಸ್ – ರಜತ್ ಜೈಲಿಗೆ, ವಿನಯ್‌ಗೆ 500 ರೂ. ದಂಡ

Parliament clears Waqf Amendment Bill 128 Ayes 95 noes 0 abstentions Rajya Sabhas 12 hour showdown ends with Waqf Amendment Bills passage 1

ಕಾಯ್ದೆಯ ಕೆಲವು ನಿಬಂಧನೆಗಳು, ವಿಶೇಷವಾಗಿ ‘ವಕ್ಫ್ ಬೈ ಯೂಸರ್’ (ಉಪಯೋಗದಿಂದ ವಕ್ಫ್ ಎಂದು ಗುರುತಿಸುವ ಪರಿಕಲ್ಪನೆ) ರದ್ದುಗೊಳಿಸಿರುವುದು, ದಾಖಲೆ ಇಲ್ಲದ ಐತಿಹಾಸಿಕ ವಕ್ಫ್ ಆಸ್ತಿಗಳನ್ನು ಕಳೆದುಕೊಳ್ಳುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಮಿಯತ್ ಉಲಮಾ-ಎ-ಹಿಂದ್ ಮತ್ತು ಇತರರ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal), ಕಾಯ್ದೆಯ ಸೆಕ್ಷನ್ 3(ಆರ್) ಅನ್ನು ಪ್ರಶ್ನಿಸಿದರು. ವಕ್ಫ್ ದಾನ ನೀಡಲು ವ್ಯಕ್ತಿಯು ಕಳೆದ 5 ವರ್ಷಗಳಿಂದ ಇಸ್ಲಾಂ ಧರ್ಮವನ್ನು ಆಚರಿಸಿರಬೇಕು ಎಂಬ ಷರತ್ತು ಸಂವಿಧಾನದ 25 ಮತ್ತು 26ನೇ ಅನುಚ್ಛೇಧವನ್ನು ಉಲ್ಲಂಘಿಸುತ್ತದೆ. ರಾಜ್ಯವು ಒಬ್ಬ ವ್ಯಕ್ತಿಯ ಧರ್ಮವನ್ನು ಪರೀಕ್ಷಿಸುವ ಹಕ್ಕನ್ನು ಹೇಗೆ ಹೊಂದಿದೆ ಎಂದು ವಾದಿಸಿದರು.

ವಕ್ಫ್ ಬೈ ಯೂಸರ್ ರದ್ದತಿಯನ್ನು ಖಂಡಿಸಿದ ಅವರು, ಶತಮಾನಗಳಿಂದ ವಕ್ಫ್ ಆಗಿ ಉಪಯೋಗದಲ್ಲಿರುವ ಆಸ್ತಿಗಳಿಗೆ ದಾಖಲೆ ಇರುವುದಿಲ್ಲ. ಇಂತಹ ಆಸ್ತಿಗಳನ್ನು ರದ್ದುಗೊಳಿಸುವುದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದರು. ಸೆಕ್ಷನ್ 7(ಎ) ಕುರಿತು ವಾದಿಸಿ ಆಸ್ತಿಗಳ ಸ್ಥಿತಿಯನ್ನು ಪರಿಶೀಲಿಸಲು 20 ವರ್ಷಗಳ ಕಾಲಾವಕಾಶ ಬೇಕಾಗಬಹುದು ಎಂದು ತಿಳಿಸಿದರು.

 

lok sabha waqf bill

 

ಅಭಿಷೇಕ್ ಮನು ಸಿಂಗ್ವಿ ವಾದಿಸಿ, ಕಾಯ್ದೆಯು ದೇಶಾದ್ಯಂತ ವಕ್ಫ್ ಆಸ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು. ವಕ್ಫ್ ಕೌನ್ಸಿಲ್‌ನಲ್ಲಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಸಂವಿಧಾನದ 26ನೇ ನಿಯಮದ ಸ್ಪಷ್ಟ ಉಲ್ಲಂಘನೆ ಎಂದು ಕರೆದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು – ಉರ್ದು ಭಾರತದ ಭಾಷೆ, ಒಂದು ಧರ್ಮಕ್ಕೆ ಸೀಮಿತವಲ್ಲ

ಹುಜೇಫಾ ಅಹ್ಮದಿ ವಾದ ಮಂಡಿಸಿ, ವಕ್ಫ್ ಬೈ ಯೂಸರ್ ಇಸ್ಲಾಂನ ಸ್ಥಾಪಿತ ಆಚರಣೆಯಾಗಿದೆ. ಇದನ್ನು ಕಿತ್ತುಕೊಳ್ಳುವಂತಿಲ್ಲ. ಈ ನಿಬಂಧನೆಯ ರದ್ದತಿಯು ರಾಮಜನ್ಮಭೂಮಿ-ಬಾಬರಿ ಮಸೀದಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ನಿಂದ ಗುರುತಿಸಲ್ಪಟ್ಟ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದರು. ರಾಜೀವ್ ಧವನ್ ಮತ್ತು ಇತರರು ವಾದಿಸಿ, ವಕ್ಫ್ ಆಸ್ತಿಗಳ ಮೇಲಿನ ರಾಜ್ಯದ ಹೆಚ್ಚಿನ ನಿಯಂತ್ರಣವು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತದೆ ಎಂದು ಒತ್ತಿ ಹೇಳಿದರು.

ಅರ್ಜಿದಾರರ ವಾದಗಳಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಾಯ್ದೆಯು ಯಾವುದೇ ಧಾರ್ಮಿಕ ವ್ಯವಸ್ಥೆ ಅಥವಾ ಸಂಸ್ಥೆಯ ಮೇಲೆ ಹಸ್ತಕ್ಷೇಪ ಮಾಡುವುದಿಲ್ಲ. ಇದು ವಕ್ಫ್ ಆಸ್ತಿಗಳ ದುರ್ಬಳಕೆ ತಡೆಯಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ, ತಂತ್ರಜ್ಞಾನ-ಆಧಾರಿತ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ ಎಂದು ಸಮರ್ಥಿಸಿಕೊಂಡರು.

ವಕ್ಫ್ ಬೈ ಯೂಸರ್ ರದ್ದತಿಯ ಬಗ್ಗೆ ವಾದ ಮಂಡಿಸಿದ ಅವರು, ಇದು ದುರ್ಬಳಕೆಯನ್ನು ತಡೆಯಲು ಮಾಡಿರುವ ಕ್ರಮವಾಗಿದೆ. ಆದರೆ, ನ್ಯಾಯಾಲಯದಿಂದ ವಕ್ಫ್ ಎಂದು ಘೋಷಿತವಾದ ಆಸ್ತಿಗಳ ಸ್ಥಿತಿಯನ್ನು ಬದಲಾಯಿಸಲಾಗುವುದಿಲ್ಲ. ಜಂಟಿ ಸಂಸದೀಯ ಸಮಿತಿಯು 38 ಸಭೆಗಳನ್ನು ನಡೆಸಿ, 98.2 ಲಕ್ಷ ಮನವಿ ಪತ್ರಗಳನ್ನು ಪರಿಶೀಲಿಸಿ ಕಾಯ್ದೆಗೆ ಶಿಫಾರಸು ಮಾಡಿದೆ ಎಂದು ತಿಳಿಸಿದರು.

Violent Protests Erupt in Bengal Over Waqf Act Railway Tracks Blocked As Protests

ವಿಚಾರಣೆ ವೇಳೆ ನ್ಯಾಯಧೀಶರು ಹಲವು ಪ್ರಶ್ನೆ ಕೇಳಿದರು. ವಕ್ಫ್ ಬೈ ಯೂಸರ್ ರದ್ದತಿಯಿಂದ ಶತಮಾನಗಳಿಂದ ವಕ್ಫ್ ಆಗಿರುವ ಆಸ್ತಿಗಳಿಗೆ ದಾಖಲೆ ಇಲ್ಲದಿದ್ದರೆ ಏನು ಮಾಡುವಿರಿ? ಇದು ದೊಡ್ಡ ಸಮಸ್ಯೆಯನ್ನು ಉಂಟುಮಾಡಬಹುದು? 13, 14, 15ನೇ ಶತಮಾನಗಳಲ್ಲಿ ನಿರ್ಮಿತವಾದ ಮಸೀದಿಗಳಿಗೆ ಖರೀದಿ ದಾಖಲೆ ತೋರಿಸಲು ಸಾಧ್ಯವಿಲ್ಲ. ಇಂತಹ ಆಸ್ತಿಗಳನ್ನು ಹೇಗೆ ನೋಂದಾಯಿಸುವಿರಿ? ಎಂದು ಎಂದು ಸಿಜೆಐ ಸಂಜೀವ್ ಖನ್ನಾ ಕೇಂದ್ರವನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮೆಹ್ತಾ, ಕಾಯ್ದೆಯು ನ್ಯಾಯವಿಚಾರಣೆಯ ಹಕ್ಕನ್ನು ಕಿತ್ತುಕೊಂಡಿಲ್ಲ ಎಂದು ಉತ್ತರಿಸಿದರು.  ಇದನ್ನೂ ಓದಿ:ರೀಲ್ಸ್ ಕೇಸ್: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ರಜತ್

ಹಿಂಸಾಚಾರದ ಬಗ್ಗೆ ಆತಂಕ: ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ನ್ಯಾಯಾಲಯವು ಆತಂಕ ವ್ಯಕ್ತಪಡಿಸಿತು. ಪ್ರಕರಣವು ನ್ಯಾಯಾಲಯದ ಮುಂದಿರುವಾಗ ಹಿಂಸಾಚಾರ ನಡೆಯುವುದು ತೀರಾ ತೊಂದರೆದಾಯಕ ಎಂದು ಮುಖ್ಯ ನ್ಯಾಯಮೂರ್ತಿ ಖನ್ನಾ ಅಭಿಪ್ರಾಯಪಟ್ಟರು. ಮುರ್ಷಿದಾಬಾದ್‌ನಲ್ಲಿ ಮೂವರು ಸಾವನ್ನಪ್ಪಿದ ಘಟನೆಯನ್ನು ಉಲ್ಲೇಖಿಸಿ, 221 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಯಿತು. ಪ್ರತಿಭಟನೆ ಮೂಲಕ ವ್ಯವಸ್ಥೆಯ ಮೇಲೆ ಒತ್ತಡ ಹೇರಬಹುದು ಎಂದು ಭಾವಿಸಿದ್ದಾರೆ ಎಂದು‌ ಮೆಹ್ತಾ ಹೇಳಿದರು. ಇದಕ್ಕೆ ಆಕ್ರೋಶಗೊಂಡ ಸಿಬಲ್ ಯಾರು ಒತ್ತಡ ಹೇರುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಮಧ್ಯಪ್ರವೇಶ ಮಾಡಿದ ಸಿಜೆಐ ಖನ್ನಾ, ಕಾಯ್ದೆಯಲ್ಲಿ ಹಲವು ಉತ್ತಮ ಅಂಶಗಳಿಗೆ ಸರಿಪಡಿಸಿಕೊಳ್ಳಲು ಇದು ಸಕಾಲ ಎಂದು ಹೇಳಿ ಬಳಿಕ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸದೇ ವಿಚಾರಣೆಯನ್ನು ನಾಳೆಗೆ ಮುಂದೂಡಿತು.

TAGGED:hindukapil sibalmuslimsSupreme Courtwaqfಕಪಿಲ್ ಸಿಬಲ್ಮುಸ್ಲಿಮ್ವಕ್ಫ್‌ಸುಪ್ರೀಂ ಕೋರ್ಟ್ಹಿಂದೂ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
57 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?