Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

Latest

ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

Public TV
Last updated: April 2, 2025 12:18 pm
Public TV
Share
2 Min Read
Waqf Amendment Bill What are key differences between old and new law
SHARE

ನವದೆಹಲಿ: ವಿಪಕ್ಷಗಳು ಮತ್ತು ಮುಸ್ಲಿಮರ (Muslims) ವಿರೋಧದ ನಡುವೆ ಲೋಕಸಭೆಯಲ್ಲಿ (Lokasabha) ಇಂದು ವಕ್ಫ್ ತಿದ್ದುಪಡಿ ಮಸೂದೆ (Waqf Act Amendment Bill ಮಂಡನೆ ಆಗಲಿದೆ. ಮಧ್ಯಾಹ್ನ ಕೇಂದ್ರ  ಸಂಸದೀಯ ವ್ಯವಹಾರಗಳ ಖಾತೆಯ  ಸಚಿವ ಕಿರಣ್ ರಿಜಿಜು ಮಸೂದೆ ಮಂಡಿಸಲಿದ್ದಾರೆ.

ಮಸೂದೆಯನ್ನು ಎನ್‌ಡಿಎ (NDA) ಒಕ್ಕೂಟದ 298 ಸಂಸದರು ಬೆಂಬಲಿಸಿದ್ದಾರೆ. ಇಂದೆ ವೋಟಿಂಗ್ ನಡೆಯೋ ಸಾಧ್ಯತೆ ಹೆಚ್ಚಿರುವ ಕಾರಣ ಎನ್‌ಡಿಎಯ ಎಲ್ಲಾ ಸಂಸದರು ಕಡ್ಡಾಯವಾಗಿ ಕಲಾಪಕ್ಕೆ ಬರಬೇಕೆಂದು ಆಯಾ ಪಕ್ಷಗಳು ವಿಪ್‌ ಜಾರಿ ಮಾಡಿದೆ. ಇದೇ ರೀತಿ ಕಾಂಗ್ರೆಸ್‌ ಸದಸ್ಯರು ಕಡ್ಡಾಯವಾಗಿ ಹಾಜರಾಗಬೇಕೆಂದು ವಿಪ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಇಡೀ ‘ಇಂಡಿಯಾ ಒಕ್ಕೂಟ’ ವಕ್ಫ್‌ ಮಸೂದೆ ವಿರುದ್ಧ ಮತ ಚಲಾಯಿಸುತ್ತೆ: ಸಂಸದ ಪ್ರೇಮಚಂದ್ರನ್‌

ವಕ್ಫ್ ತಿದ್ದುಪಡಿ ಬಿಲ್‌ನಲ್ಲೇನಿದೆ?
ವಕ್ಫ್ ಆಸ್ತಿಗಳ ಸರ್ವೆ ಮತ್ತು ನಿಯಂತ್ರಣ
* ಹಿಂದಿನ ಕಾನೂನು : ಸರ್ವೆಯನ್ನು ರಾಜ್ಯ ಸರ್ಕಾರ ನೇಮಿಸಿದ ಸರ್ವೆ ಆಯುಕ್ತರು ನಡೆಸ್ತಿದ್ದರು. ಈ ಪ್ರಕ್ರಿಯೆಯಲ್ಲಿ ಸರ್ಕಾರದ ನೇರ ಹಸ್ತಕ್ಷೇಪ ಕಡಿಮೆ ಇತ್ತು.
* ಹೊಸ ತಿದ್ದುಪಡಿ : ಸರ್ವೆಗಳನ್ನು ಡಿಸಿಗಳಿಗೆ ವರ್ಗಾಯಿಸಲಾಗಿದೆ. ಡಿಸಿಗಳ ಮೇಲ್ವಿಚಾರಣೆಯಲ್ಲಿ ರಾಜ್ಯದ ಕಂದಾಯ ಕಾನೂನುಗಳಿಗೆ ಅನುಗುಣವಾಗಿ ಸರ್ವೆ ನಡೆಯಲಿದೆ. ಇದರಿಂದ ಸರ್ಕಾರಕ್ಕೆ ವಕ್ಫ್ ಆಸ್ತಿಗಳ ಮೇಲೆ ಹೆಚ್ಚಿನ ನಿಯಂತ್ರಣ ಸಿಗಲಿದೆ. ಇದನ್ನೂ ಓದಿ: ವಕ್ಫ್‌ ಬಿಲ್‌ ಮಂಡನೆ – ಬಿಲ್‌ ಪಾಸ್‌ ಆಗುತ್ತಾ? ಲೋಕಸಭೆಯಲ್ಲಿ ಬಲಾಬಲ ಹೇಗಿದೆ?

ವಕ್ಫ್ ಘೋಷಣೆಗೆ ಷರತ್ತುಗಳು
* ಹಿಂದಿನ ಕಾನೂನು: ವಕ್ಫ್ ಘೋಷಿಸಲು ಯಾವುದೇ ನಿರ್ದಿಷ್ಟ ಅವಧಿಯ ಷರತ್ತು ಇರಲಿಲ್ಲ. ಯಾರಾದರೂ ಮುಸ್ಲಿಂ ವ್ಯಕ್ತಿ ತಮ್ಮ ಆಸ್ತಿಯನ್ನು ವಕ್ಫ್ ಆಗಿ ಘೋಷಿಸಬಹುದಿತ್ತು.
* ಹೊಸ ತಿದ್ದುಪಡಿ: ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷ ಪಾಲಿಸಿದ ವ್ಯಕ್ತಿಯೊಬ್ಬರಿಗೆ ಮಾತ್ರ ವಕ್ಫ್ ಘೋಷಿಸುವ ಅಧಿಕಾರ ನೀಡಲಾಗಿದೆ. ಇದರಿಂದ ದುರುಪಯೋಗ ತಡೆಗಟ್ಟುವ ಉದ್ದೇಶವಿದೆ.

 

ಮಹಿಳೆಯರಿಗೆ ಆಸ್ತಿ ಹಕ್ಕು
* ಹಿಂದಿನ ಕಾನೂನು: ಮಹಿಳೆಯರಿಗೆ ಹಕ್ಕುಗಳನ್ನು ಸ್ಪಷ್ಟವಾಗಿ ಖಾತ್ರಿಪಡಿಸುವ ನಿರ್ದಿಷ್ಟ ಉಲ್ಲೇಖ ಇರಲಿಲ್ಲ.
* ಹೊಸ ತಿದ್ದುಪಡಿ: ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ನಿಬಂಧನೆ ಸೇರಿಸಲಾಗಿದೆ. ಇದು ಲಿಂಗ ಸಮಾನತೆಯತ್ತ ಒಂದು ಹೆಜ್ಜೆ ಎಂದು ಪರಿಗಣನೆ.

ವಕ್ಫ್ ಮಂಡಳಿಯ ರಚನೆ
* ಹಿಂದಿನ ಕಾನೂನು: ಕೇಂದ್ರ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮಹಿಳೆಯರು ಅಥವಾ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಕಡ್ಡಾಯ ನಿಯಮ ಇರಲಿಲ್ಲ.
* ಹೊಸ ತಿದ್ದುಪಡಿ: ಕೇಂದ್ರ ವಕ್ಫ್ ಮಂಡಳಿಯಲ್ಲಿ ಕನಿಷ್ಠ ಇಬ್ಬರು ಮಹಿಳೆಯರು, ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನೇಮಿಸುವುದು ಕಡ್ಡಾಯ. ಇದೇ ರೀತಿ ರಾಜ್ಯ ವಕ್ಫ್ ಮಂಡಳಿಗಳಲ್ಲಿಯೂ ಈ ಬದಲಾವಣೆ ತರಲಾಗಿದೆ. ಇದನ್ನೂ ಓದಿ: ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ

ಲೆಕ್ಕಪರಿಶೋಧನೆ
* ಹಿಂದಿನ ಕಾನೂನು: ವಕ್ಫ್ ಮಂಡಳಿಗಳ ಖಾತೆಗಳ ಲೆಕ್ಕಪರಿಶೋಧನೆಯನ್ನು ಮಂಡಳಿಯೇ ನೇಮಿಸಿದ ಲೆಕ್ಕಪರಿಶೋಧಕರು ಮಾಡುತ್ತಿದ್ದರು. ರಾಜ್ಯ ಸರ್ಕಾರಕ್ಕೂ ಆಡಿಟ್ ಮಾಡುವ ಅವಕಾಶ ಇತ್ತು.
* ಹೊಸ ತಿದ್ದುಪಡಿ: ರಾಜ್ಯ ಸರ್ಕಾರವು ರಚಿಸುವ ಲೆಕ್ಕಪರಿಶೋಧಕರ ಸಮಿತಿಯೇ ಆಡಿಟ್ ನಡೆಸಬೇಕು. ಇದರಿಂದ ಸರ್ಕಾರದ ಮೇಲ್ವಿಚಾರಣೆ ಹೆಚ್ಚಾಗಲಿದೆ.

ಆಸ್ತಿ ನೋಂದಣಿ ಮತ್ತು ಪಾರದರ್ಶಕತೆ
* ಹಿಂದಿನ ಕಾನೂನು: ವಕ್ಫ್ ಆಸ್ತಿಗಳ ನೋಂದಣಿ ಮತ್ತು ವಿವರಗಳ ಸಲ್ಲಿಕೆಗೆ ಕಡ್ಡಾಯ ಸಮಯ ಮಿತಿ ಇರಲಿಲ್ಲ.
* ಹೊಸ ತಿದ್ದುಪಡಿ: ಎಲ್ಲ ವಕ್ಫ್ ಆಸ್ತಿಗಳನ್ನು ಕಾಯಿದೆಯಡಿ ನೋಂದಾಯಿಸುವುದು ಕಡ್ಡಾಯ. 6 ತಿಂಗಳೊಳಗೆ ವಿವರ ಸಲ್ಲಿಸಬೇಕು. ಪ್ರತಿ 5 ವರ್ಷಕ್ಕೊಮ್ಮೆ ಸರ್ವೆ ನಡೆಸಬೇಕು.

TAGGED:bjpcongressmuslimsWaqf Actಕಾಂಗ್ರೆಸ್ಬಿಜೆಪಿಮುಸ್ಲಿಮ್ರಾಜಕೀಯವಕ್ಫ್‌ ಮಸೂದೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
23 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
48 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?