Waqf Land Row | ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌

Public TV
1 Min Read
Vijayapura

– ನೋಟಿಸ್ ಹಿಂಪಡೆಯುವಂತೆ ಸಂಸದ ರಮೇಶ್‌ ಜಿಗಜಿಣಗಿ ಆಗ್ರಹ

ವಿಜಯಪುರ: ಸ್ಮಾರಕಗಳೂ ಸೇರಿದಂತೆ ವಿಜಯಪುರ (Vijayapura) ಜಿಲ್ಲೆಯ 43 ಪ್ರವಾಸಿ ತಾಣಗಳು (Tourist Place) ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್‌ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್‌ ಮಂಡಳಿ (Waqf Board) ನೋಟಿಸ್ ನೀಡಿತ್ತು. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Vijayapura Waqf Board Farmers Protest

ಕಳೆದ ಒಂದು ದಿನದ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ವಿಜಯಪುರದಲ್ಲಿ ಪ್ರವಾಸಿ ತಾಣಗಳಿಗೆ ನೋಟಿಸ್‌ ನೀಡಿರುವುದು ಬೆಳಕಿಗೆ ಬಂದಿದೆ.

ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌ ನೀಡಿದ್ದು, ಇದಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ನೀಡಿರುವ ವಕ್ಫ್‌ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Share This Article